
ಸಿಕಂದರಾಬಾದ್(ಡಿ.14): ಧರ್ಮದ ಆಧಾರದ ಮೇಲೆ ನಮ್ಮ ಸಮಾಜ ವಿಭಜನೆಯಾಗುತ್ತಿದೆ ಎಂದು ಕೆಲವರು ಬಾಯಿ ಬಡಿದುಕೊಳ್ಳುತ್ತಿರುತ್ತಾರೆ.
ಆದರೆ ನಾವು ಸಾಮಾಜಿಕವಾಗಿಯೇ ಜಾತ್ಯಾತೀತರು ಎಂಬುದನ್ನು ನಮ್ಮದೇ ಸಮಾಜದ ಸಾಮಾನ್ಯ ಜನ ಆಗಾಗ ಸಾಬೀತು ಮಾಡುತ್ತಲೇ ಇರುತ್ತಾರೆ.
ನಂಬಿಕೆ, ಆಚಾರ ವಿಚಾರಗಳಲ್ಲಿ ಭಿನ್ನತೆಯಿದ್ದರೂ, ಸಾಮಾಜಿಕವಾಗಿ ನಾವೆಲ್ಲರೂ ಒಂದು ಎಂಬುದನ್ನು ಭಾರತೀಯ ಸಮಾಜ ಜಗತ್ತಿಗೆ ಹೇಳುತ್ತಲೇ ಇರುತ್ತದೆ.
ಅದರಂತೆ ಚರ್ಚ್’ವೊಂದರ ದುರಸ್ತಿ ಕಾರ್ಯಕ್ಕೆ ಹಿಂದೂ ವ್ಯಕ್ತಿಒಯೋರ್ವರು 5 ಲಕ್ಷ ರೂ. ದಾನ ಮಾಡಿ ಈ ವಾದಕ್ಕೆ ಪುಷ್ಠಿ ನೀಡಿದ್ದಾರೆ.
ಮಸೀದಿಗೆ ಜಾಗ ಕೊಟ್ಟ ಸಿಖ್: ಸೌಹಾರ್ದತೆ ಕಟ್ಟುತ್ತೇವೆ ಎಂದ ಮುಸ್ಲಿಂ ಬಾಂಧವರು!
ಸಿಕಂದರಾಬಾದ್’ನ ಮುತಿಯಾಲ ದಿನೇಶ್ ಕುಮಾರ್, ಸರೋಜಿನಿ ದೇವಿ ರಸ್ತೆಯಲ್ಲಿರುವ ಸೇಂಟ್ ಮೇರಿ ಬಾಸಿಲಿಕಾ ಚರ್ಚ್’ಗೆ 5 ಲಕ್ಷ ರೂ. ದಾನ ಮಾಡಿದ್ದಾರೆ.
ತಮಗೆ ಅಮೆರಿಕದಲ್ಲಿ ಕೆಲಸ ಸಿಕ್ಕರೆ ಮೊದಲ ತಿಂಗಳ ವೇತನವನ್ನು ಚರ್ಚ್ ದುರಸ್ತಿ ಕಾರ್ಯಕ್ಕೆ ದಾನ ನೀಡುವುದಾಗಿ ದಿನೇಶ್ ಕುಮಾರ್ ಹರಕೆ ಹೊತ್ತಿದ್ದರು.
ಅದರಂತೆ ದಿನೇಶ್ ಅವರಿಗೆ ಅಮೆರಿಕದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಸಿಕ್ಕಿದ್ದು, ಹರಕೆಯಂತೆ ತಮ್ಮ ಮೊದಲ ವೇತನವನ್ನು ಚರ್ಚ್ ದುರಸ್ತಿ ಕಾರ್ಯಕ್ಕೆ ದಾನವಾಗಿ ನೀಡಿದ್ದಾರೆ.
ಕ್ರಿಸ್’ಮಸ್ ಹಾಗೂ ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ಸೇಂಟ್ ಮೇರಿ ಬಾಸಿಲಿಕಾ ಚರ್ಚ್ ಸಿದ್ಧತೆ ನಡೆಸಿದ್ದು, ಈ ಹಿನ್ನೆಲೆಯಲ್ಲಿ ದಿನೇಶ್ ಕುಮಾರ್ ದುರಸ್ತಿ ಕಾರ್ಯಕ್ಕೆ 5 ಲಕ್ಷ ರೂ. ದಾನ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ