
ಕೊರೋನಾ ವೈರಸ್ ನಿಯಂತ್ರಿಸುವ ಉದ್ದೇಶದಿಂದ ದೇಶದಲ್ಲಿ ಲಾಕ್ಡೌನ್ ಆದೇಶ ಜಾರಿಗೊಳಿಸಲಾಗಿದೆ. ಹೀಗಿರುವಾಗ ದೇಶದ ಜನತೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇದಕ್ಕಾಗಿ ನಾನು ದೇಶದ ಜನರಲ್ಲಿ ಕ್ಷಮೆ ಕೇಳುತ್ತೇನೆ ಎಂದು ಮೋದಿ ಹೇಳಿದ್ದಾರೆ.
ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಪಿಎಂ ಮೋದಿ ನಿಮ್ಮನ್ನು ನೀವು ರಕ್ಷಿಸಿಕೊಳ್ಳುವ ಸಲುವಾಗಿ ಲಾಕ್ಡೌನ್ಗೆ ಸಹಕರಿಸಲೇಬೇಕು. ಲಕ್ಷ್ಮಣ ರೇಖೆಯನ್ನು ಪಾಲಿಸಲೇಬೇಕು. ಜಗತ್ತಿನಲ್ಲಿ ಆರೋಗ್ಯ ಭಾಗ್ಯವೇ ಎಲ್ಲಕ್ಕಿಂತ ದೊಡ್ಡದು ಎಂದಿದ್ದಾರೆ
ಯಾರೂ ಕೂಡ ಉದ್ದೇಶಪೂರ್ವಕವಾಗಿ ನಿಯಮ ಉಲ್ಲಂಘಿಸುತ್ತಿಲ್ಲ ಎಂದು ನನಗೆ ಗೊತ್ತು. ಆದರೆ ಕೆಲವರು ಹಾಗೆ ಮಾಡ್ತಿದ್ದಾರೆ. ಅವರಿಗೆ ನಾನು ಹೇಳುವುದೆಂದರೆ ನೀವು ಲಾಕ್ಡೌನ್ ಅನುಸರಿಸದಿದ್ರೆ, ಕೊರೋನಾ ವೈರಸ್ನಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳೋದು ಕಷ್ಟವಾಗುತ್ತದೆ. ಲಾಕ್ಡೌನ್ ಉಲ್ಲಂಘಿಸೋರು ತಮ್ಮ ಜೀವದ ಜೊತೆ ಆಟವಾಡ್ತಿದ್ದಾರೆ ಅಂತ ಮೋದಿ ಹೇಳಿದ್ದಾರೆ.
ಕೆಲವರು ಕೊರೋನಾ ವಿರುದ್ಧ ಮನೆಯ ಒಳಗಲ್ಲ, ಹೊರಗೆ ನಿಂತು ಹೋರಾಡ್ತಿದ್ದಾರೆ. ವೈದ್ಯರು, ನರ್ಸ್ಗಳು, ಪ್ಯಾರಾಮೆಡಿಕಲ್ ಸಿಬ್ಬಂದಿ. ಇವರೆಲ್ಲಾ ಮುಂಚೂಣಿಯಲ್ಲಿ ನಿಂತು ಹೋರಾಡುತ್ತಿರುವ ಸೈನಿಕರು ಅಂತ ಮೋದಿ ವೈದ್ಯಕೀಯ ಸಿಬ್ಬಂದಿಯ ಸೇವೆಗೆ ಕೃತಜ್ಞತೆ ಸಲ್ಲಿಸಿದ್ರು.
ಈ ವೇಳೆ ಪ್ರಧಾನಿ ಮೋದಿ ಅವರೊಂದಿಗೆ ಫೋನ್ ಮೂಲಕ ಮಾತನಾಡಿ ಆಗ್ರಾದ ಅಶೋಕ್ ಕಪೂರ್ ಅವರು, ತಮ್ಮ ಇಡೀ ಕುಟುಂಬದ ಆರು ಜನರಿಗೆ ಕೊರೊನಾ ಸೋಂಕು ತಗುಲಿತ್ತು. ಆದರೆ ಎಲ್ಲರೂ ಈಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದೇವೆ. ನಮಗೆ ಚಿಕಿತ್ಸೆ ನೀಡಿದ ವೈದ್ಯರು, ಅಧಿಕಾರಿಗಳು ಹಾಗೂ ಸರ್ಕಾರಿ ಸಿಬ್ಬಂದಿಗೆ ಧನ್ಯವಾದ ತಿಳಿಸಲು ಇಚ್ಛಿಸುತ್ತೇವೆ ಎಂದರು.
ಇದೇ ವೇಳೆ ಮೋದಿ ನಿಮ್ಮ ಅನುಭವವನ್ನ ಆಡಿಯೋ ಮೂಲಕ ಹಂಚಿಕೊಳ್ಳಿ. ಅದನ್ನ ಎಲ್ಲರಿಗೂ ತಲುಪುವಂತೆ ವೈರಲ್ ಮಾಡಿ ಎಂದು ಹೇಳಿದ್ದಾರೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ