ರಾಮಮಂದಿರ ಸಿಬ್ಬಂದಿ ಆಸ್ತಿಯಲ್ಲಿ ಎಷ್ಟು ಹೆಚ್ಚಳ? ಬೆಚ್ಚಿಬೀಳಿಸುವ ಅಂಕಿ ಅಂಶ ಬಹಿರಂಗ

Published : Jun 29, 2026, 05:41 AM IST
Ayodhya SIT

ಸಾರಾಂಶ

ಅಯೋಧ್ಯೆಯ ರಾಮಮಂದಿರದಲ್ಲಿ ಭಕ್ತರು ನೀಡಿದ ಕಾಣಿಕೆ ಹಣವನ್ನು ದೋಚಿದ ಆರೋಪ ಕೇಳಿಬಂದಿದೆ. ಹಣ ಎಣಿಕೆ ಕೆಲಸದಲ್ಲಿದ್ದ ಸಿಬ್ಬಂದಿ ಅತಿ ಕಡಿಮೆ ಅವಧಿಯಲ್ಲಿ ಐಷಾರಾಮಿ ಕಾರು, ಮನೆ ಖರೀದಿಸಿದ್ದು, ಈ ಅಕ್ರಮದ ಬಗ್ಗೆ ಟ್ರಸ್ಟ್‌ಗೆ ಮೊದಲೇ ಅರಿವಿದ್ದರೂ ನಿರ್ಲಕ್ಷ್ಯ ವಹಿಸಿತ್ತು ಎಂಬ ಆರೋಪವೂ ಇದೆ.

ಅಯೋಧ್ಯೆ: ಇಲ್ಲಿನ ರಾಮಮಂದಿರಕ್ಕೆ ಭಕ್ತರು ನೀಡಿದ ಕಾಣಿಕೆ ಹಣ ದೋಚಿದ್ದ ಆರೋಪಿಗಳ ಬ್ರಹ್ಮಾಂಡ ಭ್ರಷ್ಟಾಚಾರ ದಿನೇ ದಿನೇ ಬೆಳಕಿಗೆ ಬರುತ್ತಿದೆ. ಅತ್ಯಂತ ಕಡಿಮೆ ವೇತನ ಹೊಂದಿದ್ದ ದೇಗುಲದ ಕೆಲ ಸಿಬ್ಬಂದಿ, ಹಣ ಎಣಿಕೆಗೆ ನಿಯೋಜಿತ ಗುತ್ತಿಗೆ ಸಿಬ್ಬಂದಿಗಳ ಅತ್ಯಲ್ಪ ಅವಧಿಯಲ್ಲೇ ಐಷಾರಾಮಿ ಬೈಕ್‌, ಕಾರು, ಫ್ಲ್ಯಾಟ್‌, ಫಾರ್ಮ್‌ಹೌಸ್‌ ಖರೀದಿಸಿದ್ದು ಕಂಡುಬಂದಿದೆ. ಜೊತೆಗೆ ಕೆಲ ಸಿಬ್ಬಂದಿಗಳ ಆದಾಯಕ್ಕೂ ಅವರು ಹೊಂದಿದ ಆಸ್ತಿಗೂ 100 ಪಟ್ಟು ವ್ಯತ್ಯಾಸ ಕಂಡುಬಂದಿದೆ.

ದೇಗುಲದಲ್ಲಿ ಹುಂಡಿ ಹಣ ಎಣಿಕೆಗೆ ನಿಯೋಜಿತರಾಗಿದ್ದ ಅನುಕಲ್ಪ್‌ ಮಿಶ್ರಾ ಹಾಗೂ ಆತನ ಭಾವ ಲವಕುಶ ಮಿಶ್ರಾ ಈ ಹಿಂದೆ ಬಡವರಾಗಿದ್ದರು. ರಾಮಮಂದಿರ ದೇಣಿಗೆ ಎಣಿಸುವ ಕೆಲಸಕ್ಕೆ ಸೇರಿಕೊಂಡ ಬಳಿಕ ಐಷಾರಾಮಿ ಜೀವನ ಪ್ರಾರಂಭಿಸಿದ್ದರು ಎಂದು ತಿಳಿದುಬಂದಿದೆ.ಈ ಬಗ್ಗೆ ತನಿಖಾಧಿಕಾರಿಗಳಿಗೆ ಅವರ ನೆರೆಹೊರೆಯವರು ಈ ಮಾಹಿತಿ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅನುಕಲ್ಪ್‌ ಮೊದಲು ಮಂದಿರದ ಕೆಲಸಕ್ಕೆ ಸೇರಿದ್ದ. ನಂತರ ಬಂಧು ಲವಕುಶ ಮಿಶ್ರಾನನ್ನೂ ದೇಣಿಗೆ ಎಣಿಕೆ ಕೆಲಸಕ್ಕೆ ಸೇರಿಸಿಕೊಂಡ ಎಂದಿದ್ದಾರೆ.

ಫಾರ್ಮ್‌ಹೌಸ್, 65 ಲಕ್ಷದ ಮನೆ ನಿರ್ಮಾಣ

‘ಅನುಕಲ್ಪ್‌ ಮಿಶ್ರಾ ಕುಟುಂಬ ಈ ಹಿಂದೆ ತೀವ್ರ ಆರ್ಥಿಕ ಸಂಕಷ್ಟದಲ್ಲಿತ್ತು. ಆದರೆ ಈಗ ಅವರಿಗೆ ಯಾವುದರ ಅಗತ್ಯವೂ ಇಲ್ಲ. ಅಷ್ಟೊಂದು ದಿಢೀರ್‌ ಸ್ಥಿತಿವಂತರಾಗಿದ್ದಾರೆ. ಅನುಕಲ್ಪ್ ಇತ್ತೀಚೆಗೆ ಗ್ರಾಮದ ಹೊರವಲಯದಲ್ಲಿ ಫಾರ್ಮ್‌ಹೌಸ್ ಒಂದನ್ನು ನಿರ್ಮಿಸಿದ್ದಾನೆ. ಕಳೆದ ವರ್ಷ ಅಯೋಧ್ಯೆಯಲ್ಲಿ 65 ಲಕ್ಷ ರು.ಗಳ ಮನೆಯನ್ನೂ ಖರೀದಿಸಿದ್ದಾನೆ. ಅವನ ಬಳಿ ಈಗಾಗಲೇ ಒಂದು ವಾಹನವಿದ್ದರೂ, ಮತ್ತೊಂದು ಸ್ಕಾರ್ಪಿಯೋ ಎಸ್‌ಯುವಿ ಬುಕ್ ಮಾಡಲು ಮುಂದಾಗಿದ್ದ’ ಎಂದು ಗೊತ್ತಾಗಿದೆ.

‘ಇನ್ನು ಅವನ ಭಾವ ಲವಕುಶ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದವನು ಇತ್ತೀಚೆಗೆ 1 ಲಕ್ಷ ರು.ಗಳಿಗೂ ಹೆಚ್ಚು ಬೆಲೆಯ ಬೈಕ್‌ ಖರೀದಿಸಿದ್ದಾನೆ’ ಎಂದು ತಿಳಿಸಿದ್ದಾರೆ.

ಮೊದಲೇ ಅಕ್ರಮದ ಅರಿವಿದ್ದೂ ಟ್ರಸ್ಟ್‌ ನಿರ್ಲಕ್ಷ್ಯ?

ಅಯೋಧ್ಯೆ: ರಾಮಮಂದಿರದ ದೇಣಿಗೆ ಅಕ್ರಮದ ಕುರಿತು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ಗೆ ಮೊದಲೇ ಮಾಹಿತಿಯಿತ್ತು. ಆದರೂ ದೂರು ದಾಖಲಿಸದೆ ನಿರ್ಲಕ್ಷ್ಯ ತೋರಿತು ಎಂಬ ಆರೋಪ ಕೇಳಿಬಂದಿದೆ.

ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್‌ ಮೌಖಿಕ ಸೂಚನೆ ಮೇರೆಗೆ ಟ್ರಸ್ಟ್‌ನ ಪದಾಧಿಕಾರಿಗಳು ಅಕ್ರಮದ ಕುರಿತು ಪೊಲೀಸರಿಗೆ ಮಾಹಿತಿ ನೀಡಿದರು. ಅದರ ಹಿನ್ನೆಲೆಯಲ್ಲಿ ಪೊಲೀಸರು ಜೂ.5ರಂದು ಆರೋಪಿ ಅವಿನಾಶ್‌ ಶುಕ್ಲಾನ ಮನೆ ಮೇಲೆ ದಾಳಿ ನಡೆಸಿ ಹಣವನ್ನು ವಶಪಡಿಸಿಕೊಂಡರು. ಆದರೆ ಟ್ರಸ್ಟ್‌ ಪೊಲೀಸರಿಗೆ ಯಾವುದೇ ಅಧಿಕೃತ ದೂರು ನೀಡಿರಲಿಲ್ಲ. ಅಂದು ನಡೆದ ಶೋಧ ಅನಧಿಕೃತವಾಗಿ ನಡೆದಿತ್ತೇ ಹೊರತು, ಎಫ್‌ಐಆರ್‌ ದಾಖಲಾಗಿರಲಿಲ್ಲ ಎಂದು ತಿಳಿದುಬಂದಿದೆ. ಇದು ಆರಂಭದಲ್ಲಿ ಟ್ರಸ್ಟ್‌ ಮೌನ ವಹಿಸಿದ್ದೇಕೆ ಎಂಬ ಪ್ರಶ್ನೆ ಮೂಡುವಂತೆ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India Latest News Live: ರಾಮಮಂದಿರ ಸಿಬ್ಬಂದಿ ಆಸ್ತಿಯಲ್ಲಿ ಎಷ್ಟು ಹೆಚ್ಚಳ? ಬೆಚ್ಚಿಬೀಳಿಸುವ ಅಂಕಿ ಅಂಶ ಬಹಿರಂಗ
Viral Video: ಸ್ನೇಹಿತರ ಜೊತೆ ಹಾಡ್ತಾ ಹಾಡ್ತಾ ಸ್ವಿಮ್ಮಿಂಗ್ ಪೂಲ್‌ಗೆ ಜಿಗಿದ ಯುವಕ, ಆಮೇಲಾಗಿದ್ದು ದುರಂತ!