ಸ್ಟಾರ್ ಹೋಟೆಲ್‌ ರೀತಿಯ ಆಶ್ರಮದಲ್ಲಿ ಬಾಬಾ ವಾಸ: 121 ಜನ ಸತ್ತರೂ ಕಡಿಮೆಯಾಗದ ಬಾಬಾ ಜನಪ್ರಿಯತೆ

Published : Jul 06, 2024, 11:14 AM IST
ಸ್ಟಾರ್ ಹೋಟೆಲ್‌ ರೀತಿಯ ಆಶ್ರಮದಲ್ಲಿ ಬಾಬಾ ವಾಸ:  121 ಜನ ಸತ್ತರೂ ಕಡಿಮೆಯಾಗದ ಬಾಬಾ ಜನಪ್ರಿಯತೆ

ಸಾರಾಂಶ

121 ಜನರ ಬಲಿಪಡೆದ ಹಾಥ್ರಸ್ ಸತ್ಸಂಗಕ್ಕೆ ಕಾರಣನಾದ ಭೋಲೆಬಾಬಾ ಪಂಚತಾರಾ ಹೋಟೆಲ್‌ಗಿಂತ ಏನೂ ಕಮ್ಮಿ ಇಲ್ಲದ ಆಶ್ರಮದಲ್ಲಿ ವಾಸ ಮಾಡುತ್ತಿದ್ದಾರೆ ಎಂದು ಕೆಲ ಭಕ್ತರು ಹೇಳಿದ್ದಾರೆ.

ಕಾನ್ಪುರ/ನೋಯ್ಡಾ: 121 ಭಕ್ತರನ್ನು ಬಲಿಪಡೆದ ಹಾಥ್ರಸ್‌ ಭೀಕರ ಕಾಲ್ತುಳಿತದ ಬಳಿಕವೂ ಭೋಲೆ ಬಾಬಾ ಅವರ ಮೇಲಿನ ಭಕ್ತಿಯೇನೂ ಕಡಿಮೆ ಆಗಿಲ್ಲ. ಭಕ್ತರು ಭೋಲೆ ಭಾಬಾನನ್ನು ದೇವರ ಸಂದೇಶವಾಹಕ, ಕಾಯಿಲೆಗಳನ್ನು ಗುಣಪಡಿಸುವ ಮಾಂತ್ರಿಕ ಎಂದೆಲ್ಲ ಹೊಗಳುತ್ತಾರೆ.

ಭೋಲೆ ಬಾಬಾ ಬಗ್ಗೆ ಮಾಧ್ಯಮಗಳು ಹಲವರನ್ನು ಮಾತನಾಡಿಸಿವೆ. ಆಗ ಹತ್ರಾಸ್‌ನ 33 ವರ್ಷದ ವಕೀಲೆ ಸೀಮಾ ಮಾತನಾಡಿ, 'ಸೂರಜ್‌ಪಾಲ್ ಸಿಂಗ್ ಮನುಷ್ಯನಲ್ಲ, ಅವರು ದೇವರ ಸಂದೇಶವಾಹಕ. ಅವರೊಬ್ಬ ದೇವರ ಅವತಾರ' ಎಂದಿದ್ದಾರೆ. ಭೋಲೆ ಬಾಬಾ ಆಶೀರ್ವಾದ ಇಲ್ಲದಿದ್ದರೆ ತಾನು ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರಲಿಲ್ಲ ಎಂದು 18 ವರ್ಷದ ಹಿಮಾಂಶು  ನಂಬಿದ್ದಾರೆ.

ಇನ್ನು ಸೂರಜ್‌ಪುರದ ಗೃಹಿಣಿ ಮಾತನಾಡಿ, ಔಷಧಿಗಳು ಮತ್ತು ವೈದ್ಯರು ವಿಫಲವಾದಾಗ, ಭೋಲೆಬಾಬಾ ಅವರ ಸತ್ಸಂಗದ ಪವಿತ್ರ ನೀರು ಪುತ್ರಿ ನೇಹಾ ಅವರನ್ನು ಗುಣಪಡಿಸಿತು ಎಂದಿದ್ದಾರೆ. ಇನ್ನು ಸೇವಾದಾರ ಭಕ್ತನೊಬ್ಬ ಮಾತನಾಡಿ, ಬಾಬಾ ಅವರ ಪಾದಧೂಳಿ ತುಂಬಾ ಪವಿತ್ರ. ಅವರ ಪಾದಧೂಳಿ ಸ್ಪರ್ಶಿಸಿ ಅನೇಕರು ಗುಮುಖರಾಗಿದ್ದಾರೆ ಎಂದು ಹೇಳಿದ. ಇದೇ ಪಾದಧೂಳಿ ಸ್ಪರ್ಶಿಸಲು ಹೋಗಿಯೇ ಹಾಥ್ರಸ್‌ನಲ್ಲಿ ಕಾಲ್ತುಳಿತ ಸಂಭವಿಸಿತು ಎಂಬುದು ಇಲ್ಲಿ ಗಮನಾರ್ಹ.

ಆಜ್‌ ಪ್ರಳಯ್‌ ಆಯೇಗಿ ಎಂದಿದ್ದ ಭೋಲೆಬಾಬಾ: ಇದಾಗಿ ಕೆಲವೇ ಕ್ಷಣದಲ್ಲಿ ಕಾಲ್ತುಳಿತ ದುರಂತ ನಡಿತು ಎಂದ ಭಕ್ತ

ಸ್ಟಾರ್ ಹೋಟೆಲ್‌ ರೀತಿಯ ಆಶ್ರಮದಲ್ಲಿ ಬಾಬಾ ವಾಸ

ಉತ್ತರ ಪ್ರದೇಶದ ಕಾನ್ಪುರದಿಂದ 25 ಕಿ.ಮೀ. ದೂರದಲ್ಲಿ ಬಾಬಾ ಭವ್ಯ ಆಶ್ರಮವಿದೆ. ಇದು ಪಂಚತಾರಾ ಹೋಟೆಲ್‌ಗಿಂತ ಏನೂ ಕಮ್ಮಿ ಇಲ್ಲ ಎಂದು ಕೆಲವು ಭಕ್ತರು ಹೇಳಿದ್ದಾರೆ. ಆಶ್ರಮ ಸಂಪೂರ್ಣ ಹವಾನಿಯಂತ್ರಿತವಾಗಿದೆ. ಎಲ್ಲಾ ಕೋಣೆಗಳಲ್ಲಿ ಕೂಲರ್‌ ಅಳವಡಿಸಲಾಗಿದೆ. ಹೊರಗೆ ಬಾಲ್ಕನಿಗಳಲ್ಲಿ ಫ್ಯಾನ್‌ ಹಾಗೂ ಕೂಲರ್‌ ಹಾಕಲಾಗಿದೆ. ಬಾಬಾ ಸತ್ಸಂಗಕ್ಕೆ ಬಂದಾಗ ಝಳ ಆಗಬಾರದು ಎಂದು ಸತ್ಸಂಗ ಹಾಲ್‌ನಲ್ಲೂ ಸಂಪೂರ್ಣ ಎಸಿ ಹಾಕಲಾಗಿದ್ದು, ಹಾಲ್ ವೈಭವೋಪೇತವಾಗಿದೆ ಎಂದು ತಿಳಿಸಿದ್ದಾರೆ.

ಆದರೆ ಕೆಲವು ಭಕ್ತರು ಮಾತನಾಡಿ, ಬಾಬಾ ಸರಳ ಜೀವನ ನಡೆಸುತ್ತಾರೆ. ಯಾವ ಭಕ್ತರಿಂದಲೂ ದೇಣಿಗೆ, ದಕ್ಷಿಣೆ ಕೇಳುವುದಿಲ್ಲ ಎಂದಿದ್ದಾರೆ.

ಹಾಥ್ರಸ್ ಕಾಲ್ತುಳಿತ ದುರಂತ: ಹಸುಗೂಸಿನ ಮೃತದೇಹ ಕಂಡು ಶವಾಗಾರ ಸಿಬ್ಬಂದಿಯೇ ಕಣ್ಣೀರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Vande Mataram ಎರಡು ಪದಗಳ ಅರ್ಥ ವಿವರಿಸಿದ ಇಕ್ರಾ ಹಸನ್: ಸಂಸದೆಯ ಮಾತು ವೈರಲ್
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?