
ರಾಣಿಬಂಧ್ (ಮಾ.16): ‘ಇತ್ತೀಚೆಗಷ್ಟೇ ಕಾಲಿಗೆ ಗಾಯ ಮಾಡಿಕೊಂಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶೀಘ್ರ ಗುಣಮುಖರಾಗಲಿ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಶಿಸಿದ್ದಾರೆ. ಆದರೆ ತಮ್ಮದೇ ನೇತೃತ್ವದ ಟಿಎಂಸಿ ಸರ್ಕಾರದ ದುರಾಡಳಿತದಲ್ಲಿ ಸಾವು-ನೋವು ಕಂಡ ಬಿಜೆಪಿ ಕಾರ್ಯಕರ್ತರ ಕುಟುಂಬದ ನೋವಿನ ಬಗ್ಗೆ ತಮಗೆ ಅರಿವಿದೆಯೇ’ ಎಂದು ಮಮತಾಗೆ ಶಾ ಪ್ರಶ್ನಿಸಿದ್ದಾರೆ.
ಸೋಮವಾರ ಬಂಕುರಾ ಜಿಲ್ಲೆಯ ರಾಣಿಬಂಧ್ನಲ್ಲಿ ನಡೆದ ಬಿಜೆಪಿ ರಾರಯಲಿಯನ್ನುದ್ದೇಶಿಸಿ ಮಾತನಾಡಿದ ಶಾ, ‘ದೀದಿ(ಬ್ಯಾನರ್ಜಿ) ನಿಮ್ಮ ಕಾಲಿಗೆ ಗಾಯವಾದಾಗ ಅದರ ನೋವು ನಿಮಗೆ ಗೊತ್ತಾಯಿತು. ನೀವು ಬೇಗ ಗುಣಮುಖರಾಗಲಿ ಎಂದು ಆಸೆಪಡುತ್ತೇನೆ. ಆದರೆ ಟಿಎಂಸಿ ಗೂಂಡಾಗಳಿಂದ ಹತ್ಯೆಗೀಡಾದ 130 ಬಿಜೆಪಿ ಕಾರ್ಯಕರ್ತರ ಅಮ್ಮಂದಿರ ನೋವಿನ ಬಗ್ಗೆ ನೀವು ಎಂದಾದರೂ ಯೋಚಿಸಿದ್ದೀರಾ? ಖಂಡಿತಾ ಇಲ್ಲ. ಈ ಚುನಾವಣೆಯಲ್ಲಿ ಆ ನೋವಿನ ಪ್ರತಿಫಲವನ್ನು ನೀವು ಕಾಣಲಿದ್ದೀರಿ’ ಎಂದು ಗುಡುಗಿದರು.
‘ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿ ಮಾಡಲಾಗುತ್ತದೆ’ ಎಂದು ಭರವಸೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ