
ಭಿವಾನಿ (ನ.15): ಇಲ್ಲಿನ ಬೊಪಾರಾ ಗ್ರಾಮದ ಸರ್ಕಾರಿ ಶಾಲೆಯೊಂದರ ವಿದ್ಯಾರ್ಥಿಗಳು ತರಗತಿಯಲ್ಲಿ ವಿಜ್ಞಾನ ಶಿಕ್ಷಕಿಯ ಕುರ್ಚಿಯ ಅಡಿ ಬಾಂಬ್ ರೀತಿಯ ಪಟಾಕಿ ಇರಿಸಿ ಸ್ಫೋಟಿಸಿದ ಘಟನೆ ನಡೆದಿದೆ.
ಘಟನೆಯಲ್ಲಿ ಶಿಕ್ಷಕಿ ಹಾಗೂ ಓರ್ವ ವಿದ್ಯಾರ್ಥಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ದುಷ್ಕೃತ್ಯ ನಡೆಸಿದ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ.
ತರಗತಿಯಲ್ಲಿದ್ದ 15 ವಿದ್ಯಾರ್ಥಿಗಳ ಪೈಕಿ ಅಂದು ಹಾಜರಿದ್ದ ಎಲ್ಲಾ 13 ಜನ ಈ ಯೋಜನೆಯಲ್ಲಿ ಭಾಗಿಯಾಗಿದ್ದು, ಒಬ್ಬರು ಸ್ಫೋಟಕ ತಯಾರಿಸಿದರೆ, ಇನ್ನೊಬ್ಬರು ಅದನ್ನು ಕುರ್ಚಿಯ ಕೆಳಗಿರಿಸಿ, ಮತ್ತೊಬ್ಬರು ರಿಮೋಟ್ ಸಹಾಯದಿಂದ ಸ್ಫೋಟಿಸಿದ್ದಾರೆ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ನರೇಶ್ ಮೆಹ್ತಾ ಹೇಳಿದ್ದಾರೆ.
ಕೋವಿಡ್ ವೇಳೆ ನೆರವಾಗಿದ್ದ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಡೊಮಿನಿಕಾ ದೇಶದ ಅತ್ಯುನ್ನತ ಗೌರವ!
‘ಮಕ್ಕಳು ಏನಾದರೂ ತಯಾರಿಸಿ ತೋರಿಸಿದ್ದರೆ ಶ್ಲಾಘಿಸಬಹುದಿತ್ತು. ಆದರೆ ಈ ಪ್ರಕರಣದಲ್ಲಿ ಹಾಗಾಗದು. ವಿದ್ಯಾರ್ಥಿಗಳನ್ನು ಶಾಲೆಯಿಂದಲೇ ಹೊರಹಾಕಲು ಯೋಚಿಸಿದ್ದೆವಾದರೂ ಪೊಷಕರು ಕ್ಷಮೆ ಕೇಳಿದ್ದರಿಂದ ಶಿಕ್ಷೆಯನ್ನು ಅಮಾನತಿಗೆ ಸೀಮಿತಗೊಳಿಸಲಾಗಿದೆ. ಶಿಕ್ಷಕಿ ಕೂಡ ಮಕ್ಕಳನ್ನು ಕ್ಷಮಿಸಿದ್ದಾರೆ’ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ