ಎಚ್. ಡಿ. ದೇವೇಗೌಡ ದಂಪತಿಗೆ ಕೊರೋನಾ: ಮಾಜಿ ಪಿಎಂಗೆ ಮೋದಿ ವಿಶೇಷ ಆಫರ್!

Published : Mar 31, 2021, 02:11 PM ISTUpdated : Mar 31, 2021, 02:41 PM IST
ಎಚ್. ಡಿ. ದೇವೇಗೌಡ ದಂಪತಿಗೆ ಕೊರೋನಾ: ಮಾಜಿ ಪಿಎಂಗೆ ಮೋದಿ ವಿಶೇಷ ಆಫರ್!

ಸಾರಾಂಶ

ಎಚ್. ಡಿ. ದೇವೇಗೌಡ ದಂಪತಿಗೆ ಕೊರೋನಾ| ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ| ಮೋದಿ ಕೊಟ್ಟ ಆಫರ್‌ಗೆ ಕೃತಜ್ಷತೆಗಳೆಂದ ಎಚ್‌ಡಿಡಿ

ಬೆಂಗಳೂರು(ಮಾ.31): ಕೊರೋನಾ ಅಬ್ಬರ ರಾಜ್ಯ ದೇಶವನ್ನು ಮತ್ತೆ ಚಿಂತೆಗೀಡು ಮಾಡಿದೆ. ಒಂದನೇ ಅಲೆ ತಗ್ಗುತ್ತಿದ್ದ ಸಂದರ್ಭದಲ್ಲಿ ಎರಡನೇ ಅಲೆ ಎದ್ದಿರುವುದು ಗಾಯದ ಮೇಲೆ ಬರೆ ಎಳೆಎದಂತಾಗಿದೆ. ಸದ್ಯ ಮಾಜಿ ಪಿಎಂ ಹಾಗು ಜೆಡಿಎಸ್‌ ಹಿರಿಯ ನಾಯಕ ಎಚ್‌. ಡಿ. ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮರಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ಹೀಗಿರುವಾಗ ಪ್ರಧಾನಿ ಮೋದಿ ಮಾಜಿ ಪಿಎಂಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಹೌದು ತನಗೆ ಹಾಗೂ ತಮ್ಮ ಪತ್ನಿಗೆ ಕೊರೋನಾ ಸೋಂಕು ತಗುಲಿದೆ ಎಂದು ಖುದ್ದು ಎಚ್. ಡಿ. ದೇವೇಗೌಡ ಅವರೇ ಟ್ವೀಟ್ ಮಾಡಿದ್ದರು. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ದೇವೇಗೌಡರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ 'ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರಿಗೆ ಕರೆ ಮಾಡಿ ಅವರ ಹಾಗೂ ಅವರ ಪತ್ನಿಯ ಆರೋಗ್ಯ ವಿಚಾರಿಸಿದೆ. ಇಬ್ಬರೂ ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ' ಎಂದಿದ್ದರು.

ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡ, ಪತ್ನಿ ಚೆನ್ನಮ್ಮಗೆ ಕೊರೋನಾ!

ಇತ್ತ ಮಾಜಿ ಪ್ರಧಾನಿ ದೇವೇಗೌಡ ಕೂಡಾ ಪಿಎಂ ಮೋದಿ ಕರೆ ಬಂದ ಬೆನ್ನಲ್ಲೇ ಟ್ವೀಟ್ ಮಾಡಿ ಧನ್ಯವಾದ ತಿಳಿಸಿದ್ದಾರೆ. ದೇವೇಗೌಡರು ತಮ್ಮ ಟ್ವೀಟ್‌ನಲ್ಲಿ 'ನನಗೆ ಕರರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ನನ್ನ ಕೃತಜ್ಞತೆಗಳು. ನನ್ನ ಆಯ್ಕೆಯ ನಗರದ ಯಾವುದೇ ಆಸ್ಪತ್ರೆಯಲ್ಲಾದರೂ ಚಿಕಿತ್ಸೆ ಪಡೆಯಿರಿ ಎಂದು ಅವರು ಕೊಟ್ಟ ಆಫರ್‌ನಿಂದ ಬಹಳ ಪ್ರಭಾವಿತನಾದೆ. ಬೆಂಗಳೂರಿನಲ್ಲಿ ನನ್ನನ್ನು ತುಂಬಾ ಚೆನ್ನಾಗಿ ನೋಡಿಕೊಳ್ಳಲಾಗುತ್ತದೆ ಎಂಬ ಆಶ್ವಾಸನೆ ಅವರಿಗೆ ನೀಡಿದ್ದು, ನನ್ನ ಆರೋಗ್ಯದ ಬಗ್ಗೆ ಮಾಹಿತಿ ನೀಡುತ್ತಿರುತ್ತೇನೆಂಬ ಭರವಸೆಯನ್ನೂ ನೀಡಿದ್ದೇನೆ' ಎಂದಿದ್ದಾರೆ.

ಇನ್ನು ಇತ್ತ ಮಾಜಿ ಸಿಎಂ, ಎಚ್. ಡಿ. ದೇವೇಗೌಡರ ಶಿಷ್ಯ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ ಸಿದ್ದರಾಮಯ್ಯ ಕೂಡಾ ಟ್ವೀಟ್ ಮಾಡಿ ದೇವೇಗೌಡ ದಂಪತಿ ಶೀಘ್ರ ಗುಣಮುಖರಾಗಲಿ ಎಂದು ಆಶಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್