
ನವದೆಹಲಿ(ಜ.07): JNU ವಿದ್ಯಾರ್ಥಿನಿಯರು ಹಾಗೂ ಶಿಕ್ಷಕರ ಮೇಲೆ ನಡೆದ ಭೀಕರ ದಾಳಿಯ ಹೊಣೆಯನ್ನು ಹಿಂದೂ ರಕ್ಷಾ ದಳ ಎಂಬ ಸಂಘಟನೆ ಹೊತ್ತುಕೊಂಡಿದೆ.
ಹಿಂದೂ ರಕ್ಷಾ ದಳ ಸಂಘಟನೆಯ ಸದಸ್ಯೆ ಪಿಂಕಿ ಚೌಧರಿ ಎಂಬಾಕೆ ತನ್ನ ನೇತೃತ್ವದಲ್ಲೇ ದಾಳಿ ನಡೆದಿದೆ ಎಂದು ಘೋಷಿಸಿದ್ದಾಳೆ.
ದೇಶ ವಿರೋಧಿ ಚಟುವಟಿಕೆ ಹಾಗೂ ಧರ್ಮ ವಿರೋಧಿ ಚಟುವಟಿಕೆ ನಡೆಸುತ್ತಿದ್ದ ವಿದ್ಯಾರ್ಥಿನಿಯರು ಹಾಗೂ ಶಿಕ್ಷಕರನ್ನು ದಂಡಿಸಲು ದಾಳಿ ನಡೆಸಿದ್ದಾಗಿ ಪಿಂಕಿ ಚೌಧರಿ ಹೇಳಿದ್ದಾಳೆ.
ತನ್ನ ನೇತೃತ್ವದಲ್ಲಿ JNU ಕ್ಯಾಂಪಸ್'ಗೆ ನುಗ್ಗಿದ 50ಕ್ಕೂ ಹೆಚ್ಚು ಮುಸುಕುಧಾರಿಗಳು ವಿದ್ಯಾರ್ಥಿನಿಯರ ಮೇಲೆ ದಾಳಿ ಮಾಡಿದ್ದಾರೆ ಎಂದು ಪಿಂಕಿ ಚೌಧರಿ ಸ್ಫೋಟಕ ಹೇಳಿಕೆ ನೀಡಿದ್ದಾಳೆ.
ಇನ್ನು ಈ ಕುರಿತು ಪ್ರತಿಕ್ರಿಯೆ ನೀಡಿರುವ ದೆಹಲಿ ಪೊಲೀಸರು, ಪಿಂಕಿ ಚೌಧರಿ ನೀಡಿರುವ ಹೇಳಿಕೆಯನ್ವಯ ತನಿಖೆ ನಡೆಸುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
JNU ಕ್ಯಾಂಪಸ್ಗೆ ನುಗ್ಗಿ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ರಕ್ತ ಸುರಿಯುವಂತೆ ಹಲ್ಲೆ
ಕಳೆದ ಜ.05ರಂದು ಏಕಾಏಕಿ JNU ಕ್ಯಾಂಪಸ್'ನಲ್ಲಿರುವ ವಿದ್ಯಾರ್ಥಿನಿಯರ ಹಾಸ್ಟೆಲ್'ಗೆ ನುಗ್ಗಿದ್ದ 50ಕ್ಕೂ ಹೆಚ್ಚು ಮುಸುಕುಧಾರಿಗಳು, ವಿದ್ಯಾರ್ಥಿನಿರು ಹಾಗೂ ಶಿಕ್ಷಕರ ಮೇಲೆ ದೈಹಿಕ ಹಲ್ಲೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ