ಮುಂಬೈ-ಹೌರಾ ಪ್ರಯಾಣಿಕರ ರೈಲು ಅಪಘಾತ, ಕನಿಷ್ಠ ಇಬ್ಬರು ಬಲಿ, 20 ಮಂದಿಗೆ ಗಾಯ

Published : Jul 30, 2024, 09:41 AM IST
ಮುಂಬೈ-ಹೌರಾ ಪ್ರಯಾಣಿಕರ ರೈಲು ಅಪಘಾತ, ಕನಿಷ್ಠ ಇಬ್ಬರು ಬಲಿ, 20 ಮಂದಿಗೆ ಗಾಯ

ಸಾರಾಂಶ

ಮುಂಬೈ-ಹೌರಾ  ಪ್ರಯಾಣಿಕರ ರೈಲಿನ 18 ಬೋಗಿಗಳು ಜಾರ್ಖಂಡ್‌  ನಲ್ಲಿ  ಹಳಿ ತಪ್ಪಿದ ಪರಿಣಾಮ ಕನಿಷ್ಠ ಇಬ್ಬರು ಮೃತಪಟ್ಟು 20 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. 

ಮುಂಬೈ (ಜು.30): ಮುಂಬೈ-ಹೌರಾ (Howrah-Mumbai passenger train)ಪ್ರಯಾಣಿಕರ ರೈಲಿನ 18 ಬೋಗಿಗಳು ಜಾರ್ಖಂಡ್‌  ಚಕ್ರಧರ್ಪುರ  ಬಳಿ ಹಳಿ ತಪ್ಪಿದ ಪರಿಣಾಮ ಕನಿಷ್ಠ ಇಬ್ಬರು ಮೃತಪಟ್ಟು 20 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. 

ಹೌರಾ-ಸಿಎಸ್‌ಎಂಟಿ ಎಕ್ಸ್ಪ್ರೆಸ್ ಜಾರ್ಖಂಡ್‌ನ ಚಕ್ರಧರ್ಪುರ ವಿಭಾಗದ ರಾಜ್ಖರ್ಸ್ವಾನ್ ಪಶ್ಚಿಮ ಹೊರ ಮತ್ತು ಬಾರಾಬಂಬೂ ನಡುವಿನ ಚಕ್ರಧರ್ಪುರ ಬಳಿ  ರೈಲಿನ 18 ಭೋಗಿಗಳು ಹಳಿ ತಪ್ಪಿದೆ. ಇದರಲ್ಲಿ 16 ಪ್ರಯಾಣಿಕರ ಭೋಗಿಗಳು. ಪಂದು ಪವರ್ ಕಾರ್, ಮತ್ತೊಂದು ಪ್ಯಾಂಟ್ರಿ ಕಾರು ಎಂದು ವರದಿ ತಿಳಿಸಿದೆ. ಗೂಡ್ಸ್ ರೈಲು ಹಳಿತಪ್ಪಿದಾಗ ಅದರ ಬದಿಯಲ್ಲಿ ಹೋಗುತ್ತಿದ್ದ ಪ್ರಯಾಣಿಕರ ರೈಲಿಗೆ ತಾಗಿ ಈ ದುರ್ಘಟನೆ ನಡೆದಿದೆ ಎಂದು ಪ್ರಾಥಮಿಕ ವರದಿ ತಿಳಿಸಿದೆ.

ಕೇರಳದಲ್ಲಿ ಭೀಕರ ಭೂಕುಸಿತ, 19ಕ್ಕೂ ಹೆಚ್ಚು ಮಂದಿ ಬಲಿ! 100ಕ್ಕೂ ಹೆಚ್ಚು ಮಂದಿ ಕಣ್ಮರೆ!

ಸಹಾಯವಾಣಿ ತೆರೆಯಲಾಗಿದ್ದು, ಮಹಾರಾಷ್ಟ್ರ - ಮುಂಬೈ ಸಹಾಯವಾಣಿ: 022-22694040; ನಾಗ್ಪುರ ಸಹಾಯವಾಣಿ ಸಂಖ್ಯೆ: 7757912790; ಭೂಸಾವಲ್ ಸಹಾಯವಾಣಿ ಸಂಖ್ಯೆ: 08799982712.

ಘಟನೆಯ ಬಗ್ಗೆ ಮಾತನಾಡಿದ ಭಾರತೀಯ ರೈಲ್ವೆ, ಎಆರ್‌ಎಂಇ ಸಿಬ್ಬಂದಿ ಮತ್ತು ಎಡಿಆರ್‌ಎಂ ಸಿಕೆಪಿ ಸ್ಥಳದಲ್ಲಿದೆ ಮತ್ತು  ಗಾಯಗೊಂಡ ಎಲ್ಲ ಪ್ರಯಾಣಿಕರನ್ನು ಜಮ್ಶೆಡ್‌ಪುರದ ಟಾಟಾ ಮುಖ್ಯ ಆಸ್ಪತ್ರೆಗೆ ರವಾನಿಸಲಾಗಿದೆ.

ಭೂಕುಸಿತದಿಂದ ಹಳಿ ಮೇಲೆ ಬಿದ್ದ ಮಣ್ಣು, ಇನ್ನು 15 ದಿನ ಮಂಗಳೂರು-ಬೆಂಗಳೂರು ರೈಲು ಸಂಚಾರ ಡೌಟ್!

ಘಟನೆ ಬಳಿಕ ಹೌರಾ-ತಿಟಲ್‌ಗಢ-ಕಾಂತಬಾಂಜಿ ಎಕ್ಸ್‌ಪ್ರೆಸ್, ಖರಗ್‌ಪುರ-ಜಾರ್‌ಗ್ರಾಮ್-ಧನ್‌ಬಾದ್ ಎಕ್ಸ್‌ಪ್ರೆಸ್, ಹೌರಾ-ಬಾರ್ಬಿಲ್-ಹೌರಾ ಜನ್ ಶತಾಬ್ದಿ ಎಕ್ಸ್‌ಪ್ರೆಸ್, ಟಾಟಾನಗರ-ಇಟ್ವಾರಿ ಎಕ್ಸ್‌ಪ್ರೆಸ್ ಮತ್ತು ಎಲ್‌ಟಿಟಿ-ಎಕ್ಸ್‌ಪ್ರೆಸ್ ಸೇರಿದಂತೆ ಐದು   ರೈಲುಗಳನ್ನು ಭಾರತೀಯ ರೈಲ್ವೆ ರದ್ದುಗೊಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪೌರತ್ವಕ್ಕೂ ಮುನ್ನ ಮತಪಟ್ಟೀಲಿ ಹೆಸರು : ಸೋನಿಯಾಗೆ ನೋಟಿಸ್‌
ಲೋಕಸಭೆಯಲ್ಲಿ ಮತಚೋರಿ ಕದನ : ಕೈ ಮತಗಳವಿಂದ ಅಂಬೇಡ್ಕರ್‌ಗೆ ಸೋಲು-ಬಿಜೆಪಿ