
ನವದೆಹಲಿ(ಆ.14): ಕೇಂದ್ರ ಗೃಹ ಸಚಿವ ಅಮಿತ್ ಶಾ ಕೊರೋನಾ ವರದಿ ನೆಗೆಟಿವ್ ಬಂದಿದ್ದು, ಅವರು ಮಹಾಮಾರಿಯಿಂದ ಮುಕ್ತಿ ಪಡೆದಿದಿದ್ದು ಆಸ್ಪತ್ರೆಯಿಂಡಿ ಡಿಸ್ಚಾರ್ಜ್ ಆಗಿದ್ದಾರೆ.
ಟ್ವಿಟರ್ ಮೂಲಕ ವಿಚಾರ ತಿಳಿಸಿರುವ ಅಮಿತ್ ಶಾ, ಈ ಸಂದರ್ಭದಲ್ಲಿ ಹಾರೈಸಿದ, ನನಗೆ ಚಿಕಿತ್ಸೆ ನೀಡಿದ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ. ವೈದ್ಯರ ಸಲಹೆ ಮೇರೆಗೆ ಮನೆಲ್ಲೇ ಕೆಲವು ದಿನ ವಿಶ್ರಾಂತಿ ಪಡೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
ಕೊರೋನಾಕ್ಕೆ ತುತ್ತಾಗಿರುವ ಎಸ್ಪಿಬಿ ಆರೋಗ್ಯ ಗಂಭೀರ
ಆಗಸ್ಟ್ 2ರಂದು ಅಮಿತ್ ಶಾರವರ ಕೊರೋನಾ ವೈರಸ್ ವರದಿ ಪಾಸಿಟಿವ್ ಎಂದು ಬಂದಿತ್ತು. ಇದಾದ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕೊರೋನಾ ಸೋಂಕಿನ ಕಾರಣಕ್ಕೆ ಅಮಿತ್ ಶಾ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ತಪ್ಪಿಸಿಕೊಂಡಿದ್ದರು. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸಹ ಕೊರೋನಾ ಗೆದ್ದು ವಾಪಾಸಾಗಿದ್ದರು .
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ