ಹಿಂದೂ ಹಬ್ಬಗಳಿಗೆ ರಜೆ ಕಟ್, ಮುಸಲ್ಮಾನ ಹಬ್ಬಗಳಿಗೆ ಸಾರ್ವತ್ರಿಕ ರಜೆ ಹೆಚ್ಚಳ: ಬಿಜೆಪಿ ಆಕ್ರೋಶ

By BK AshwinFirst Published Nov 28, 2023, 1:20 PM IST
Highlights

ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರವು ಹಿಂದೂ ಹಬ್ಬಗಳ ರಜಾದಿನಗಳನ್ನು ಆಯ್ದವಾಗಿ ಕಡಿತಗೊಳಿಸಲಾಗಿದೆ, ಮುಸ್ಲಿಂ ಹಬ್ಬಗಳಿಗೆ ರಜೆಯನ್ನು ಹೆಚ್ಚಿಸಲಾಗಿದೆ ಎಂದು ಸುಶೀಲ್‌ ಮೋದಿ ಹೇಳಿದ್ದಾರೆ. 

ಪಾಟ್ನಾ (ನವೆಂಬರ್ 28, 2023): ಬಿಹಾರ ಸರ್ಕಾರವು ಹಿಂದೂ ಹಬ್ಬಗಳನ್ನು ಆಚರಿಸಲು ಶಾಲೆಗಳಿಗೆ ರಜೆಯ ಸಂಖ್ಯೆಯನ್ನು ಕಡಿತಗೊಳಿಸಿದೆ ಎಂದು ಬಿಜೆಪಿ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದೆ. ಬಿಹಾರ ರಾಜ್ಯ ಶಿಕ್ಷಣ ಇಲಾಖೆಯು 2024 ರ ರಜೆಯ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿದ್ದು, ಇದನ್ನು ಉಲ್ಲೇಖಿಸಿದ ಬಿಜೆಪಿ ನಾಯಕರು I.N.D.I.A ಒಕ್ಕೂಟದ ಮೈತ್ರಿಕೂಟದ ಹಾಗೂ ನಿತೀಶ್‌ ಕುಮಾರ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಶಿಕ್ಷಣ ಇಲಾಖೆಯು 2024 ರ ರಜೆಯ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಹರ್ತಾಲಿಕಾ ತೀಜ್ ಮತ್ತು ಜಿತಿಯಾ ರಜಾದಿನಗಳನ್ನು ತೆಗೆದುಹಾಕಿದರೆ, ಈದ್ ಅಲ್-ಫಿತರ್ ಮತ್ತು ಈದ್ ಅಲ್-ಅಧಾ (ಬಕ್ರೀದ್) ರ ರಜಾದಿನಗಳನ್ನು ಮೂರಕ್ಕೆ ಹೆಚ್ಚಿಸಲಾಗಿದೆ ಎಂದು ವರದಿಯಾಗಿದೆ. ಈ ಬಗ್ಗೆ ಬಿಜೆಪಿ ಸಂಸದ ಸುಶೀಲ್ ಮೋದಿ ಮಾತನಾಡಿದ್ದು, ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರವು ಹಿಂದೂ ವಿರೋಧಿ ಮುಖವನ್ನು ತೋರಿಸಿದೆ ಮತ್ತು ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವ ನಿರ್ಧಾರವನ್ನು ತೆಗೆದುಕೊಂಡಿದೆ. ಹಿಂದೂ ಹಬ್ಬಗಳ ರಜಾದಿನಗಳನ್ನು ಆಯ್ದವಾಗಿ ಕಡಿತಗೊಳಿಸಲಾಗಿದೆ, ಆದರೆ ಮುಸ್ಲಿಂ ಹಬ್ಬಗಳಿಗೆ ರಜೆಯನ್ನು ಹೆಚ್ಚಿಸಲಾಗಿದೆ ಎಂದು ಸಂಸದರ ಹೇಳಿಕೆ ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.

हिन्दूओं के पर्व, त्यौहारों की छुट्टियों को रद्द करना हिन्दू विरोधी मानसिकता का परिचायक। pic.twitter.com/bxNJxp6fqe

— Sushil Kumar Modi (@SushilModi)

Latest Videos

ಇದನ್ನು ಓದಿ: ನಿತೀಶ್ ಕುಮಾರ್ ಸೆಕ್ಸ್‌ ಹೇಳಿಕೆಗೆ ಅಮೆರಿಕ ಗಾಯಕಿ ಮೇರಿ ಮಿಲ್ಬೆನ್ ವಾಗ್ದಾಳಿ: ಮಹಿಳೆ ಪರ ನಿಲುವಿಗೆ ಮೋದಿಗೆ ಶ್ಲಾಘನೆ

ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸಹ ಈ ಬಗ್ಗೆ ಟ್ವೀಟ್‌ ಮಾಡಿದ್ದು, ಮುಸ್ಲಿಮರ ಹಬ್ಬಗಳ ರಜೆಯನ್ನು ಹೆಚ್ಚಿಸಲಾಗಿದ್ದು, ಹಿಂದೂಗಳ ರಜಾದಿನಗಳನ್ನು ಕಡಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ, ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರವು ಇಸ್ಲಾಮಿಕ್ ಧಾರ್ಮಿಕ ನಂಬಿಕೆಗಳ ಆಧಾರದ ಮೇಲೆ ರಾಜ್ಯದಲ್ಲಿ ಕೆಲಸ ಮಾಡುತ್ತಿದೆ ಎಂಬುದನ್ನು ಇದು ಸ್ಪಷ್ಟವಾಗಿ ತೋರಿಸುತ್ತದೆ ಎಂದೂ ಹೇಳಿದ್ದಾರೆ. ಅಲ್ಲದೆ, ಸಿಎಂ ನಿತೀಶ್ ಕುಮಾರ್ ಈ ರಜೆಗಳನ್ನು ಮರುಸ್ಥಾಪಿಸದಿದ್ದರೆ ಮುಂಬರುವ ಚುನಾವಣೆಯಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ ಎಂದೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ, ನಿತೀಶ್ ಕುಮಾರ್ ಅವರನ್ನು ತುಷ್ಟೀಕರಣದ ನಾಯಕ ಮತ್ತು ಬಿಹಾರದ ಕುರ್ಸಿ ಕುಮಾರ್ ಎಂದು ಬಣ್ಣಿಸಿದ ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ, ಮತ್ತೊಮ್ಮೆ 'ಚಾಚಾ-ಭಟಿಜಾ' ಸರ್ಕಾರದ ಹಿಂದೂ ವಿರೋಧಿ ಮುಖವು ಮುನ್ನೆಲೆಗೆ ಬಂದಿದೆ ಎಂದು ಆರೋಪಿಸಿದರು.

"तुष्टिकरण के सरदार-बिहार के कुर्सी कुमार"

एकबार फिर चाचा-भतीजे की सरकार का हिंदू विरोधी चेहरा सामने आया। एक तरफ स्कूलों में मुस्लिम पर्व की छुट्टी बढ़ाई जा रही हैं,वहीं हिंदु त्योहारों में छुट्टियां खत्म की जा रही हैं।

लानत है वोटबैंक के लिए सनातन से घृणा करने वाली सरकार को। pic.twitter.com/3yX6WAeGnx

— Ashwini Kr. Choubey (@AshwiniKChoubey)

ಇದನ್ನೂ ಓದಿ: ನಿತೀಶ್‌ ಕುಮಾರ್‌ ಸೆಕ್ಸ್‌ ಹೇಳಿಕೆಗೆ ಮೋದಿ ತರಾಟೆ: ಇನ್ನೆಷ್ಟು ಕೆಳಗಿಳಿಯುತ್ತೀರಿ ಎಂದು ಕಿಡಿ

ಸಾಮಾಜಿಕ ಜಾಲತಾಣ ಪ್ಲಾಟ್‌ಫಾರ್ಮ್ ಎಕ್ಸ್‌ (ಈ ಹಿಂದಿನ ಟ್ವಿಟ್ಟರ್‌) ಪೋಸ್ಟ್‌ನಲ್ಲಿ ಬರೆದುಕೊಂಡ ಹಿರಿಯ ಬಿಜೆಪಿ ನಾಯಕ, ಒಂದೆಡೆ, ಶಾಲೆಗಳಲ್ಲಿ ಮುಸ್ಲಿಂ ಹಬ್ಬಗಳಿಗೆ ರಜೆಯನ್ನು ವಿಸ್ತರಿಸಲಾಗುತ್ತಿದೆ. ಆದರೆ ಹಿಂದೂ ಹಬ್ಬಗಳಿಗೆ ರಜೆಯನ್ನು ರದ್ದುಗೊಳಿಸಲಾಗುತ್ತಿದೆ.. ವೋಟ್ ಬ್ಯಾಂಕ್‌ಗಾಗಿ ಸನಾತನವನ್ನು ದ್ವೇಷಿಸುವ ಸರ್ಕಾರಕ್ಕೆ ನಾಚಿಕೆಗೇಡು. ." ಎಂದೂ ಬರೆದುಕೊಂಡಿದ್ದಾರೆ.

ಟಿವಿ ಆ್ಯಂಕರ್‌ಗಳ ಬಹಿಷ್ಕಾರ ತಪ್ಪು: I.N.D.I.A ಒಕ್ಕೂಟದ ನಿರ್ಧಾರ ತಿರಸ್ಕರಿಸಿ ಅಚ್ಚರಿ ಮೂಡಿಸಿದ ನಿತೀಶ್ ಕುಮಾರ್

click me!