
ಹೈದರಾಬಾದ್ (ಮೇ.01) ಕೌಟುಂಬಿಕ ಕಲಹ ಪ್ರಕರಣಗಳು ಹೆಚ್ಚಾಗುತ್ತದ್ದಂತೆ ದುರಂತ ಘಟನೆಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದೀಗ ಹೈದರಾಬಾದ್ನ 36 ವರ್ಷದ ಸಾಫ್ಟ್ವೇರ್ ಎಂಜಿನೀಯರ್ ದುರಂತ ಅಂತ್ಯ ಕಂಡ ಘಟನೆ ಭಾರಿ ಕೋಲಾಹಲ ಸೃಷ್ಟಿಸಿದೆ. ಕೆರೆಗೆ ಹಾರಿ ಟೆಕ್ಕಿ ದುರಂತ ಅಂತ್ಯಕಂಡಿದ್ದಾನೆ. ಈತ ಬರೆದ 19 ಪುಟಗಳ ಡೆತ್ ನೋಟ್ ಸಾವಿನ ಹಿಂದಿನ ಕತೆ ಬಹಿರಂಗಪಡಿಸಿದೆ. ಪ್ರಮುಖವಾಗಿ ಈ ಡೆತ್ ನೋಟ್ನಲ್ಲಿ ತನ್ನ ಪತ್ನಿ ಹಲವು ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಳೆ ಅನ್ನೋ ಸ್ಫೋಟಕ ಮಾಹಿತಿಯನ್ನು ಬರೆದಿಟ್ಟಿದ್ದಾನೆ.
ಪ್ರಾಥಮಿಕ ತನಿಖೆಯ ಪ್ರಕಾರ, ಕಳೆದ ಒಂದೂವರೆ ವರ್ಷದಿಂದ ತನ್ನ ಪತ್ನಿ ಮೂವರು ಬೇರೆ ಪುರುಷರೊಂದಿಗೆ ಸಂಬಂಧ ಹೊಂದಿದ್ದಳು ಎಂದು ಮೃತ ಟೆಕ್ಕಿ ಡೆತ್ ನೋಟ್ನಲ್ಲಿ ಆರೋಪಿಸಿದ್ದಾರೆ. ಈ ಸಂಬಂಧಗಳ ಬಗ್ಗೆ ತನಗೆ ಸೋಷಿಯಲ್ ಮೀಡಿಯಾ ಪೋಸ್ಟ್ಗಳ ಮೂಲಕ ಗೊತ್ತಾಗಿದ್ದು, ಇದರಿಂದ ತೀವ್ರ ಮಾನಸಿಕ ಯಾತನೆ ಅನುಭವಿಸಿದ್ದಾಗಿ ಅವರು ಬರೆದುಕೊಂಡಿದ್ದಾರೆ. ಪತ್ನಿಯ ನಡೆ, ತನಗೆ ಮಾಡಿರುವ ಮೋಸದಿಂದ ತನಗೆ ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ಡೆತ್ ನೋಟ್ನಲ್ಲಿ ಹೇಳಿಕೊಂಡಿದ್ದಾನೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಡೆತ್ ನೋಟ್ನಲ್ಲಿರುವ ಆರೋಪಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದ್ದಾರೆ. ಘಟನೆಗೆ ಕಾರಣವಾದ ಅಂಶಗಳನ್ನು ಪತ್ತೆಹಚ್ಚಲು ಅಧಿಕಾರಿಗಳು ಫೋನ್ಗಳು ಮತ್ತು ಆನ್ಲೈನ್ ಚಟುವಟಿಕೆ ಸೇರಿದಂತೆ ಡಿಜಿಟಲ್ ಸಾಕ್ಷ್ಯಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಇತ್ತ ಮೃತನ ಪೋಷಕರು ಹಾಗೂ ಕುಟುಂಬಸ್ಥರು , ಪತ್ನಿಯ ಮಾನಸಿಕ ಕಿರುಕುಳ, ಅಕ್ರಮ ಸಂಬಂಧಗಳಿಂದ ದುರಂತ ಅಂತ್ಯಕಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಸದ್ಯ ತನಿಖೆ ಪ್ರಗತಿಯಲ್ಲಿದ್ದು, ಡೆತ್ ನೋಟ್ನಲ್ಲಿ ಉಲ್ಲೇಖಿಸಿರುವ ಎಲ್ಲಾ ಆರೋಪಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣವು ಮತ್ತೊಮ್ಮೆ ಮಾನಸಿಕ ಆರೋಗ್ಯ, ಸಂಬಂಧಗಳಲ್ಲಿನ ಬಿಕ್ಕಟ್ಟು ಮತ್ತು ವೈಯಕ್ತಿಕ ಸಂಕಟವನ್ನು ಹೆಚ್ಚಿಸುವಲ್ಲಿ ಸೋಷಿಯಲ್ ಮೀಡಿಯಾದ ಪಾತ್ರದ ಬಗ್ಗೆ ಕಳವಳ ಮೂಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ