ತಡರಾತ್ರಿ ಕಾರ್ಯಾಚರಣೆ ಮೂಲಕ ಕೈ ತುಂಡಾಗಿದ್ದ ಯೋಧನ ರಕ್ಷಣೆ!

Published : Apr 13, 2024, 07:25 AM IST
ತಡರಾತ್ರಿ ಕಾರ್ಯಾಚರಣೆ ಮೂಲಕ ಕೈ ತುಂಡಾಗಿದ್ದ ಯೋಧನ ರಕ್ಷಣೆ!

ಸಾರಾಂಶ

ಮುಂಚೂಣಿ ಗಡಿ ಪ್ರದೇಶದಲ್ಲಿ ಕಾರ್ಯನಿರ್ವಹಣೆ ವೇಳೆ ಕೈ ತುಂಡಾಗಿದ್ದ ಯೋಧನೊಬ್ಬನನ್ನು ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆಯು ತಡರಾತ್ರಿ ಕಾರ್ಯಾಚರಣೆ ಮೂಲಕ ರಕ್ಷಿಸಿದ ಘಟನೆ ಲಡಾಖ್‌ನಲ್ಲಿ ನಡೆದಿದೆ.

ನವದೆಹಲಿ (ಏ.13): ಮುಂಚೂಣಿ ಗಡಿ ಪ್ರದೇಶದಲ್ಲಿ ಕಾರ್ಯನಿರ್ವಹಣೆ ವೇಳೆ ಕೈ ತುಂಡಾಗಿದ್ದ ಯೋಧನೊಬ್ಬನನ್ನು ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆಯು ತಡರಾತ್ರಿ ಕಾರ್ಯಾಚರಣೆ ಮೂಲಕ ರಕ್ಷಿಸಿದ ಘಟನೆ ಲಡಾಖ್‌ನಲ್ಲಿ ನಡೆದಿದೆ.

ಯಂತ್ರವೊಂದರಲ್ಲಿ ಕೆಲಸ ಮಾಡುವ ವೇಲೇಹ್ಳೆ ಯೋಧನ ಕೈ ತುಂಡರಿಸಿತ್ತು. ಕೂಡಲೇ ಗಾಯಾಳು ಯೋಧನನ್ನು ಮೊದಲಿಗೆ ಲೇಹ್‌ ವಾಯುನೆಲೆಗೆ ಕರೆತರಲಾಯಿತು. ಅಲ್ಲಿಂದ ದೆಹಲಿಗೆ ವಾಯುಪಡೆಯ ಸಿ-130 ಜೆ ವಿಮಾನದ ಮೂಲಕ ಸ್ಥಳಾಂತರಿಸಿ ಸೇನಾ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಯಿತು.

ಘಟನೆ ನಡೆದಾಗಿನಿಂದ ಕೇವಲ 4 ಗಂಟೆಗಳ ಅವಧಿಯಲ್ಲಿ ಯೋಧನನ್ನು ದೆಹಲಿಗೆ ಕರೆತರಲಾದ ಕಾರಣ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ತುಂಡರಿಸಿದ್ದ ಭಾಗವನ್ನು ಮರಳಿ ಜೋಡಿಸಲಾಗಿದೆ. ಸೇನೆ ಮತ್ತು ವಾಯುಪಡೆಯ ಸಮನ್ವಯತೆ ಇದನ್ನು ಸಾಧ್ಯವಾಗಿಸಿದೆ ಎಂದು ಭಾರತೀಯ ವಾಯುಪಡೆ ಹೇಳಿದೆ.

ತಮಿಳನಾಡಲ್ಲಿ‌ ಭೀಕರ ರಸ್ತೆ ಅಪಘಾತ: ವಿಜಯಪುರ IRB ಪೊಲೀಸ್ ಸೇರಿ ಮೂವರು ಸ್ಥಳದಲ್ಲೇ ಸಾವು!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ
ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ