ಗಗನಕ್ಕೇರಿದ ಬೆಲೆ: ಟೊಮೆಟೋ ಕಾಯಲು ಬೌನ್ಸರ್‌ಗಳ ನೇಮಕ

Published : Jul 10, 2023, 02:00 AM IST
ಗಗನಕ್ಕೇರಿದ ಬೆಲೆ: ಟೊಮೆಟೋ ಕಾಯಲು ಬೌನ್ಸರ್‌ಗಳ ನೇಮಕ

ಸಾರಾಂಶ

ಕಳ್ಳತನ ತಡೆಯಲು ವಾರಾಣಸಿಯಲ್ಲಿ ಬೀದಿ ಬದಿ ವ್ಯಾಪಾರಿಯಿಂದ ನೇಮಕ, ಟೊಮೆಟೋಗೆ ಝಡ್‌ ಪ್ಲಸ್‌ ಭದ್ರತೆ ನೀಡಿ: ಅಖಿಲೇಶ್‌ ಯಾದವ್‌ ವ್ಯಂಗ್ಯ. 

ವಾರಾಣಸಿ(ಜು.10): ಋುತುಮಾನದ ವಿವಿಧ ಕಾರಣಗಳಿಂದ ದೇಶಾದ್ಯಂತ ಟೊಮೆಟೋ ಬೆಲೆ ಗಗನಕ್ಕೇರಿರುವ ಬೆನ್ನಲ್ಲೇ ಟೊಮೆಟೋ ಕದಿಯುವವರ ಸಂಖ್ಯೆಯೂ ಏರಿಕೆಯಾಗಿದೆ. ಗ್ರಾಹಕರಿಂದ ತನ್ನ ಬೆಲೆಬಾಳುವ ಟೊಮೆಟೋಗಳನ್ನು ರಕ್ಷಿಸಿಕೊಳ್ಳಲು ಉತ್ತರ ಪ್ರದೇಶದ ವಾರಾಣಸಿಯ ತರಕಾರಿ ವ್ಯಾಪಾರಿಯೊಬ್ಬ ತನ್ನ ಅಂಗಡಿಯಲ್ಲಿ ಇಬ್ಬರು ಬೌನ್ಸರ್‌ಗಳನ್ನು ನೇಮಿಸಿಕೊಂಡಿದ್ದಾನೆ.

ಈ ಬಗ್ಗೆ ಮಾತನಾಡಿರುವ ಟೊಮೆಟೋ ವ್ಯಾಪಾರಿ ಅಜಯ್‌ ಫೌಜಿ ‘ಟೊಮೆಟೋ ಬೆಲೆ ತುಂಬಾ ಹೆಚ್ಚಾಗಿದೆ. ಹೀಗಾಗಿ ಅಂಗಡಿಗೆ ಬರುವ ಜನರು ಬೆಲೆ ಕುರಿತು ವಾಗ್ವಾದ ನಡೆಸುತ್ತಾರೆ. ಜೊತೆಗೆ ಟೊಮೆಟೋ ಕಳ್ಳತನ ಕೂಡಾ ಮಾಡುತ್ತಾರೆ. ಇದರಿಂದ ನನ್ನ ಸಿಬ್ಬಂದಿ ಕೂಡಾ ಸುಸ್ತಾಗಿ ಹೋಗಿದ್ದಾರೆ. ಹೀಗಾಗಿ ಬೇರೆ ದಾರಿ ಕಾಣದೆ ಬೌನ್ಸರ್‌ಗಳನ್ನು ನೇಮಕ ಮಾಡಿಕೊಂಡಿದ್ದೇನೆ. ವಾರಾಣಸಿಯಲ್ಲಿ ಸದ್ಯ ಟೊಮೆಟೋ ಬೆಲೆ ಕೇಜಿಗೆ 160 ರು. ಇದ್ದು ಜನರು ಕೇವಲ 50 ಮತ್ತು 100 ಗ್ರಾಂ ಟೊಮೆಟೋ ಖರೀದಿ ಮಾಡುತ್ತಿದ್ದಾರೆ’ ’ ಎಂದು ಮಾಹಿತಿ ನೀಡಿದ್ದಾರೆ.

ಹಾಸನ: ಬೆಲೆ ಏರಿಕೆ, ಹೊಲಕ್ಕೆ ನುಗ್ಗಿ ಟೊಮ್ಯಾಟೋ ಕದ್ದ ಕಳ್ಳರು..!

ಮುಂಜಾನೆ 9 ರಿಂದ ಸಂಜೆ 5 ಗಂಟೆಯವರೆಗೆ ಟೊಮೆಟೋ ಕಾಯಲು ಬೌನ್ಸರ್‌ಗಳನ್ನು ನೇಮಕ ಮಾಡಿಕೊಂಡಿರುವ ರಾಜಿ, ಅವರಿಗೆ ನೀಡುತ್ತಿರುವ ವೇತನವನ್ನು ಬಹಿರಂಗಪಡಿಸಿಲ್ಲ.

ಈ ನಡುವೆ ಇತ್ತೀಚೆಗೆ ತಮ್ಮ ಹುಟ್ಟುಹಬ್ಬದ ದಿನ ಟೊಮೆಟೋ ಆಕಾರದ ಕೇಕ್‌ ಕತ್ತರಿಸಿ ಬೆಲೆ ಏರಿಕೆ ಬಗ್ಗೆ ಗಮನ ಸೆಳೆದಿದ್ದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌, ಇದೀಗ ಬೌನ್ಸರ್‌ ನಿಯೋಜನೆ ಚಿತ್ರ ಹಂಚಿಕೊಂಡಿದ್ದು, ಬಿಜೆಪಿ ಸರ್ಕಾರ ಟೊಮೆಟೋಗೆ ಝಡ್‌ ಪ್ಲಸ್‌ ಭದ್ರತೆ ಒದಗಿಸಬೇಕು ಎಂದು ವ್ಯಂಗ್ಯವಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!