
ನವದೆಹಲಿ: ಈ ಬಾರಿಯೂ ಚಳಿಗೆ ಉತ್ತರ ಭಾರತದ ರಾಜ್ಯಗಳು ತತ್ತರಿಸಿ ಹೋಗಿದ್ದು, ಅನೇಕ ಕಡೆ ತಾಪಮಾನ ಮೈನಸ್ ಪ್ರಮಾಣದಲ್ಲಿ ದಾಖಲಾಗುತ್ತಿದೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ ದಟ್ಟಮಂಜು ಸಹಿತ 4.4 ಡಿಗ್ರಿ ತಾಪಮಾನ ದಾಖಲಾಗಿದೆ ಹಾಗೂ ಇದು ಈ ಬಾರಿಯ ಋುತುಮಾನದ ಅತಿ ಕನಿಷ್ಠ ದಾಖಲೆಯಾಗಿದ್ದು ಮುಂದಿನ ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ರಾಜಸ್ಥಾನದ ಫತೇಪುರದಲ್ಲಿ -0.5 ಡಿಗ್ರಿ, ಕನಿಷ್ಠ ತಾಪಮಾನ ದಾಖಲಾಗಿದೆ. ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಮಂಗಳವಾರ ರಾತ್ರಿ -5.2 ಡಿಗ್ರಿ ತಾಪಮಾನ ದಾಖಲಾಗಿದೆ ಹಾಗೂ -9.4 ಡಿಗ್ರಿ ತಾಪಮಾನ ಮೂಲಕ ಪಹಲ್ಗಾಮ್ ಇಲ್ಲಿನ ಅತಿ ಕಡಿಮೆ ತಾಪಮಾನ ಹೊಂದಿದ ಸ್ಥಳವಾಗಿದೆ. ಪಂಜಾಬ್ ಮತ್ತು ಹರ್ಯಾಣಗಳು ಮಂಜು ಸಹಿತ ಚಳಿಯಿಂದ ಆವರಿಸಲ್ಪಟ್ಟಿದ್ದು ಗುರುದಾಸ್ಪುರ 2.5 ಡಿಗ್ರಿ ಹಾಗೂ ಹಿಸಾರ್ 5.9 ಡಿಗ್ರಿ ತಾಪಮಾನ ದಾಖಲಿಸುವ ಮೂಲಕ ಕ್ರಮವಾಗಿ ಪಂಜಾಬ್ ಹಾಗೂ ಹರ್ಯಾಣದ ಅತ್ಯಂತ ಕಡಿಮೆ ಉಷ್ಣತೆ ಹೊಂದಿದ ಸ್ಥಳಗಳಾಗಿವೆ. ಈ ನಡುವೆ, ಜಾರ್ಖಂಡ್ನಲ್ಲಿ ಚಳಿ ಕಾರಣ 1 ವಾರ ಶಾಲೆಗೆ ರಜೆ ಸಾರಲಾಗಿದೆ.
ಬೆಚ್ಚಗಿರ್ಲಿ ಅಂತ ಮುಸುಕು ಹಾಕ್ಕೊಂಡು ಮಲಗ್ತೀರಾ ? ಹುಷಾರ್ ಜೀವಾನೇ ಹೋಗ್ಬೋದು !
ಚಳಿಗಾಲದಲ್ಲೂ ನಿದ್ರೆ ಬರ್ತಿಲ್ವಾ? ಈ ವ್ಯಾಯಾಮ ಬೆಸ್ಟ್ ಮದ್ದು!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ