ಆರೋಪಿ ಎಂದಾಕ್ಷಣ ಅಂಥವರ ಮನೆ ಹೇಗೆ ಒಡೆಯಲಾದೀತು? ಬುಲ್ಡೋಜರ್‌ ನ್ಯಾಯಕ್ಕೆ ಸುಪ್ರೀಂ ಆಕ್ರೋಶ

Published : Sep 03, 2024, 11:00 AM ISTUpdated : Sep 03, 2024, 11:21 AM IST
ಆರೋಪಿ ಎಂದಾಕ್ಷಣ ಅಂಥವರ ಮನೆ ಹೇಗೆ ಒಡೆಯಲಾದೀತು? ಬುಲ್ಡೋಜರ್‌ ನ್ಯಾಯಕ್ಕೆ ಸುಪ್ರೀಂ ಆಕ್ರೋಶ

ಸಾರಾಂಶ

ಗಂಭೀರ ಪ್ರಕರಣದ ಆರೋಪಿಗಳ ಮನೆಗೆ ಬುಲ್ಡೋಜರ್‌ ನುಗ್ಗಿಸಿ ಧ್ವಂಸ ಮಾಡುವ ಕೆಲವೊಂದು ರಾಜ್ಯ ಸರ್ಕಾರಗಳ ‘ಬುಲ್ಡೋಜರ್‌ ನ್ಯಾಯ’ ನೀತಿಗೆ ಸುಪ್ರೀಂಕೋರ್ಟ್‌ ಸೋಮವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ನವದೆಹಲಿ: ಗಂಭೀರ ಪ್ರಕರಣದ ಆರೋಪಿಗಳ ಮನೆಗೆ ಬುಲ್ಡೋಜರ್‌ ನುಗ್ಗಿಸಿ ಧ್ವಂಸ ಮಾಡುವ ಕೆಲವೊಂದು ರಾಜ್ಯ ಸರ್ಕಾರಗಳ ‘ಬುಲ್ಡೋಜರ್‌ ನ್ಯಾಯ’ ನೀತಿಗೆ ಸುಪ್ರೀಂಕೋರ್ಟ್‌ ಸೋಮವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಕ್ರಿಮಿನಲ್‌ ಪ್ರಕರಣದಲ್ಲಿ ವ್ಯಕ್ತಿಯೊಬ್ಬ ಆರೋಪಿಯಾಗಿದ್ದಾನೆ ಎಂದು ಆತನ ಮನೆಯನ್ನು ಹೇಗೆ ಒಡೆಯಲಾದೀತು? ಒಂದು ವೇಳೆ, ಆತ/ಆಕೆ ಅಪರಾಧಿಯೇ ಆಗಿದ್ದರೂ ಮನೆ ಧ್ವಂಸಕ್ಕೂ ಮುನ್ನ ನಿಯಮ ಪಾಲಿಸಬೇಕು ಎಂದು ಹೇಳಿದೆ.

ಇದೇ ವೇಳೆ, ತಾನು ಯಾವುದೇ ಅನಧಿಕೃತ ಕಟ್ಟಡಗಳಿಗೆ ರಕ್ಷಣೆ ಒದಗಿಸುವುದಿಲ್ಲ. ಕಟ್ಟಡ ಧ್ವಂಸ ವಿಚಾರವಾಗಿ ಮಾರ್ಗಸೂಚಿ ತರುವುದಾಗಿ ನ್ಯಾಯಮೂರ್ತಿಗಳಾದ ಬಿ.ಆರ್‌. ಗವಾಯಿ ಹಾಗೂ ಕೆ.ವಿ. ವಿಶ್ವನಾಥನ್‌ ಅವರಿದ್ದ ಪೀಠ ಹೇಳಿದೆ. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ದುಷ್ಯಂತ್‌ ದವೆ, ದೇಶಾದ್ಯಂತ ಬುಲ್ಡೋಜರ್‌ ನ್ಯಾಯವನ್ನು ಪಾಲಿಸಲಾಗುತ್ತಿದೆ. ಈ ಸಂಬಂಧ ನ್ಯಾಯಾಲಯ ನಿರ್ದೇಶನ ನೀಡಬೇಕು ಎಂದು ಕೋರಿದರು.

ಅತ್ಯಾಚಾರಕ್ಕೊಳಗಾದ ಬಾಲಕಿ ತಾಯಿಗೆ ಯೋಗಿ ಭರವಸೆ, ಆರೋಪಿ ಶಾಪ್ ಮೇಲೆ ನುಗ್ಗಿದ ಬುಲ್ಡೋಜರ್!

ಇದೇ ವೇಳೆ, ವಾದಿಸಿದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ಕ್ರಿಮಿನಲ್‌ ಪ್ರಕರಣಗಳಲ್ಲಿ ಭಾಗಿಯಾದ ಕಾರಣ ಪ್ರಕರಣದ ಆರೋಪಿಯ ಯಾವುದೇ ಸ್ಥಿರಾಸ್ತಿಯನ್ನು ನೆಲಸಮಗೊಳಿಸಲು ಆಗದು. ಆ ಕಟ್ಟಡ ಅಕ್ರಮವಾಗಿದ್ದರೆ ಮಾತ್ರ ಆ ರೀತಿ ಕಾರ್ಯಾಚರಣೆ ನಡೆಸಬಹುದು. ಆದರೆ ಈ ಪ್ರಕರಣದಲ್ಲಿ ವಾಸ್ತವಾಂಶವನ್ನು ತಿರುಚಲಾಗಿದೆ ಎಂದರು. ಅಕ್ರಮ ಕಟ್ಟಡವಾಗಿದ್ದರೆ, ಪರವಾಗಿಲ್ಲ. ಆದರೆ ಈ ವಿಚಾರವನ್ನು ಮತ್ತಷ್ಟು ಸರಳಗೊಳಿಸಬೇಕಿದೆ. ಹೀಗಾಗಿ ಮಾರ್ಗಸೂಚಿಗಳನ್ನು ರೂಪಿಸಬೇಕಾಗಿದೆ. ಮುನಿಸಿಪಲ್‌ ಕಾಯ್ದೆಗಳನ್ನು ಉಲ್ಲಂಘಿಸಿದರೆ ಮಾತ್ರ ಕಟ್ಟಡ ನೆಲಸಮ ಮಾಡಲಾಗುತ್ತಿದೆ ಎಂದು ಹೇಳುತ್ತಿದ್ದೀರಿ. ಆದರೆ ಆ ಸಂಬಂಧ ಮಾರ್ಗಸೂಚಿ ಬೇಕಾಗಿದೆ ಎಂದು ನ್ಯಾಯಪೀಠ ಹೇಳಿತು.

ಈ ರೀತಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗುವುದನ್ನು ತಪ್ಪಿಸಲು, ಅಕ್ರಮ ಕಟ್ಟಡಗಳಿಗೆ ಮೊದಲು ನೋಟಿಸ್‌ ನೀಡಿ, ಉತ್ತರಿಸಲು ಸಮಯ ಕೊಡಿ. ಕಾನೂನು ಆಯ್ಕೆಗಳನ್ನು ಪರಿಗಣಿಸಲು ಸಮಯ ನೀಡಿ. ಆ ಬಳಿಕವಷ್ಟೇ ನೆಲಸಮ ಮಾಡಿ ಎಂದೂ ಪೀಠ ಹೇಳಿತು.

ಹಿಂದೂಗಳ ಗುರಿಯಾಗಿಸಿ ಚಾಕು ದಾಳಿಸಿ ನಡೆಸಿದ್ದ ಆರೋಪಿಯ 5 ಅಂತಸ್ತಿನ ಮನೆ ಧ್ವಂಸ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಕ್ರಮ ಸಂಬಂಧದ ಹಾದಿ ಹಿಡಿದ ಅಮ್ಮ: ಆಕೆಯ ಇಬ್ಬರು ಪುಟ್ಟ ಮಕ್ಕಳ ಮೋರಿಗೆಸೆದ ಪ್ರಿಯಕರ
19ರ ತರುಣನ ಜೊತೆ ಮಗಳ ಮದುವೆಗೆ ನಿರಾಕರಿಸಿದ ಪ್ರೇಯಸಿ ಮನೆಯವರು: ಕರೆಂಟ್ ಟವರ್ ಏರಿ ಪ್ರಿಯಕರನ ಹೈಡ್ರಾಮಾ