ಹಥ್ರಾಸ್ ಪ್ರಕರಣ; SP ಸೇರಿ ಐವರು ಪೊಲೀಸರ ಸಸ್ಪೆಂಡ್ ಮಾಡಿದ ಸಿಎಂ ಯೋಗಿ!

Published : Oct 02, 2020, 10:15 PM IST
ಹಥ್ರಾಸ್ ಪ್ರಕರಣ; SP ಸೇರಿ ಐವರು ಪೊಲೀಸರ ಸಸ್ಪೆಂಡ್ ಮಾಡಿದ ಸಿಎಂ ಯೋಗಿ!

ಸಾರಾಂಶ

19ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ವಿರುದ್ಧ ಇಡೀ ದೇಶವೆ ಆಕ್ರೋಶ ವ್ಯಕ್ತಪಡಿಸುತ್ತಿದೆ. ಪೊಲೀಸರ ದುರ್ನಡೆತೆ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದತ್ಯನಾಥ್ ಸರ್ಕಾರದ ವೈಫಲ್ಯ ಕುರಿತು ಪ್ರತಿಭಟನೆಗಳು ನಡೆಯುತ್ತಿದೆ. ಇಷ್ಟು ದಿನ ಮೌನವಾಗಿದ್ದ ಯೋಗಿ ಆದಿತ್ಯನಾಥ್ ಇದೀಗ ಐವರು  ಪೊಲೀಸರನ್ನು ಅಮಾನತು ಮಾಡುಲು ಆದೇಶಿಸಿದ್ದಾರೆ.

ಉತ್ತರ ಪ್ರದೇಶ(ಅ.02): ಹಥ್ರಾಸ್ ಗ್ಯಾಂಗ್ ರೇಪ್ ಅಂಡ್ ಮರ್ಡರ್ ಪ್ರಕರಣ ದೇಶವನ್ನೇ ತಲೆತಗ್ಗಿಸುವಂತೆ ಮಾಡಿದೆ. ಆದರೆ ಉತ್ತರ ಪ್ರದೇಶದ ಪೊಲೀಸರು ಮಾತ್ರ ತಾವಾಡಿದ್ದೇ ಆಟ ಎಂಬಂತೆ ವರ್ತಿಸಿದ್ದರು. ಅತ್ಯಾಚಾರ ಹಾಗೂ ತೀವ್ರವಾಗಿ ಗಾಯಗೊಂಡ  19 ವರ್ಷದ ಬಾಲಕಿ ಆಸ್ಪತ್ರೆಯಲ್ಲಿ ಮೃತಪಟ್ಟ ಬೆನ್ನಲ್ಲೇ ರಾತ್ರೋರಾತ್ರೋ ಪೊಲೀಸರು ಶವಸಂಸ್ಕಾರ ಮಾಡಿದ್ದರು. ಪೋಷಕರನ್ನು ಹತ್ತಿರ ಸೇರಿಸದ ಪೊಲೀಸರ ನಡೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಈ ಕುರಿತು ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಐವರು ಪೊಲೀಸರನ್ನು ಅಮಾನತು ಮಾಡಿದ್ದಾರೆ.

11 ರೇಪುಗಳು ; ಹತ್ತಾರು ಅನುಮಾನಗಳು... ಬೆಚ್ಚಿ ಬೀಳಿಸುವ ಯುಪಿ ರಿಪೋರ್ಟ್ ಕಾರ್ಡ್!.

ಹಥ್ರಾಸ್ ಎಸ್‌ಪಿ ವಿಕ್ರಾಂತ್ ವೀರ್, ಸರ್ಕಲ್ ಆಫೀಸರ್ ರಾಮ್ ಶಬ್ದ್, ಇನ್ಸ್‌ಪೆಕ್ಟರ್ ರಾಮ್ ಕುಮಾರ್ ವರ್ಮಾ, ಸಬ್ ಇನ್ಸ್‌ಪೆಕ್ಟರ್ ಜಗ್‌ವೀರ್ ಸಿಂಗ್ ಹಾಗೂ ಮುಖ್ಯ ಪೇದೆ ಮಹೇಶ್ ಪಾಲ್ ಅಮಾನತು ಮಾಡುವಂತೆ ಯೋಗಿಆದಿತ್ಯನಾಥ್ ಆದೇಶ ಹೊರಡಿಸಿದ್ದಾರೆ.

ಹತ್ರಾಸ್ ಗ್ಯಾಂಗ್‌ ರೇಪ್, ಮೃತ ಸಂತ್ರಸ್ತೆಯ ಪೋಸ್ಟ್‌ ಮಾರ್ಟಂ ರಿಪೋರ್ಟ್ ಬಹಿರಂಗ!...

ಅತ್ಯಾಚಾರಕ್ಕೊಳಗಾದ ಬಾಲಕಿ ಮೃತಪಟ್ಟ ಬೆನ್ನಲ್ಲೇ, ಪೋಷಕರ ವಿರೋಧದ ನಡುವೆ ರಾತ್ರೋ ರಾತ್ರಿ ಪೊಲೀಸರು ಶವಸಂಸ್ಕಾರ ಮಾಡಿದ್ದರು. ಬಾಲಕಿ ಶವವನ್ನು ಪೋಷಕರಿಗೆ ಹಸ್ತಾಂತರಿಸಿದೆ ತಾವೇ ಬೆಂಕಿಹಚ್ಚಿ ಸುಟ್ಟಿದ್ದರು. ಇದು ಸಾಕಷ್ಟು ಅನುಮಾನಕ್ಕೂ ಕಾರಣವಾಗಿತ್ತು. ಈ ರೀತಿ ನಡೆದುಕೊಂಡು ನಿಯಮ ಉಲ್ಲಂಘಿಸಿದ ಪೊಲೀಸರನ್ನು ಅಮಾನತು ಮಾಡುವಂತೆ ಆದಿತ್ಯನಾಥ್ ಆದೇಶ ಹೊರಡಿಸಿದ್ದಾರೆ.

ಆದೇಶಕ್ಕೂ ಮುನ್ನ ಯೋಗಿ ಆದಿತ್ಯನಾಥ್ ಮಹಿಳೆಯ ಸುರಕ್ಷೆತೆಗೆ ಯುಪಿ ಸರ್ಕಾರ ಬದ್ಧವಾಗಿದೆ ಎಂದು ಟ್ವೀಟ್ ಮಾಡಿದ್ದರು. ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿದೆ. ಈ ಶಿಕ್ಷೆ ದೇಶಕ್ಕೆ ಮಾದರಿಯಾಗಲಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದರು. ಮಹಿಳೆಯರು ಯಾವುದೇ ಆತಂಕ ಪಡಬೇಕಿಲ್ಲ ಎಂದಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೀಲ್ಸ್‌ ನೋಡಿ ನೋಡಿ, ಗಂಡ ಮಕ್ಕಳ ಬಿಟ್ಟು ಸೋಶಿಯಲ್ ಮೀಡಿಯಾ ಗೆಳೆಯನಿಗಾಗಿ ಬಸ್ ಹತ್ತಿದ ಮಹಿಳೆ
ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು