ನಿಜಾನಾ?: ಅಯೋಧ್ಯೆ ತೀರ್ಪಿಗೆ ಹಿಂದೂ ಮಹಾಸಭಾ ಮೇಲ್ಮನವಿ?

Published : Nov 13, 2019, 09:38 PM IST
ನಿಜಾನಾ?: ಅಯೋಧ್ಯೆ ತೀರ್ಪಿಗೆ ಹಿಂದೂ ಮಹಾಸಭಾ ಮೇಲ್ಮನವಿ?

ಸಾರಾಂಶ

ಸುಪ್ರೀಂಕೋರ್ಟ್ ಅಯೋಧ್ಯೆ ತೀರ್ಪಿಗೆ ಮೇಲ್ಮನವಿ?/ ಮಸೀದಿಗೆ ಜಾಗ ನೀಡುವ ಸುಪ್ರೀಂಕೋರ್ಟ್ ನಿರ್ಧಾರಕ್ಕೆ ವಿರೋಧ?/ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅಖಿಲ ಭಾರತ ಹಿಂದೂ ಮಹಾಸಭಾ ಚಿಂತನೆ/ ‘ದೇವಾಲಯ ಇದೆ ಎಂದು ಸಾಬೀತಾಗಿದ್ದರೆ ಮಸೀದಿ ನಿರ್ಮಾಣಕ್ಕೆ ಜಾಗ ಏಕೆ’?/ ತೀರ್ಪಿನ ಸಂಪೂರ್ಣ ಅಧ್ಯಯನ ಬಳಿಕ ನಿರ್ಧಾರ ಎಂದ ಅಧ್ಯಕ್ಷ ಶಿಶಿರ್ ಚತುರ್ವೇದಿ/

ನವದೆಹಲಿ(ನ.13): ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ 5 ಎಕರೆ ಭೂಮಿ ನೀಡಬೇಕು ಎಂಬ ಸುಪ್ರೀಂಕೋರ್ಟ್ ತೀರ್ಪನ್ನು ಅಖಿಲ ಭಾರತ ಹಿಂದೂ ಮಹಾಸಭಾ ಪ್ರಶ್ನಿಸಲಿದೆ ಎನ್ನಲಾಗಿದೆ. 

ಅಯೋಧ್ಯೆಯ ಪ್ರಮುಖ ಸ್ಥಳದಲ್ಲೇ ಮಸೀದಿ ನಿರ್ಮಾಣಕ್ಕೆ 5 ಎಕರೆ ಭೂಮಿಯನ್ನು ಸುನ್ನಿ ವಕ್ಫ್ ಬೋರ್ಡ್ ಗೆ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ರಾಮನಿಗೆ ದೊರೆತ ಅಯೋಧ್ಯೆ: ಶತಮಾನಗಳ ನಂಬಿಕೆಗೆ ಸುಪ್ರೀಂ ತೀರ್ಪಿನ ನೈವೇದ್ಯೆ!

ಆದರೆ ಈ ನಿರ್ಧಾರಕ್ಕೆ ನಮ್ಮ ಆಕ್ಷೇಪವಿದ್ದು, ಈ ಸಂಬಂಧ ಪರಿಶೀಲನಾ ಅರ್ಜಿ ಸಲ್ಲಿಸಲು ಚಿಂತಿಸುತ್ತಿರುವುದಾಗಿ ಹಿಂದೂ ಮಹಾಸಭಾ ಹೇಳಿದೆ.

ಅಯೋಧ್ಯೆಯಲ್ಲಿ ದೇವಾಲಯ ಇತ್ತು ಎಂದು ಸಾಬೀತಾಗಿದ್ದರೆ ಸುನ್ನಿ ವಕ್ಫ್ ಬೋರ್ಡ್ ಗೆ ಭೂಮಿ ಏಕೆ ಕೊಡಬೇಕು ಎಂಬುದು ಹಿಂದೂ ಮಹಾಸಭಾ ವಾದವಾಗಿದೆ. 

ಬಾಬರ್ ಅಯೋಧ್ಯೆ(5 ಎಕರೆ)ಯಲ್ಲೇ ಇರಲಿದ್ದಾನೆ: ಸಹೋದರರ ನಂಬಿಕೆ ಮುಖ್ಯ ಎಂದ ಸುಪ್ರೀಂ!

ಸದ್ಯ ಸುಪ್ರೀಂಕೋರ್ಟ್ ತೀರ್ಪನ್ನು ಅಧ್ಯಯನ ಮಾಡಲಾಗುತ್ತಿದ್ದು, ನಂತರ ಪರಿಶೀಲನಾ ಅರ್ಜಿ ಸಲ್ಲಿಸುವ ಕುರಿತು ನಿರ್ಧಾರ ಪ್ರಕಟಿಸಲಾಗುವುದು ಎಂದು ಅಖಿಲ ಭಾರತೀಯ ಹಿಂದೂ ಮಹಾಸಭಾ ಅಧ್ಯಕ್ಷ ಶಿಶಿರ್ ಚತುರ್ವೇದಿ ಸ್ಪಷ್ಟಪಡಿಸಿದ್ದಾರೆ.

ಅಯೋಧ್ಯೆ ತೀರ್ಪು: ರಾಮಜನ್ಮಭೂಮಿ ಸನಿಹ ಮಸೀದಿಗಿಲ್ಲ ಜಾಗ?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ
ವಾಕ್ ಹೋಗಿದ್ದ 79 ವರ್ಷದ ಅಜ್ಜಿ ನಾಪತ್ತೆ: ನೆಕ್ಲೇಸ್‌ಗೆ ಮೊಮ್ಮಗ ಅಳವಡಿಸಿದ ಜಿಪಿಎಸ್‌ನಿಂದ ಪತ್ತೆ