ಕೊರೋನಾಗೆ ದೇಶದಲ್ಲಿ ಮೊದಲ ಬಲಿ?, ಚೀನಾದಿಂದ ಮರಳಿದ ವ್ಯಕ್ತಿ ಸಾವು!

Published : Feb 19, 2020, 07:15 AM ISTUpdated : Feb 19, 2020, 08:55 AM IST
ಕೊರೋನಾಗೆ ದೇಶದಲ್ಲಿ ಮೊದಲ ಬಲಿ?, ಚೀನಾದಿಂದ ಮರಳಿದ ವ್ಯಕ್ತಿ ಸಾವು!

ಸಾರಾಂಶ

ಮಾರಕ ಕೊರೋನಾಗೆ ದೇಶದಲ್ಲಿ ಮೊದಲ ಬಲಿ?| ಪುದುಕೋಟ್ಟೈ ವ್ಯಕ್ತಿ ಸಾವಿನ ಕಾರಣ ಪರಿಶೀಲನೆ| ಚೀನಾದಿಂದ ತಮಿಳುನಾಡಿಗೆ ಮರಳಿದ ವ್ಯಕ್ತಿ ಸಾವು| 

ಪುದುಕೋಟ್ಟೈ[ಫೆ.19]: ಚೀನಾದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಮಾರಕ ಕೊರೋನಾ ವೈರಸ್‌ ಸೋಂಕು ದೇಶವನ್ನು ಪ್ರವೇಶಿಸದಂತೆ ನೋಡಿಕೊಳ್ಳಲು ಸರ್ಕಾರಗಳು ಕಠಿಣ ಕ್ರಮಗಳನ್ನು ಕೈಗೊಂಡಿರುವಾಗಲೇ, ಚೀನಾದಿಂದ ಇತ್ತೀಚೆಗೆ ತಮಿಳುನಾಡಿಗೆ ಮರಳಿದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಕೊರೋನಾ ವೈರಾಣು ಸೋಂಕಿನಿಂದಲೇ ಅವರು ಸಾವನ್ನಪ್ಪಿರಬಹುದು ಎಂಬ ಆತಂಕ ವ್ಯಕ್ತವಾಗಿದ್ದು, ಇದು ದೇಶದ ಮೊದಲ ಕೊರೋನಾ ಸಾವು ಎಂಬ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿ ಭೀತಿಗೆ ಕಾರಣವಾಗಿದೆ.

ಚೀನಾದಲ್ಲಿ ರೆಸ್ಟೋರೆಂಟ್‌ ಒಂದನ್ನು ನಡೆಸುತ್ತಿರುವ ತಮಿಳುನಾಡಿನ ಪುದುಕೋಟ್ಟೈ ಜಿಲ್ಲೆಯ ಕೊಥಾಯಿಮಂಗಳಂ ಗ್ರಾಮದ 42 ವರ್ಷದ ಶಕ್ತಿ ಕುಮಾರ್‌ ಅವರು ಜಾಂಡೀಸ್‌ ಹಿನ್ನೆಲೆಯಲ್ಲಿ ಇತ್ತೀಚೆಗೆ ತವರಿಗೆ ಮರಳಿದ್ದರು. ಗ್ರಾಮದಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಚೀನಾದ ತಮ್ಮ ರೆಸ್ಟೋರೆಂಟ್‌ನಲ್ಲಿ ಸಿಬ್ಬಂದಿ ಕೊರತೆ ಉಂಟಾಗಿದೆ ಎಂಬ ವಿಷಯ ತಿಳಿದು ಇತ್ತೀಚೆಗೆ ಚೀನಾಕ್ಕೆ ತೆರಳಿದ್ದರು. ವಾಪಸ್‌ ಬಂದಾಗ ಅವರ ಆರೋಗ್ಯ ತೀವ್ರ ರೀತಿಯಲ್ಲಿ ಹದಗೆಟ್ಟಿತ್ತು. ಮದುರೈನ ಖಾಸಗಿ ಆಸ್ಪತ್ರೆಗೆ ದಾಖಲಾದರು. ಆದರೆ ಶನಿವಾರ ಕೊನೆಯುಸಿರೆಳೆದಿದ್ದಾರೆ.

ಹೋಗುವುದು ಇನ್ನೆಲ್ಲಿ?: ವುಹಾನ್ ಆಸ್ಪತ್ರೆ ಮುಖ್ಯಸ್ಥನೇ ಕೊರೋನಾ ವೈರಸ್‌ಗೆ ಬಲಿ!

ಮೊದಲೇ ಅನಾರೋಗ್ಯಪೀಡಿತರಾಗಿದ್ದ ಶಕ್ತಿಕುಮಾರ್‌ ಅವರ ದೇಹ ಸ್ಥಿತಿ ಕೊರೋನಾ ವೈರಸ್‌ ಸೋಂಕಿನಿಂದ ವಿಷಮಗೊಂಡು ಸಾವು ಸಂಭವಿಸಿರಬಹುದು ಎಂದು ಸಾರ್ವಜನಿಕ ಆರೋಗ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಶಕ್ತಿ ಅವರ ವೈದ್ಯಕೀಯ ದಾಖಲೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಶಕ್ತಿ ಅವರ ಗ್ರಾಮದಲ್ಲಿ ಅಧಿಕಾರಿಗಳ ದಂಡೇ ಬೀಡುಬಿಟ್ಟಿದೆ.

ಆದರೆ ಶಕ್ತಿ ಅವರ ಕುಟುಂಬ ಹೇಳುವುದೇ ಬೇರೆ. ಕಳೆದ ಎರಡು ವರ್ಷಗಳಿಂದ ಅವರು ಶ್ವಾಸಕೋಶ ಹಾಗೂ ಯಕೃತ್‌ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ತಂಜಾವೂರಿನಲ್ಲಿ ಚಿಕಿತ್ಸೆ ಪಡೆದಿದ್ದರು. ಇತ್ತೀಚೆಗೆ ಜಾಂಡೀಸ್‌ ಕೂಡ ಕಾಣಿಸಿಕೊಂಡಿತ್ತು. ಅವರ ಸಾವಿಗೆ ಬೇರೆ ಯಾವುದೇ ಕಾರಣವಿಲ್ಲ. ಆದರೆ ಸಾಮಾಜಿಕ ಜಾಲತಾಣಗಳು ವಿಷಯಾಂತರ ಮಾಡಿವೆ ಎಂದು ಕುಟುಂಬದ ಮೂಲಗಳು ದೂಷಿಸಿವೆ.

- ಚೀನಾದಲ್ಲಿ ರೆಸ್ಟೋರೆಂಟ್‌ ನಡೆಸುತ್ತಿದ್ದ ಶಕ್ತಿ ಕುಮಾರ್‌ಗೆ ಜಾಂಡೀಸ್‌

- ಭಾರತಕ್ಕೆ ಬಂದು ಚಿಕಿತ್ಸೆ ಪಡೆದು ಮರಳಿದ್ದ ಶಕ್ತಿಗೆ ಮತ್ತೆ ಅನಾರೋಗ್ಯ

- ಜಾಂಡೀಸ್‌ ಜೊತೆ ಕೊರೋನಾ ವೈರಸ್‌ ಸೇರಿ ಸಾವನ್ನಪಿರುವ ಶಂಕೆ

ಹೋಗುವುದು ಇನ್ನೆಲ್ಲಿ?: ವುಹಾನ್ ಆಸ್ಪತ್ರೆ ಮುಖ್ಯಸ್ಥನೇ ಕೊರೋನಾ ವೈರಸ್‌ಗೆ ಬಲಿ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಗರ್ಭ ಶ್ರೀಮಂತನೆಂದು ಎಂಜಿನಿಯರ್‌ನನ್ನ ಮದುವೆಯಾದಳು... ಫಸ್ಟ್‌ ನೈಟ್‌ನಲ್ಲೇ ಬಯಲಾಯ್ತು ಕರಾಳ ಸತ್ಯ!
ನನ್ನ ಜೊತೆಗೂ ಬಾ: ಗೆಳೆಯನ ಗರ್ಲ್‌ಫ್ರೆಂಡ್‌ಗೆ ಸಂದೇಶ: ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದು ಪೀಸ್ ಪೀಸ್ ಮಾಡಿದ