
ಕಣ್ಣೂರು(ಮೇ.14): ಇಲ್ಲಿನ ಪರಿಯಾರಂನ ಅಂಚರಕಂಡಿಯಲ್ಲಿ ಸೋಮವಾರ ಬೆಳಗಿನ ಜಾವ ರಸ್ತೆಗೆ ಎಸೆಯಲಾದ 2 ಐಸ್ ಕ್ರೀಂ ಬಾಂಬ್ಗಳು ಸ್ಫೋಟಗೊಂಡಿವೆ. ರಸ್ತೆಗೆ ಎಸೆದ 3 ಐಸ್ ಕ್ರೀಮ್ ಆಕೃತಿಯ ಬಾಂಬ್ಗಳಲ್ಲಿ 2 ಬಾಂಬ್ಗಳು ಸ್ಫೋಟಗೊಂಡಿದ್ದು, ಮತ್ತೊಂದು ಬಾಂಬ್ ಸ್ಫೋಟಗೊಳ್ಳುವುದರ ಒಳಗೆ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಬಂದು ಬಾಂಬ್ ನಿಷ್ಕ್ರಿಯಗೊಳಿಸಿದೆ.
ಘಟನೆ ನಡೆಸಿದ್ದು ಬೆಳಗಿನ ಜಾವವಾದ ಕಾರಣ ಬಾಂಬ್ ಎಸೆದವರು ಯಾರೆಂದು ಗುರುತಿಸಲಾಗಿಲ್ಲ. ಅವರಿಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಂದಿನ ದಿನ ಪಟ್ಟಮಕವಿಯ ದೇಗುಲ ಉತ್ಸವದಲ್ಲಿ ಸಿಪಿಎಂ-ಬಿಜೆಪಿ ಕಾರ್ಯಕರ್ತರ ನಡುವೆ ಜಗಳವಾಗಿತ್ತು. ಇದರ ಬೆನ್ನಲ್ಲೆ ಈ ಕೃತ್ಯವೆಸಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಬೆಂಗಳೂರಿನ ಆಸ್ಪತ್ರೆಗಳಿಗೆ ಹುಸಿಬಾಂಬ್ ಬೆದರಿಕೆ ಸಂದೇಶ: ಕೆಲ ಕಾಲ ಆತಂಕ
ಬಾಂಬ್ ಅನ್ನು ಐಸ್ಕ್ರೀಂ ಕಂಟೇನರ್ ರೂಪದಲ್ಲಿ ತಯಾರಿಸಿದ್ದ ಕಾರಣ ಅದನ್ನು ಐಸ್ಕ್ರೀಂ ಬಾಂಬ್ ಎಂದು ಕರೆಯಲಾಗುತ್ತೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ