
ಹೈದರಾಬಾದ್/ಜೈಪುರ/ಲಖನೌ: ದಕ್ಷಿಣ ಹಾಗೂ ಉತ್ತರ ಭಾರತದಲ್ಲಿ ಮುಂಗಾರು ತೀವ್ರಗೊಂಡಿದೆ. ಕಳೆದ 24 ತಾಸಿನಲ್ಲಿ ಉತ್ತರ ಪ್ರದೇಶದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ. ವಾರಾಣಸಿ, ಪ್ರಯಾಗರಾಜ್ ಸೇರಿ ಅನೇಕ ಕಡೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ.
ರಾಜಸ್ಥಾನದಲ್ಲಿ ಕಳೆದ 24 ಗಂಟೆಯಲ್ಲಿ ಭಾರಿ ಮಳೆಯಾಗಿದ್ದು, ಹಲವು ನದಿ, ತೊರೆಗಳು ಉಕ್ಕಿ ಹರಿಯುತ್ತಿವೆ. ಅಜ್ಮೇರ್, ಪುಷ್ಕರ್, ಬೂಂದಿ, ಸವಾಯಿ, ಮಾಧೋಪುರ ಮತ್ತು ಪಾಲಿ ಜಿಲ್ಲೆಗಳು ಪ್ರವಾಹಕ್ಕೆ ಬಾಧಿತವಾಗಿವೆ. ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದೆ.
ಹೈದರಾಬಾದ್ನಲ್ಲಿ ಒಂದೇ ದಿನ 10 ಸೆಂ.ಮೀ. ಮಳೆಯ ಕಾರಣ ಅನೇಕ ಪ್ರದೇಶಗಳು ಜಲಾವೃತವಾಗಿವೆ. ಫ್ಲೈ ಓವರ್ ಮೇಲೂ ಪ್ರವಾಹ ಉಕ್ಕೇರಿದೆ. ಇದರಿಂದಾಗಿ ಹೈದರಾಬಾದ್ ನಗರ ಬೆಂಗಳೂರು ಮೀರಿಸಿದೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.
ಕೇರಳದಲ್ಲೂ ಭಾರಿ ಮಳೆಯಾಗುತ್ತಿದ್ದು, ಅನೇಕ ಕಡೆ ರೆಡ್ ಹಾಗೂ ಆರೆಂಜ್ ಅಲರ್ಟ್ ಸಾರಲಾಗಿದೆ. ಉತ್ತರ ಭಾರತದ ಹಿಮಾಚಲ ಪ್ರದೇಶ, ಉತ್ತರಾಖಂಡ, ಪ.ಬಂಗಾಳದಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ