
ಅಹಮದಾಬಾದ್(ಆ.13): ಕೋವಿಡ್ 19 ಲಸಿಕೆ ಹಾಕಿಸಿಕೊಳ್ಳಲು ನಿರಾಕರಿಸಿದ ತೃತೀಯ ದರ್ಜೆ ಅಧಿಕಾರಿಯನ್ನು ಭಾರತೀಯ ವಾಯುಸೇನೆ ಸೇವೆಯಿಂದ ವಜಾಗೊಳಿಸಿದೆ.
ದೇಶದಲ್ಲಿ ಒಟ್ಟು 9 ವಾಯುಪಡೆ ಸಿಬ್ಬಂದಿ ಲಸಿಕೆ ನಿರಾಕರಿಸಿದ್ದರು. ಅವರಿಗೆಲ್ಲಾ ವಾಯುಸೇನೆ ನೋಟಿಸ್ ನೀಡಿತ್ತು ನೋಟಿಸ್ಗೆ ಉತ್ತರಿಸದ ಒಬ್ಬನನ್ನು ಸೇವೆಯಿಂದ ವಜಾಗೊಳಿಸಿ ಆದೇಶ ಹೊರಡಿಸಿದೆ.
ಈ ನಿರ್ಧಾರವನ್ನು ಪ್ರಶ್ನಿಸಿ ವಜಾಗೊಂಡ ಅಧಿಕಾರಿ ಯೋಗೇಂದ್ರ ಕುಮಾರ್, ಗುಜರಾತ್ ಹೈಕೋರ್ಟ್ನ ಮೆಟ್ಟಿಲೇರಿದ್ದರು. ಹೈಕೋರ್ಟ್ ಈ ಮನವಿಯನ್ನು ವಜಾಗೊಳಿಸಿದೆ. ಈ ಸಂದರ್ಭದಲ್ಲಿ ಮಾತನಾಡಿದ ಹೆಚ್ಚುವರು ಸಾಲಿಸಿಟರ್ ಜನರಲ್ ದೇವಾಂಗ್ ವ್ಯಾಸ್, ವಾಯುಸೇನೆ ತನ್ನ ಎಲ್ಲಾ ಉದ್ಯೋಗಿಗಳಿಗೂ ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಿದೆ. ಕೋವಿಡ್ ವಿರುದ್ದ ಹೋರಾಡಲು ಲಸಿಕೆ ಪಡೆಯುವುದು ಅನಿವಾರ್ಯವಾಗಿದೆ. ವಜಾಗೊಂಡ ಅಧಿಕಾರಿ ಸೇನೆ ನೀಡಿದ ನೋಟಿಸ್ಗೂ ಉತ್ತರ ನೀಡಿರಲಿಲ್ಲ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ