
ನವದೆಹಲಿ(ಡಿ.13): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ಮುಂದುವರೆದಿದೆ. ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳು ಹಿಂಸಾಚಾರಕ್ಕೆ ನಲುಗಿವೆ.
ಈ ಹಿನ್ನೆಲೆಯಲ್ಲಿ ಇದೇ ಭಾನುವಾರ(ಡಿ.15) ಮೇಘಾಲಯದ ರಾಜಧಾನಿ ಶಿಲ್ಲಾಂಗ್’ಗೆ ಭೇಟಿ ನೀಡಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ತೀವ್ರ ಪ್ರತಿಭಟನೆಯ ಕಾರಣಕ್ಕೆ ತಮ್ಮ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.
ಪೌರತ್ವ ಕಾಯ್ದೆ: ಸುಪ್ರೀಂ ಕದ ತಟ್ಟಿದ ಕಾಂಗ್ರೆಸ್!
ಶಿಲ್ಲಾಂಗ್’ನಲ್ಲಿರುವ ಈಶಾನ್ಯ ಭಾಗದ ಪೊಲೀಸ್ ಅಕಾಡಮಿಗೆ ಇದೇ ಭಾನುವಾರ ಅಮಿತ್ ಶಾ ಭೇಟಿ ನೀಡಲಿದ್ದರು. ಆದರೆ CAB ವಿರುದ್ಧದ ತೀವ್ರ ಪ್ರತಿಭಟನೆ ಹಿನ್ನೆಲೆಯಲ್ಲಿ ಅಮಿತ್ ಶಾ ತಮ್ಮ ಪ್ರವಾಸ ರದ್ದುಗೊಳಿಸಿದ್ದಾರೆ.
ಪೌರತ್ವ ಮಸೂದೆಗೆ ರಾಷ್ಟ್ರಪತಿ ಅಂಕಿತ: ಇಂದಿನಿಂದಲೇ ಕಾನೂನು ಜಾರಿ!
ಶಿಲ್ಲಾಂಗ್’ನಲ್ಲಿ ಈಗಾಗಲೇ ಕರ್ಫ್ಯೂ ವಿಧಿಸಲಾಗಿದ್ದು, ಮುಂದಿನ 48 ಗಂಟೆಗಳ ಕಾಲ ಇಂಟರ್’ನೆಟ್ ಸ್ಥಗಿತಗೊಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ