ಅಯೋಧ್ಯೆ ಮಸೀದಿಗೆ ಹಿಂದೂ ವ್ಯಕ್ತಿಯಿಂದ ಮೊದಲ ದೇಣಿಗೆ!

Published : Oct 05, 2020, 08:02 AM IST
ಅಯೋಧ್ಯೆ ಮಸೀದಿಗೆ ಹಿಂದೂ ವ್ಯಕ್ತಿಯಿಂದ ಮೊದಲ ದೇಣಿಗೆ!

ಸಾರಾಂಶ

ಅಯೋಧ್ಯೆ ಮಸೀದಿಗೆ ಮೊದಲ ದೇಣಿಗೆ ಹಿಂದೂ ವ್ಯಕ್ತಿಯಿಂದ!| 21 ಸಾವಿರ ನೀಡಿದ ಉಪನ್ಯಾಸಕ

ಅಯೋಧ್ಯೆ(ಅ.05): ಸುಪ್ರೀಂಕೋರ್ಟ್‌ ತೀರ್ಪಿನ ಅನುಸಾರವಾಗಿ ಅಯೋಧ್ಯೆಯಲ್ಲಿ 5 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿರುವ ನೂತನ ಮಸೀದಿಗೆ ಮೊದಲ ದೇಣಿಗೆ ಬಂದಿದ್ದು, ಅದನ್ನು ಹಿಂದು ಸಮುದಾಯದ ವ್ಯಕ್ತಿಯೊಬ್ಬರು ನೀಡಿದ್ದಾರೆ.

ಲಖನೌ ವಿಶ್ವವಿದ್ಯಾಲಯದಲ್ಲಿ ಕಾನೂನು ಉಪನ್ಯಾಸಕರಾಗಿರುವ ರೋಹಿತ್‌ ಶ್ರೀವಾಸ್ತವ ಎಂಬುವರು 21 ಸಾವಿರ ರು.ಗಳನ್ನು ಮಸೀದಿ ಟ್ರಸ್ಟ್‌ಗೆ ನೀಡಿದ್ದಾರೆ. ಹಿಂದು ಸೋದರನಿಂದ ಬಂದಿರುವ ಈ ದೇಣಿಗೆ ಭಾರತ- ಇಸ್ಲಾಮಿಕ್‌ ಸಂಸ್ಕೃತಿಗೆ ಉದಾಹರಣನೆಯಾಗಿದೆ ಎಂದು ಟ್ರಸ್ಟ್‌ನ ಕಾರ್ಯದರ್ಶಿ ಅಥರ್‌ ಹುಸೇನ್‌ ತಿಳಿಸಿದ್ದಾರೆ.

ಇದೇ ವೇಳೆ ಮಾತನಾಡಿರುವ ರೋಹಿತ್‌, ಕೋಟ್ಯಂತರ ಭಾರತೀಯ ಹಿಂದುಗಳು ಹಾಗೂ ಮುಸಲ್ಮಾನರು ಒಟ್ಟಾಗಿ ಹಬ್ಬಗಳನ್ನು ಆಚರಿಸುತ್ತಾರೆ. ನನ್ನ ಮುಸ್ಲಿಂ ಸ್ನೇಹಿತರಿಲ್ಲದೆ ನಾನು ಹೋಳಿ ಅಥವಾ ದೀಪಾವಳಿಯನ್ನು ಆಚರಿಸುವುದಿಲ್ಲ. ಹಾಗೆಯೇ ನಾನಿಲ್ಲದೆ ಅವರು ಕೂಡ ಈದ್‌ ಆಚರಣೆ ಮಾಡುವುದಿಲ್ಲ. ಇದು ಕೋಟ್ಯಂತರ ಹಿಂದು ಹಾಗೂ ಮುಸ್ಲಿಮರ ಕತೆ. ಇತರೆ ಹಿಂದುಗಳು ಕೂಡ ಮಸೀದಿಗೆ ದೇಣಿಗೆ ನೀಡುವ ಮೂಲಕ ಮುಸ್ಲಿಂ ಸೋದರರಿಗೆ ಸಂದೇಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಅಯೋಧ್ಯೆಯ ಧನ್ನಿಪುರದಲ್ಲಿ ಮಸೀದಿ ನಿರ್ಮಾಣಕ್ಕೆ ಸುಪ್ರೀಂಕೋರ್ಟ್‌ 5 ಎಕರೆ ಮಂಜೂರು ಮಾಡಿದೆ. ಈ ಮಸೀದಿ ಮೆಕ್ಕಾದಲ್ಲಿನ ಕಾಬಾ ಶರೀಫ್‌ ರೀತಿ ಚೌಕಾಕಾರದಲ್ಲಿರಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆ ಶಿವಕುಮಾರ್‌ಗೆ ಕೇಂದ್ರ ನಾಯಕತ್ವ ಸ್ಥಾನ : ಕಾಂಗ್ರೆಸ್‌ನಲ್ಲಿ ಕೂಗು
ನ್ಯಾ। ಸ್ವಾಮಿನಾಥನ್‌ ವಾಗ್ದಂಡನೆಗೆ 56 ನಿವೃತ್ತ ಜಡ್ಜ್‌ಗಳ ಕಿಡಿ