ದೇಶಾದ್ಯಂತ ಹವಾಮಾನ ವೈಪರೀತ್ಯ: ಯುಪಿ, ಬಿಹಾರದಲ್ಲಿ ಬಿಸಿಗಾಳಿಗೆ 100 ಕ್ಕೂ ಅಧಿಕ ಮಂದಿ ಬಲಿ, ಹಲವೆಡೆ ಭೀಕರ ಮಳೆ

Published : Jun 19, 2023, 02:17 PM ISTUpdated : Jun 19, 2023, 02:18 PM IST
ದೇಶಾದ್ಯಂತ ಹವಾಮಾನ ವೈಪರೀತ್ಯ: ಯುಪಿ, ಬಿಹಾರದಲ್ಲಿ ಬಿಸಿಗಾಳಿಗೆ 100 ಕ್ಕೂ ಅಧಿಕ ಮಂದಿ ಬಲಿ, ಹಲವೆಡೆ ಭೀಕರ ಮಳೆ

ಸಾರಾಂಶ

ಉತ್ತರಪ್ರದೇಶ ಹಾಗೂ ಬಿಹಾರದಲ್ಲಿ ಬಿಸಿಗಾಳಿಗೆ 100 ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಇನ್ನು, ಹಲವು ರಾಜ್ಯಗಳಲ್ಲಿ ಮಳೆಯಿಂದಾಗಿ ತೀವ್ರ ತೊಂದರೆಯಾಗಿದೆ. 

ನವದೆಹಲಿ (ಜೂನ್ 19, 2023): ಒಂದು ಕಡೆ ರಾಜ್ಯದಲ್ಲಿ ಜೂನ್‌ ತಿಂಗಳು 3 ವಾರ ಆಗುತ್ತಾ ಬಂದ್ರೂ ಮಳೆನೇ ಶುರುವಾಗಿಲ್ಲ ಅನ್ನೋದು ಬಹುತೇಕ ಎಲ್ಲ ರೈತರ ಹಾಗೂ ಜನಸಾಮಾನ್ಯರ ಅಳಲು. ಆದರೆ, ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಆಗಮಿಸುವ ಮೊದಲೇ ಮಳೆ ಹೆಚ್ಚಾಗಿದೆ. ಇನ್ನು, ಕೆಲವೆಡೆ ಬಿಸಿಗಾಳಿಗೆ 100 ಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ. 

ಹೌದು, ಹವಾಮಾನ ವೈಪರೀತ್ಯ ದೇಶದ ಮೇಲೂ ಪರಿಣಾಮ ಬೀರುತ್ತಿದೆ. ಕೆಲ ರಾಜ್ಯಗಳಲ್ಲಿ ವಿಪರೀತ ಉಷ್ಣ ತಾಪಮಾನ ಹಾಗೂ ಉಷ್ಣ ಮಾರುತಗಳ ಹಾವಳಿ ಹೆಚ್ಚಾಗಿದೆ. ಇನ್ನು, ಕೆಲ ರಾಜ್ಯಗಳಲ್ಲಿ ಮುಂಗಾರು ಪ್ರವೇಶವಾಗದಿದ್ದರೂ ವರುಣನ ಆರ್ಭಟ ಹೆಚ್ಚಾಗಿದೆ. ಉತ್ತರಪ್ರದೇಶ ಹಾಗೂ ಬಿಹಾರದಲ್ಲಿ ಬಿಸಿಗಾಳಿಗೆ 100 ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಈ ಪೈಕಿ ಯುಪಿಯ ಬಲ್ಲಿಯಾದ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲೇ 3 ದಿನದಲ್ಲಿ 54 ಮಂದಿ ಮೃತಪಟ್ಟಿದ್ದಾರೆ. 

ಇದನ್ನು ಓದಿ: ಯುಪಿಯಲ್ಲಿ ತೀವ್ರ ಶಾಖದ ಹೊಡೆತ: 3 ದಿನದಲ್ಲಿ 54 ಜನರ ಸಾವು, 400 ಜನ ಆಸ್ಪತ್ರೆಗೆ ದಾಖಲು

ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲಾ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಲ್ಲಿ 54 ಜನರು ಮೃತಪಟ್ಟಿದ್ದಾರೆ ಮತ್ತು ಸುಮಾರು 400 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದೂ ವರದಿಯಾಗಿದೆ. ಇನ್ನು, ಸಾವಿಗೆ ಬೇರೆ ಬೇರೆ ಕಾರಣಗಳಿದ್ದರೂ, ತೀವ್ರ ಶಾಖವೂ ಒಂದು ಕಾರಣ ಆಗಿರಬಹುದು ಎಂದು ವೈದ್ಯರು ಸಹ ಹೇಳಿದ್ದಾರೆ. ಅಲ್ಲದೆ, ತೀವ್ರ ಶಾಖದ ಹೊಡೆತದಿಂದಾಗಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚುತ್ತಿದೆ ಎಂದೂ ಅವರು ಹೇಳಿದರು. ತೀವ್ರವಾದ ಶಾಖದ ಅಲೆಯು ಉತ್ತರ ಪ್ರದೇಶವನ್ನು ಆವರಿಸಿದ್ದು, ಹೆಚ್ಚಿನ ಸ್ಥಳಗಳು 40 ಡಿಗ್ರಿಗೂ ಅಧಿಕ ತಾಪಮಾನವನ್ನು ನೋಡುತ್ತವೆ.

ಹಠಾತ್ ಸಾವುಗಳು ಮತ್ತು ರೋಗಿಗಳು ಜ್ವರ, ಉಸಿರಾಟದ ತೊಂದರೆ ಮತ್ತು ಇತರ ಸಮಸ್ಯೆಗಳಿಂದ ಆಸ್ಪತ್ರೆಗಳಿಗೆ ದಾಖಲಾಗುತ್ತಿದ್ದು, ಇದರಿಂದ ಆಸ್ಪತ್ರೆ ತುಂಬುತ್ತಿದೆ. ಇದು ತನ್ನ ಸಿಬ್ಬಂದಿಯನ್ನು ಎಚ್ಚರದಿಂದಿರುವಂತೆ ಮಾಡಿದೆ. ಜೂನ್ 15 ರಂದು 23 ರೋಗಿಗಳು, 16 ರಂದು 20 ರೋಗಿಗಳು ಹಾಗೂ 17 ರಂದು ಅಂದರೆ ನಿನ್ನೆ 11 ರೋಗಿಗಳು ಮೃತಪಟ್ಟಿದ್ದಾರೆ ಎಂದು ಬಲ್ಲಿಯಾ ಜಿಲ್ಲಾ ಆಸ್ಪತ್ರೆಯ ಪ್ರಭಾರಿ ವೈದ್ಯಕೀಯ ಅಧೀಕ್ಷಕ ಎಸ್‌.ಕೆ. ಯಾದವ್ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಸಿಗಾಳಿಗೆ ಉತ್ತರ ತತ್ತರ: ಪ್ರಯಾಗದಲ್ಲಿ 44.2 ದಾಖಲು , ಧಗಧಗಿಸಿದ ಧರೆ

ಇನ್ನೊಂದೆಡೆ, ಉತ್ತರ ಪ್ರದೇಶದ ನೋಯ್ಡಾ, ತಮಿಳುನಾಡು, ರಾಜಸ್ಥಾನ, ಅಸ್ಸಾಂ ರಾಜ್ಯಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ಬಿಪೊರ್‌ಜೊಯ್‌ ಚಂಡಮಾರುತದ ಕಾರಣದಿಂದ ರಾಜಸ್ಥಾನದ ಜೈಸಲ್ಮೇರ್‌, ಅಜ್ಮೀರ್‌ ಸೇರಿದಂತೆ ಹಲವು ಭಾಗದಲ್ಲಿ ಮಳೆಯಾಗುತ್ತಿದೆ. ಅಜ್ಮೀರ್‌ನ ಜವಾಹರಲಾಲ್ ನೆಹರು ಆಸ್ಪತ್ರೆ ಜಲಾವೃತವಾಗಿದೆ. 

ತಮಿಳುನಾಡಿನ ಚೆನ್ನೈ, ತಿರುವಳ್ಳುವರ್, ಕಾಂಚಿಪುರಂ, ಚೆಂಗಲ್ಪಟ್ಟು ಸೇರಿದಂತೆ ಹಲವೆಡೆ ಮಳೆಯಾಗಿದ್ದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ. ಜತೆಗೆ, ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಿನ್ನೆ ಸಂಜೆಯಿಂದ ಮಳೆ ಸುರಿಯುತ್ತಿದ್ದು, ಧೌಲಾಧರ್ ಪರ್ವತಗಳ ಪ್ರಸಿದ್ಧ ಪ್ರವಾಸಿ ತಾಣವಾದ ಕರೇರಿ ಸರೋವರದಲ್ಲಿ ಸುಮಾರು 2 ಡಜನ್ ಪ್ರವಾಸಿಗರು ಸಿಲುಕಿರುವ ಸಂಭವವಿದೆ.

ಇದನ್ನೂ ಓದಿ: ದೇಶದ ಹಲವು ರಾಜ್ಯಗಳಿಗೆ ಬಿಸಿಗಾಳಿ ಹೊಡೆತ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಹಾಗೆ, ಅಸ್ಸಾಂ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ. ಒಟ್ಟಾರೆ, ನಿರಂತರ ಮಳೆಯಿಂದಾಗಿ ಬಹುತೇಕ ಭಾಗಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದ್ದು, ದೇಶಾದ್ಯಂತ ಸದ್ಯ ಉಂಟಾಗಿರೋ ಹವಾಮಾನ ಪರಿಸ್ಥಿತಿ ಭವಿಷ್ಯದಲ್ಲಿ ಇನ್ನೂ ಯಾವ ಮಟ್ಟಕ್ಕೆ ಮುಟ್ಟುತ್ತದೋ ಕಾಣದಾಗಿದೆ. 

ಇದನ್ನೂ ಓದಿ: ಬಿಸಿಲಿನ ಬೇಗೆಯಿಂದ ಬಳಲುತ್ತಿರುವವರಿಗೆ ಗುಡ್‌ ನ್ಯೂಸ್‌: ರಾಜ್ಯದಲ್ಲಿ ಇಂದಿನಿಂದ 5 ದಿನ ಮಳೆ..!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ತಿರುಪತಿ ತಿಮ್ಮಪ್ಪನಿಗೆ ಅಂಗವಸ್ತ್ರದ ಮೋಸ, ಪ್ಲಾಸ್ಟಿಕ್‌ ಸಿಲ್ಕ್‌ ಕೊಟ್ಟು 55 ಕೋಟಿ ಯಾಮಾರಿಸಿದ ಕಂಪನಿ!
ರಾಷ್ಟ್ರಪತಿಗಳು ಪದಕ ನೀಡುತ್ತಿದ್ದಂತೆ ಕೊರಳಿನಿಂದ ಕಿತ್ತೆಸೆದ ಬಾಲಕ! ವೈರಲ್ ವಿಡಿಯೋ ಹಿಂದಿನ ಸತ್ಯವೇನು?