ಚುನಾವಣೆಗೂ ಮುನ್ನ ಎಷ್ಟು ಜನರನ್ನು ಜೈಲಿಗೆ ಹಾಕ್ತೀರಿ? : ತಮಿಳುನಾಡು ಸರ್ಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ

Published : Apr 09, 2024, 11:40 AM IST
ಚುನಾವಣೆಗೂ ಮುನ್ನ ಎಷ್ಟು ಜನರನ್ನು ಜೈಲಿಗೆ ಹಾಕ್ತೀರಿ? : ತಮಿಳುನಾಡು ಸರ್ಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ

ಸಾರಾಂಶ

ಜಾಲತಾಣದಲ್ಲಿ ಆರೋಪ ಮಾಡಿದವರನ್ನೆಲ್ಲಾ ಜೈಲಿಗೆ ಹಾಕಲಾಗದು. ಚುನಾವಣೆ ಮುಗಿಯುವ ಮುನ್ನ ಹೀಗೆ ಜನರನ್ನು ಜೈಲಿಗೆ ಹಾಕುತ್ತಾ ಹೋದರೆ, ಎಷ್ಟು ಜನರನ್ನು ಜೈಲಿಗೆ ಹಾಕಬೇಕಾಗುತ್ತದೆ ಎಂದು ಸುಪ್ರೀಂಕೊರ್ಟ್‌ ಪ್ರಶ್ನಿಸಿದೆ. ಅಲ್ಲದೆ ಇಂಥದ್ದ ಪ್ರಕರಣದಲ್ಲಿ ತಮಿಳನಾಡಿನ ಮುಖ್ಯಮಂತ್ರಿ ಸ್ಟಾಲಿನ್‌ ವಿರುದ್ಧ ಆರೋಪ ಮಾಡಿದ್ದ ಯೂಟ್ಯೂಬರ್‌ಗೆ ಜಾಮೀನು ನೀಡಿದೆ.

ನವದೆಹಲಿ: ಜಾಲತಾಣದಲ್ಲಿ ಆರೋಪ ಮಾಡಿದವರನ್ನೆಲ್ಲಾ ಜೈಲಿಗೆ ಹಾಕಲಾಗದು. ಚುನಾವಣೆ ಮುಗಿಯುವ ಮುನ್ನ ಹೀಗೆ ಜನರನ್ನು ಜೈಲಿಗೆ ಹಾಕುತ್ತಾ ಹೋದರೆ, ಎಷ್ಟು ಜನರನ್ನು ಜೈಲಿಗೆ ಹಾಕಬೇಕಾಗುತ್ತದೆ ಎಂದು ಸುಪ್ರೀಂಕೊರ್ಟ್‌ ಪ್ರಶ್ನಿಸಿದೆ. ಅಲ್ಲದೆ ಇಂಥದ್ದ ಪ್ರಕರಣದಲ್ಲಿ ತಮಿಳನಾಡಿನ ಮುಖ್ಯಮಂತ್ರಿ ಸ್ಟಾಲಿನ್‌ ವಿರುದ್ಧ ಆರೋಪ ಮಾಡಿದ್ದ ಯೂಟ್ಯೂಬರ್‌ಗೆ ಜಾಮೀನು ನೀಡಿದೆ.

ಎ. ದುರೈಮುರುಗನ್‌ ಸತ್ತಾಯ್‌ ಎಂಬ ಯೂಟ್ಯೂಬರ್, 2021ರಲ್ಲಿ ಸ್ಟಾಲಿನ್‌ ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌ ಹಾಕಿದ್ದರು. ಈ ಕೇಸಲ್ಲಿ ಸತ್ತಾಯ್‌ರನ್ನು ಬಂಧಿಸಿ ಬಳಿಕ ಷರತ್ತಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಆದರೆ ಬಿಡುಗಡೆ ಬಳಿಕ ಅವರು ಷರತ್ತು ಉಲ್ಲಂಘಿಸಿದ್ದಾರೆ ಎಂದು ಬಂಧಿಸಲಾಗಿತ್ತು. ಇದನ್ನು ಹೈಕೋರ್ಟ್‌ ಕೂಡ ಎತ್ತಿಹಿಡಿದಿತ್ತು.ಇದನ್ನು ಪ್ರಶ್ನಿಸಿ ಸತ್ತಾಯ್‌ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾ. ಅಭಯ್‌ ಎಸ್‌ ಓಕಾ ಮತ್ತು ನ್ಯಾ. ಉಜ್ಜಲ್‌ ಭುಯಾನ್ ಅವರನ್ನೊಳಗೊಂಡ ನ್ಯಾಯಪೀಠ, ‘ವೈಜ್ಞಾನಿಕ ಸಂಶೋಧನೆಗಳು ಮನುಕುಲದ ಒಳಿತಾಗಿ ಮಾಡಿರುವುದು. ಅಂತರ್ಜಾಲ ಕೂಡಾ ಅಂಥದ್ದೇ ಒಂದು ಅದ್ಭುತ ಸಂಶೋಧನೆ. ಇದು ಹಲವರ ಜೀವನವನ್ನು ಬದಲಾಯಿಸಿದೆ. ಒಬ್ಬ ಸಾಮಾನ್ಯ ವ್ಯಕ್ತಿ ಕೂಡಾ ತನ್ನ ದೈನಂದಿನ ಆಗು, ಕೌಶಲ್ಯಗಳನ್ನು ಯೂಟ್ಯೂಬ್‌ನಲ್ಲಿ ಪ್ರಕಟಿಸುತ್ತಾನೆ. ಇಂದಿನ ಸಮಾಜದಲ್ಲಿ ಬಹುತೇಕ ಜನರ ಮನೆಯಲ್ಲಿ ಯೂಟ್ಯೂಬ್‌ ನೋಡಿಯೇ ಅಡುಗೆ ಸಿದ್ಧಪಡಿಸುವ ಸಂಪ್ರದಾಯ ಬೆಳೆದಿದೆ’ ಎಂದಿತು.

ಲೋಕಸಭೆ ಚುನಾವಣೆ ಸಮೀಕ್ಷೆ: ಕರ್ನಾಟಕದಲ್ಲಿ ಈ ಬಾರಿಯೂ ಬಿಜೆಪಿ ಪಾಸ್, ತಮಿಳುನಾಡು- ಕೇರಳದಲ್ಲಿ ಪ್ಲಸ್

ಹೀಗಾಗಿರುವ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಹಾಕಿದ ಎಲ್ಲರನ್ನೂ ಬಂಧಿಸುತ್ತಾ ಕೂರಲಾಗದು. ಹಾಗೆ ಮಾಡಿದರೆ ಚುನಾವಣೆ ಮುಗಿಯುವ ಮುನ್ನ ಎಷ್ಟು ಜನರನ್ನು ಜೈಲಿಗೆ ಹಾಕಬೇಕಾಗುತ್ತದೆ ಎಂದು ಹೇಳಿ..’ ಎಂದು ಸತ್ತಾಯ್‌ ಜಾಮೀನು ಅರ್ಜಿ ವಿರೋಧಿಸಿದ್ದ ತಮಿಳುನಾಡು ಸರ್ಕಾರಕ್ಕೆ ಪ್ರಶ್ನೆ ಮಾಡಿತು. ಜೊತೆಗೆ ಜಾಮೀನು ನೀಡುವುದಾದರೆ ಷರತ್ತು ವಿಧಿಸಬೇಕೆಂಬ ಬೇಡಿಕೆಯನ್ನೂ ತಳ್ಳಿಹಾಕಿತು.

ದಕ್ಷಿಣ ರಾಜ್ಯಗಳ ಸಮರ ತೀವ್ರ: ಕರ್ನಾಟಕ ಬಳಿಕ ಈಗ ಕೇಂದ್ರದ ವಿರುದ್ಧ ತ.ನಾಡು ಸುಪ್ರೀಂಗೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

18 ದಿನದಲ್ಲಿ 10 ಲಕ್ಷ ಪ್ರಯಾಣಿಕರ ಇಂಡಿಗೋ ಟಿಕೆಟ್‌ ರದ್ದು
ಬೆಂಗ್ಳೂರಲ್ಲಿ ಸಿ-130 ವಿಮಾನ ವಿರ್ವಹಣಾ ಕೇಂದ್ರಕ್ಕೆ ಶಂಕು