‘ಗೋಮಾಂಸ ಪ್ರಚಾರಕಿ’ ಕಾಮಿಯಾ ಜಗನ್ನಾಥ ದೇಗುಲ ಪ್ರವೇಶ ಭಾರೀ ವಿವಾದ

Published : Dec 25, 2023, 10:15 AM IST
‘ಗೋಮಾಂಸ ಪ್ರಚಾರಕಿ’ ಕಾಮಿಯಾ ಜಗನ್ನಾಥ ದೇಗುಲ ಪ್ರವೇಶ ಭಾರೀ ವಿವಾದ

ಸಾರಾಂಶ

ಖ್ಯಾತ ಯೂಟ್ಯೂಬರ್‌ ಕಾಮಿಯಾ ಜನಿ ಅವರ ಜಗನ್ನಾಥ ದೇಗುಲ ಪ್ರವೇಶ ಭಾರೀ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ಭುವನೇಶ್ವರ (ಡಿ.25): ಖ್ಯಾತ ಯೂಟ್ಯೂಬರ್‌ ಕಾಮಿಯಾ ಜನಿ ಅವರ ಜಗನ್ನಾಥ ದೇಗುಲ ಪ್ರವೇಶ ಭಾರೀ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಕಾಮಿಯಾ, ತನ್ನ ಯೂಟ್ಯೂಬ್‌ ವಿಡಿಯೋಗಳಲ್ಲಿ ಗೋಮಾಂಸ ತಿನ್ನುತ್ತಾಳೆ ಮತ್ತು ಭಕ್ಷಣೆಯನ್ನು ಪ್ರಚಾರ ಮಾಡುತ್ತಾಳೆ. ಹೀಗಿರುವಾಗ ಹಿಂದುಯೇತರರಿಗೆ ಪ್ರವೇಶ ಇಲ್ಲದ ಆಕೆಗೆ ಜಗನ್ನಾಥ ದೇಗುಲ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟಿದ್ದು ಏಕೆ? ಇದು ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ ಎಂದು ಹಲವು ಬಿಜೆಪಿ ನಾಯಕರು ಟೀಕಿಸಿದ್ದಾರೆ.

ರಾಜ್ಯದ 700 ಪ್ರೌಢಶಾಲೆಗಳಲ್ಲಿ ಚಿತ್ರಕಲಾ ಶಿಕ್ಷಕ ಹುದ್ದೆಗಳು ಖಾಲಿ

ಆದರೆ ಇದಕ್ಕೆ ಸ್ಪಷ್ಟನೆ ನೀಡಿರುವ ಕಾಮಿಯಾ, ನಾನು ಎಂದಿಗೂ ಗೋಮಾಂಸ ತಿಂದಿಲ್ಲ. ನನ್ನ ವಿರುದ್ಧ ಗೋಮಾಂಸ ಭಕ್ಷಣೆಯ ಆರೋಪಕ್ಕೆ ಬಳಲಾದ ಫೋಟೋ, ನನ್ನ ಕೇರಳ ಭೇಟಿಯ ವೇಳೆ ಅಲ್ಲಿಯ ಇಬ್ಬರು ಟ್ರಕ್‌ ಚಾಲಕರ ಆರಂಭಿಸಿದ್ದ ಹೋಟೆಲ್‌ನ ದೃಶ್ಯ. ಅಲ್ಲಿ ನಾನು ಗೋಮಾಂಸ ತಿಂದಿಲ್ಲ ಎಂದಿದ್ದಾರೆ. ಜೊತೆಗೆ ಹಿಂದೂ ಧರ್ಮವನ್ನು ಆಚರಣೆ ಮಾಡುವವಳಾಗಿ ಪುರಿ ದೇಗುಲದಲ್ಲಿ ನಡೆಯುತ್ತಿರುವ ‘ಮಹಾಪ್ರಸಾದ’ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಯ ಕುರಿತು ವಿಡಿಯೋ ಮಾಡಲು ಮತ್ತು ಜಗನ್ನಾಥನ ಆಶೀರ್ವಾದ ಪಡೆಯಲು ತೆರಳಿದ್ದು, ದೇಗುಲದ ಯಾವುದೇ ನಿಯಮ ಉಲ್ಲಂಘಿಸಿಲ್ಲ’ ಎಂದು ಇನ್ಸ್ಟಾಗ್ರಾಮ್‌ನಲ್ಲಿ ವಿಡಿಯೋ ಸಂದೇಶ ಹಾಕಿದ್ದಾರೆ.

ಯಾರು ಬುರುಡೆ ಬಿಡುತ್ತಿದ್ದಾರೆ ಎಂಬುದು ಜನರಿಗೆ ಗೊತ್ತು: ಸಿದ್ದುಗೆ ಸಿಂಹ ತಿರುಗೇಟು!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ