ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ, ಪಟ್ಟು ಬಿಡದ ಮಮತಾ, ಮೇ 9ರ ಪ್ರಮಾಣಕ್ಕೆ ಬಿಜೆಪಿ ಸಜ್ಜು, ಮುಂದೇನು?

Kannadaprabha News   | Kannada Prabha
Published : May 07, 2026, 10:47 AM IST
I will not resign Defiant Mamata rejects defeat as BJP prepares for May 9 oath rav

ಸಾರಾಂಶ

ಪಶ್ಚಿಮ ಬಂಗಾಳದಲ್ಲಿ ಅಭೂತಪೂರ್ವ ಜಯದ ನಂತರ ಬಿಜೆಪಿ ಹೊಸ ಮುಖ್ಯಮಂತ್ರಿಯ ಆಯ್ಕೆಗೆ ಸಿದ್ಧತೆ ನಡೆಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಶಾಸಕಾಂಗ ಸಭೆ ನಡೆದು, ಮೇ 9 ರಂದು ನೂತನ ಸಿಎಂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಕೋಲ್ಕತಾ  (ಮೇ.7): ಪಶ್ಚಿಮ ಬಂಗಾಳ ಸಿಎಂ ಹುದ್ದೆಗೆ ತಾನು ರಾಜೀನಾಮೆ ನೀಡುವುದಿಲ್ಲ ಎಂದು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಸಡ್ಡು ಹೊಡೆದಿರುವ ನಡುವೆಯೇ ಬಿಜೆಪಿ, ಹೊಸ ಮುಖ್ಯಮಂತ್ರಿಯ ಪಟ್ಟಾಭಿಷೇಕಕ್ಕೆ ಸಿದ್ಧತೆ ಆರಂಭಿದೆ. ರಾಜ್ಯದಲ್ಲಿ ತನಗೆ ಅಭೂತಪೂರ್ವ ಜಯ ಸಾಧಿಸಿರುವ ಹಿನ್ನೆಲೆಯಲ್ಲಿ ಶುಕ್ರವಾರ ಸಿಎಂ ಆಯ್ಕೆ ನಡೆಯಲಿದೆ ಹಾಗೂ ಶನಿವಾರ ಪ್ರಮಾಣವಚನ ಸ್ವೀಕಾರ ಏರ್ಪಾಟಾಗಿದೆ.

ಮಮತಾ ಬ್ಯಾನರ್ಜಿ ರಾಜೀನಾಮೆ ನೀಡದೇ ಹೋದರೂ ಹೊಸ ಸಿಎಂ ಪ್ರಮಾಣ ವಚನ ಹೇಗಾಗುತ್ತದೆ ಎಂಬ ಪ್ರಶ್ನೆ ಉದ್ಭವಿಸಿದೆ. ಆದಾಗ್ಯೂ ಈ ಬಿಕ್ಕಟ್ಟಿಗೆ ಪರಿಹಾರ ಸಿಗಬಹುದು ಎಂಬ ಆಶಾವಾದ ಬಿಜೆಪಿ ನಾಯಕರದ್ದು. ಹೀಗಾಗಿ ಬಿಜೆಪಿ ವೀಕ್ಷಕರಾಗಿ ನೇಮಕ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗುರುವಾರ ಕೋಲ್ಕತಾಗೆ ಆಗಮಿಸಲಿದ್ದಾರೆ. ಅಂದು ಸಂಜೆ ಪಕ್ಷದ ಉನ್ನತ ನಾಯಕರ ಜತೆ ಹಾಗೂ ಶುಕ್ರವಾರ ಶಾಸಕಾಂಗ ಸಭೆ ನಡೆಸಲಿದ್ದಾರೆ. ನಂತರ ಹೊಸ ಮುಖ್ಯಮಂತ್ರಿಯನ್ನು ಅಂತಿಮಗೊಳಿಸಿ, ಘೋಷಿಸಲಿದ್ದಾರೆ ಎಂದು ತಿಳಿದುಬಂದಿದೆ.

9ಕ್ಕೆ ಬ್ರಿಗೇಡ್ ಮೈದಾನದಲ್ಲಿ ಶಪಥ:

ಈ ನಡುವೆ, ಬುಧವಾರ ಮಾತನಾಡಿದ ಪ. ಬಂಗಾಳ ಬಿಜೆಪಿ ಅಧ್ಯಕ್ಷ ಸಮಿಕ್ ಭಟ್ಟಾಚಾರ್ಯ, ‘ಹೊಸ ಮುಖ್ಯಮಂತ್ರಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಮೇ 9ರಂದು ನಡೆಯಲಿದೆ. ಕೋಲ್ಕತಾದ ಬ್ರಿಗೇಡ್‌ ಪರೇಡ್‌ ಮೈದಾನದಲ್ಲಿ ಬೆಳಿಗ್ಗೆ 10ರಿಂದ ಕಾರ್ಯಕ್ರಮ ಜರುಗಲಿದೆ’ ಎಂದು ತಿಳಿಸಿದ್ದಾರೆ.

ಪಕ್ಷದ ಮೂಲಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿ, ಸಚಿವ ಅಮಿತ್‌ ಶಾ ಆದಿಯಾಗಿ ಘಟಾನುಘಟಿಗಳು ಪ್ರಮಾಣವಚನದಲ್ಲಿ ಭಾಗಿ ಆಗಲಿದ್ದಾರೆ.

ಐವರ ಹೆಸರು:

ಪ. ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಸತತ 2ನೇ ಬಾರಿ ಮಣಿಸಿರುವ ಸುವೇಂದು ಅಧಿಕಾರಿ, ಬಿಜೆಪಿಯ ಹಾಲಿ ರಾಜ್ಯಾಧ್ಯಕ್ಷ ಸಮಿಕ್‌ ಭಟ್ಟಾಚಾರ್ಯ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ದಿಲೀಪ್‌ ಘೋಷ್‌, ಮಹಿಳಾ ನಾಯಕರಾದ ಅಗ್ನಿಮಿತ್ರಾ ಪೌಲ್‌ ಮತ್ತು ‘ಮಹಾಭಾರತ’ ಧಾರಾವಾಹಿಯ ದ್ರೌಪದಿ ಖ್ಯಾತಿಯ ರೂಪಾ ಗಂಗೂಲಿ ಹೆಸರು ಸಿಎಂ ಸ್ಥಾನಕ್ಕೆ ಕೇಳಿಬರುತ್ತಿದೆ.

ಅಧಿಕಾರಿ ಅವರಿಗೆ ಆರೆಸ್ಸೆಸ್‌ ಹಿನ್ನೆಲೆ ಇಲ್ಲ. ಇದು ಅವರಿಗೆ ಮೈನಸ್‌ ಪಾಯಿಂಟ್ ಆಗಿದೆ. ಹೀಗಾಗಿ ಆರೆಸ್ಸೆಸ್ ಏನು ಸಲಹೆ ನೀಡಲಿದೆ ಎಂಬುದು ಕುತೂಹಲ ಕೆರಳಿಸಿದೆ. ದಿಲೀಪ್ ಘೋಷ್‌ ಆರೆಸ್ಸೆಸ್‌ ಹಿನ್ನೆಲೆಯವರಾಗಿದ್ದು, ಅವರಿಗೆ ಪ್ಲಸ್‌ ಪಾಯಿಂಟ್‌ ಆಗಿದೆ ಎಂದು ಮೂಲಗಳು ತಿಳಿಸಿವೆ.

ಮಹಿಳಾ ಮೀಸಲು ಹೋರಾಟದ ಹಿನ್ನೆಲೆಯಲ್ಲಿ ಮಹಿಳಾ ಸಿಎಂ ಆಯ್ಕೆ ಆದರೂ ಆಗಬಹುದು. ಆದರೆ ಈ ಸಾಧ್ಯತೆ ಬಲು ಕಡಿಮೆ ಎಂದು ಅವು ಹೇಳಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

West Bengal: ಬಿಜೆಪಿ ಬಾವುಟ ಹಾರಿಸುವಾಗ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ, ಸ್ಥಿತಿ ಗಂಭೀರ!
India Latest News Live: ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ, ಪಟ್ಟು ಬಿಡದ ಮಮತಾ, ಮೇ 9ರ ಪ್ರಮಾಣಕ್ಕೆ ಬಿಜೆಪಿ ಸಜ್ಜು, ಮುಂದೇನು?