'ಅರಾಜಕತೆ ತೊಲಗಿ ಪಶ್ಚಿಮ ಬಂಗಾಳದಲ್ಲಿ ಹಿಂದೂ ರಾಜ್ಯ ಸ್ಥಾಪನೆಯಾಗಲಿದೆ'

Published : Dec 13, 2020, 08:32 PM ISTUpdated : Dec 13, 2020, 08:34 PM IST
'ಅರಾಜಕತೆ ತೊಲಗಿ ಪಶ್ಚಿಮ ಬಂಗಾಳದಲ್ಲಿ ಹಿಂದೂ ರಾಜ್ಯ ಸ್ಥಾಪನೆಯಾಗಲಿದೆ'

ಸಾರಾಂಶ

ಪಶ್ಚಿಮ ಬಂಗಾಳದಲ್ಲಿ ಹಿಂದೂ ರಾಜ್ಯಭಾರ/ ಮಮತಾ ಬ್ಯಾನರ್ಜಿ ವಿರುದ್ಧ ಗುಡುಗಿದ ಸಂಸದೆ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್/ ಪಶ್ಚಿಮ ಬಂಗಾಳದಲ್ಲಿ ಅರಾಜಕತೆ ಸೃಷ್ಟಿಯಾಗಿದೆ.

ಭೋಪಾಲ್ ( ಡಿ. 13)  ಪಶ್ಚಿಮ ಬಂಗಾಳದಲ್ಲಿಯೂ ಹಿಂದೂ ರಾಜ್ಯಭಾರ ಆರಂಭವಾಗಲಿದೆ ಎಂದು ಬಿಜೆಪಿ ಸಂಸದೆ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಭವಿಷ್ಯ ನುಡಿದಿದ್ದಾರೆ.

ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭಾರೀ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ ಎನ್ನುತ್ತ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದರು.

ಅಷ್ಟಕ್ಕೂ ದೀದಿ ಸಾಮ್ರಾಜ್ಯದಲ್ಲಿ ಏನಾಗುತ್ತಿದೆ?

ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರ ಸರಣಿ ಕೊಲೆ ಪ್ರಕರಣಗಳು, ಮಮತಾ ಆಡಳಿತ ವೈಫಲ್ಯಕ್ಕೆ ದೊಡ್ಡ ಉದಾಹರಣೆ ಎಂದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬೆಂಗಾವಲು ವಾಹನದ ಮೇಲೆ ನಡೆದ ಕಲ್ಲುತೂರಾಟ, ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂಬುದನ್ನು ಸಾರಿ ಸಾರಿ ಹೇಳುತ್ತಿದೆ ಎಂದರು.

ಜೆಪಿ ನಡ್ಡಾ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜಕೀಯ ಪತನ ಆರಂಭವಾಗಿದೆ.  ಪಶ್ಚಿಮ ಬಂಗಾಳ ಕೇಸರಿ ಮಯವಾಗಲಿದ್ದು ಜನ ನೆಮ್ಮದಿಯ ಜೀವನ ನಡೆಸಲಿದ್ದಾರೆ ಎಂದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂದು ರಾತ್ರಿ 8ರ ಒಳಗೆ ಟಿಕೆಟ್ ಮೊತ್ತ ಮರುಪಾವತಿಸಿ : ಇಂಡಿಗೋಗೆ ಕೇಂದ್ರ ಗಡುವು
India Latest News Live: ಆಯೋಧ್ಯೆಯ ಬಾಬ್ರಿ ಮಸೀದಿಯನ್ನೇ ಹೋಲುವಂತಹ ಮಸೀದಿಗೆ ಶಂಕು ಸ್ಥಾಪನೆ