ಮಂಡಿಯಲ್ಲಿ ಮಳೆ ಅವಾಂತರ: ಜಲಸಮಾಧಿಯಾದ ವಾಹನಗಳು, ಮನೆಗಳು

Published : Jul 29, 2025, 12:14 PM ISTUpdated : Jul 29, 2025, 12:23 PM IST
Himachal Heavy Rainfall: Flood-Like Situation in Mandi

ಸಾರಾಂಶ

ದೆಹಲಿ ಮತ್ತು ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ ಅನಾಹುತ ಸೃಷ್ಟಿಸಿದೆ. ಮಂಡಿಯಲ್ಲಿ ಪ್ರವಾಹದಿಂದಾಗಿ ವಾಹನಗಳು ಜಲಸಮಾಧಿಯಾಗಿ, ಮನೆಗಳು ಜಲಾವೃತಗೊಂಡಿವೆ. ಮೂವರು ಸಾವನ್ನಪ್ಪಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಮಂಡಿ: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಹಿಮಾಚಲ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿ ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಇತ್ತ ರಾಜಧಾನಿ ದೆಹಲಿಯಲ್ಲಿ ಬಹಳ ದಿನಗಳಿಂದ ಸೆಕೆಯಿಂದ ಕಂಗೆಟ್ಟಿದ್ದ ಜನರಿಗೆ ಮುಂಜಾನೆ ಮಳೆ ತಂಪೆರೆದಿದ್ದು, ಜನರಿಗೆ ಸೆಖೆಯಿಂದ ಮುಕ್ತಿ ನೀಡಿದೆ.

ಅತ್ತ ಹಿಮಾಚಲ ಪ್ರದೇಶದಲ್ಲಿ ಮಳೆ ಅವಾಂತರವನ್ನೇ ಸೃಷ್ಟಿಸಿದ್ದು, ವಿಶೇಷವಾಗಿ ನಟಿ ಕಂಗನಾ ರಾಣಾವತ್ ಪ್ರತಿನಿಧಿಸುವ ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಮಳೆಯಿಂದಾಗಿ ತೀವ್ರ ಹಾನಿಯಾಗಿದೆ. ಹಠಾತ್ ಪ್ರವಾಹದಿಂದ 20ಕ್ಕೂ ಹೆಚ್ಚು ವಾಹನಗಳು ಜಲಸಮಾಧಿಯಾಗಿದ್ದು, ಹಲವಾರು ಮನೆಗಳು ಜಲಾವೃತವಾಗಿವೆ. ಮೂವರು ನೀರುಪಾಲಾಗಿದ್ದಾರೆ.

ಮಂಡಿಯಲ್ಲಿ ಮಳೆಯ ರಭಸ ಎಷ್ಟು ತೀವ್ರವಾಗಿತ್ತೆಂದರೆ, ನಗರದ ಮೂಲಕ ಹರಿಯುವ ಸುಕತಿ ನಲ್ಲಾಗಳಲ್ಲಿ ನೀರು ಉಕ್ಕಿ ಬಂದಿದ್ದು,, ಸುಮಾರು ಐದು ಕಿಲೋಮೀಟರ್ ಪ್ರದೇಶದವರೆಗೆ ಹಲವಾರು ಪ್ರದೇಶಗಳಿಗೆ ನೀರು ನುಗ್ಗಿದೆ. ವಿಶೇಷವಾಗಿ ಜೈಲ್ ರಸ್ತೆ, ಸೈನಿ ಮೊಹಲ್ಲಾ ಮತ್ತು ವಲಯ ಆಸ್ಪತ್ರೆ ಪ್ರದೇಶಗಳು ಮಳೆಯಿಂದ ತೀವ್ರ ಹಾನಿಗೊಳಗಾಗಿವೆ.

ಮಳೆಯಿಂದಾಗಿ ಮೂವರು ಸಾವನ್ನಪ್ಪಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, 20 ಜನರನ್ನು ಜಲಾವೃತ ಪ್ರದೇಶದಿಂದ ರಕ್ಷಿಸಲಾಗಿದೆ. ಮಳೆಯಿಂದಾಗಿ ಚಂಡಿಘಡ ಮನಾಲಿ ರಾಷ್ಟ್ರೀಯ ಹೆದ್ದಾರಿ 4 ಮೈಲಿ, 9 ಮೈಲಿ ಮತ್ತು ದ್ವಾಡಾದಲ್ಲಿ ರಸ್ತೆಗಳು ಕೊಚ್ಚಿಹೋಗಿರುವುದರಿಂದ ಅದನ್ನು ಮುಚ್ಚಲಾಗಿದೆ.

ಕಳೆದ ಜೂನ್ 30 ಹಾಗೂ ಜುಲೈ 1 ರ ರಾತ್ರಿ ಸುರಿದ ಮಳೆಯಿಂದಾಗಿ ಮಂಡಿ ಜಿಲ್ಲೆಯ ಸೆರಾಜ್, ನಾಚನ್, ಧರಂಪುರ್ ಮತ್ತು ಕರ್ಸೋಗ್ ವಿಧಾನಸಭಾ ಕ್ಷೇತ್ರಗಳಲ್ಲಿ 15ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಈ ಟ್ರೆಂಡ್ ಶುರು ಮಾಡಿದ್ದು ಮೆಹಬೂಬಾ: ನಿತೀಶ್‌ಕುಮಾರ್ ಬುರ್ಖಾ ಎಳೆದಿದ್ದಕ್ಕೆ ಮುಫ್ತಿಗೆ ಒಮರ್ ಟಾಂಗ್
ಉರ್ವಶಿ ರೌಟೇಲಾ, ಯುವರಾಜ್ ಸಿಂಗ್, ಸೋನು ಸೂದ್‌ಗೆ ಇಡಿ ಶಾಕ್, ₹7.9ಕೋಟಿ ಆಸ್ತಿ ಮುಟ್ಟುಗೋಲು