ತಿರುಪತಿಯಲ್ಲಿ ರಶ್ಶೋರಶ್ಶು, 4-5 ಕಿ.ಮೀ. ಉದ್ದದ ಕ್ಯೂ, 2-3 ದಿನ ಬರಬೇಡಿ: ಟಿಟಿಡಿ

Published : May 30, 2022, 04:41 AM IST
ತಿರುಪತಿಯಲ್ಲಿ ರಶ್ಶೋರಶ್ಶು, 4-5 ಕಿ.ಮೀ. ಉದ್ದದ ಕ್ಯೂ, 2-3 ದಿನ ಬರಬೇಡಿ: ಟಿಟಿಡಿ

ಸಾರಾಂಶ

* ವೆಂಕಟೇಶ್ವರನ ಭಕ್ತಿ ಕ್ಷೇತ್ರವಾದ ತಿರುಮಲದಲ್ಲಿ ಕಂಡು ಕೇಳರಿಯಷ್ಟು ಭಕ್ತಸಂದಣಿ * 2-3 ದಿನ ಬರಬೇಡಿ ಎಂದ ಟಿಟಿಡಿ * ರಜೆ ಹಾಗೂ ಪ್ರವಾಸ ಋುತು ಆಗಿರುವ ಹಿನ್ನೆಲೆ * 4-5 ಕಿ.ಮೀ. ಉದ್ದದ ಕ್ಯೂ ದರ್ಶನಕ್ಕೆ ಬೇಕು 2 ದಿನ

ತಿರುಮಲ(ಮೇ.30): ವೆಂಕಟೇಶ್ವರನ ಭಕ್ತಿ ಕ್ಷೇತ್ರವಾದ ತಿರುಮಲದಲ್ಲಿ ಕಂಡು ಕೇಳರಿಯಷ್ಟುಭಕ್ತಸಂದಣಿ ಶನಿವಾರ ಹಾಗೂ ಭಾನುವಾರ ಉಂಟಾಗಿದೆ. ದರ್ಶನಕ್ಕೆ ನಿಂತ ಭಕ್ತರು ದೇವರ ದರ್ಶನ ಮಾಡಲು ಸುಮಾರು 48 ಗಂಟೆಯಷ್ಟುಕಾಯಬೇಕಾದ ಸ್ಥಿತಿ ಸೃಷ್ಟಿಯಾಗಿದೆ. ಹೀಗಾಗಿ ಇನ್ನು 2-3 ದಿನ ಮಟ್ಟಿಗೆ ತಿರುಪತಿ ಕಡೆಗೆ ಆಗಮಿಸಬೇಡಿ ಎಂದು ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (ಟಿಟಿಡಿ) ಭಕ್ತಾದಿಗಳಲ್ಲಿ ಕೋರಿದೆ.

ಆಂಧ್ರ ಹಾಗೂ ಸುತ್ತಲಿನ ರಾಜ್ಯಗಳಲ್ಲಿ ಇತ್ತೀಚೆಗಷ್ಟೇ ಮಕ್ಕಳ ಪರೀಕ್ಷೆಗಳು ಮುಗಿದಿವೆ. ಅಲ್ಲದೆ, ಕೆಲವು ತರಗತಿಗಳ ಮಕ್ಕಳಿಗೆ ಜೂನ್‌ ಮೊದಲ ವಾರದಿಂದ ಶಾಲೆ-ಕಾಲೇಜುಗಳು ಆರಂಭವಾಗಲಿವೆ. ಅಲ್ಲದೆ, ಈ ಸಲ ಯಾವುದೇ ಕೊರೋನಾ ನಿರ್ಬಂಧಗಳು ಇಲ್ಲ. ಹೀಗಾಗಿ ಈ ಶನಿವಾರ ಹಾಗೂ ಭಾನುವಾರ ಭಾರೀ ಸಂಖ್ಯೆಯಲ್ಲಿ ಭಕ್ತ ಸಮೂಹ ದರ್ಶನಕ್ಕೆ ಆಗಮಿಸಿದೆ. ಇಷ್ಟೊಂದು ಜನಸಂದಣಿ ವೈಕುಂಠ ಏಕಾದಶಿ ವೇಳೆಯೂ ಇರಲಿಲ್ಲ ಎಂದು ಟಿಟಿಡಿ ಅಧಿಕಾರಿಗಳು ಹೇಳಿದ್ದಾರೆ.

ಟಿಕೆಟ್‌ ಬುಕ್ಕಿಂಗ್‌ ಸೀಮಿತವಾಗಿದ್ದರೂ, ಸಾಮಾನ್ಯ ಸರದಿಯಲ್ಲಿ ನಿಂತು ಉಚಿತ ದರ್ಶನ ಪಡೆಯಲು ಭಕ್ತರು ನಾಮುಂದು ತಾಮುಂದು ಎಂಬಂತೆ ಆಗಮಿಸಿದ್ದಾರೆ. ಹೀಗಾಗಿ ಸರದಿ ಸಾಲು ಸುಮಾರು 4-5 ಕಿ.ಮೀ. ವರೆಗೆ ವ್ಯಾಪಿಸಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಟಿಟಿಡಿ ಅಧಿಕಾರಿಗಳು, ‘ಒಂದು ತಾಸಿಗೆ ತಿಮ್ಮಪ್ಪನ ದರ್ಶನ ಪಡೆಯಲು ಸುಮಾರು 4500 ಭಕ್ತರಿಗೆ ಮಾತ್ರ ಸಾಧ್ಯ. ಈಗಿನ ಸರದಿ ನೋಡಿದರೆ ಸರದಿಯಲ್ಲಿರುವ ಭಕ್ತರೆಲ್ಲ ದೇವರ ದರ್ಶನ ಮಾಡುವಂತಾಗಲು 48 ತಾಸು ಬೇಕಾಗಬಹುದು’ ಎಂದು ಹೇಳಿದ್ದಾರೆ.

‘ಆದರೆ ಭಕ್ತರಿಗೆ ಸರದಿಯಲ್ಲಿ ಅನಾನುಕೂಲ ಆಗಬಾರದು ಎಂದು ಅಲ್ಲಿಯೇ ಅವರಿಗೆ ನೀರು, ಪಾನೀಯ, ಹಾಲು, ಚಹಾ, ಕಾಫಿ, ಅನ್ನಪ್ರಸಾದ- ಇತ್ಯಾದಿ ತಿಂಡಿ ತಿನಿಸುಗಳನ್ನು ನೀಡಲಾಗುತ್ತಿದೆ’ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್
ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ