
ನವದೆಹಲಿ(ಡಿ. 13) ಕೃಷಿ ಕಾಯಿದೆ ವಿರೋಧಿಸಿ ಆರಂಭಗೊಂಡ ರೈತರ ಪ್ರತಿಭಟನೆ ರಾಜಕಾರಣದ ರೂಪ ಪಡೆದುಕೊಂಡು ದಿನಗಳೆ ಕಳೆದಿವೆ. ಇದೀಗ ಅಖಾಡಕ್ಕೆ ಸಮಾಜವಾದಿ ಪಾರ್ಟಿಯೂ ಧುಮುಕಿದೆ.
ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿರುವವರಲ್ಲಿ ನಕ್ಸಲರು ಮತ್ತು ದೇಶದ್ರೋಹಿಗಳನ್ನು ಕಾಣುತ್ತಿದ್ದೇವೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಆದರೆ ದೇಶ ಕಾಯುತ್ಥೇವೆ ಎಂದು ಬಡಬಡಿಸಿಕೊಳ್ಳುತ್ತ ಸಾವರ್ಕರ್ ಮತ್ತು ಗೋಡ್ಸೆ ಡಿಎನ್ಎ ಇರುವವರು ಇಂಥ ಮಾತು ಆಡುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ವಕ್ತಾರ ಸುನೀಲ್ ಸಿಂಗ್ ಸಜ್ಜನ್ ಹೇಳಿದ್ದಾರೆ.
ಕರ್ನಾಟಕದ ಸಾರಿಗೆ ನೌಕರರ ಪ್ರತಿಭಟನೆ ಎಲ್ಲಿಗೆ ಬಂತು?
ಜಿಲ್ಲಾ ಕೇಂದ್ರಗಳಳ್ಲಿ ರೈತರ ಜತೆ ಸೇರಿ ಪ್ರತಿಭಟನೆ ಮಾಡಲು ಸಮಾಜವಾದಿ ಪಕ್ಷದ ಅಧ್ಯಕ್ಷ ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಕಾರ್ಯಕರ್ತರಿಗೆ ತಿಳಿಸಿದ್ದಾರೆ.
ನಮ್ಮ ಪಕ್ಷ ಆಯಾ ಜಿಲ್ಲಾ ಕೇಂದ್ರದಲ್ಲಿ ರೈತರಿಗೆ ಬೆಂಬಲವಾಗಿ ನಿಂತು ಶಾಂತಿಯುತ ಪ್ರತಿಭಟನೆ ಮಾಡಲಿದೆ. ಕೇಂದ್ರ ಸರ್ಕಾರ ರೈತ ವಿರೋಧಿ ನೀತಿ ಕೈಬಿಡಬೇಕು ಎಂದು ಸಮಾಜವಾದಿ ಪಕ್ಷ ಒತ್ತಾಯ ಮಾಡಿದೆ. ಕೇಂದ್ರ ಸರ್ಕಾರ ಮತ್ತು ರೈತ ಮುಖಂಡರ ನಡುವೆ ಮಾತುಕತೆ ನಡೆಯುತ್ತಿದ್ದು ಯಾವುದು ಫಲ ಕೊಟ್ಟಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ