
ಪಿಟಿಐ ನವದೆಹಲಿ (ಡಿ.16): ದ್ವಿಭಾಷಾ ಸೂತ್ರದ ಕಾರಣ ನೀಡಿ ಕೇಂದ್ರ ಸರ್ಕಾರದ ಜವಾಹರ್ ನವೋದಯ ವಿದ್ಯಾಲಯಗಳ ಸ್ಥಾಪನೆಗೆ ತಡೆ ಒಡ್ಡಿದ್ದ ತಮಿಳುನಾಡು ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ‘ನಮ್ಮದು ಒಕ್ಕೂಟ ಸಮಾಜ’ ಎಂದಿರುವ ಅದು, ‘ರಾಜ್ಯದಲ್ಲಿ ನವೋದಯ ವಿದ್ಯಾಲಯಗಳ (ಜೆಎನ್ವಿ) ಸ್ಥಾಪನೆ ಕುರಿತು ಕೇಂದ್ರದೊಂದಿಗೆ ಜಂಟಿ ಸಮಾಲೋಚನೆ ನಡೆಸಿ’ ಎಂದು ಸೂಚಿಸಿದೆ.
‘ನವೋದಯ ವಿದ್ಯಾಲಯಗಳ ಮೂಲಕ ಹಿಂದಿ (ತ್ರಿಭಾಷಾ ಸೂತ್ರ) ಹೇರಲಾಗುತ್ತದೆ. ಆದರೆ ತಮಿಳುನಾಡಿನಲ್ಲಿ ದ್ವಿಭಾಷಾ ಸೂತ್ರ ಮಾತ್ರ ಇದೆ’ ಎಂಬ ತಮಿಳುನಾಡಿನ ಅರ್ಜಿ ವಿಚಾರಣೆ ನಡೆಸಿದ ನ್ಯಾ। ಬಿ.ವಿ. ನಾಗರತ್ನ ಮತ್ತು ನ್ಯಾ। ಆರ್. ಮಹಾದೇವನ್ ಅವರ ಪೀಠವು, ರಾಜ್ಯ ಸರ್ಕಾರವು ಪ್ರತಿಕೂಲ ಮನೋಭಾವವನ್ನು ಅಳವಡಿಸಿಕೊಳ್ಳಬಾರದು ಮತ್ತು ಒಕ್ಕೂಟ ವ್ಯವಸ್ಥೆಯಡಿ ಚರ್ಚೆ ನಡೆಯಬೇಕು. ತಮಿಳುನಾಡಿನ ಪ್ರತಿ ಜಿಲ್ಲೆಯಲ್ಲಿ ನವೋದಯ ವಿದ್ಯಾಲಯ ಸ್ಥಾಪಿಸಲು ಅಗತ್ಯವಿರುವ ಭೂಮಿಯ ಪ್ರಮಾಣವನ್ನು ಖಚಿತಪಡಿಸಿಕೊಳ್ಳಬೇಕು’ ಎಂದು ನಿರ್ದೇಶನ ನೀಡಿತು.
‘ಇದನ್ನು ಭಾಷಾ ಸಮಸ್ಯೆಯನ್ನಾಗಿ ಮಾಡಬೇಡಿ. ನಮ್ಮ ರಾಜ್ಯ ನಮ್ಮ ರಾಜ್ಯ ಎನ್ನಬೇಡಿ. ನಮ್ಮದು ಫೆಡರಲ್ ಸಮಾಜ. ನೀವು ಗಣರಾಜ್ಯದ ಭಾಗ. ನೀವು ಒಂದು ಹೆಜ್ಜೆ ಮುಂದೆ ಬಂದರೆ, ಅವರು ಕೂಡ ಒಂದು ಹೆಜ್ಜೆ ಮುಂದೆ ಬರುತ್ತಾರೆ. ದಯವಿಟ್ಟು ಸಕಾರಾತ್ಮಕ ಮನೋಭಾವವನ್ನು ಹೊಂದಿರಿ’ ಎಂದು ಅವರು ಹೇಳಿತು.
‘ಆಂಧ್ರಪ್ರದೇಶ ವಿಭಜನೆಯ ನಂತರ, ತಮಿಳುನಾಡು ಎಲ್ಲಾ ವೈಭವ ಪಡೆದುಕೊಂಡಿದೆ. ಇದು ದಕ್ಷಿಣ ಭಾರತದ ಅತಿದೊಡ್ಡ ಔದ್ಯಮಿಕ ರಾಜ್ಯವಾಗಿದೆ. ಶಾಲೆ ಸ್ಥಾಪನೆಯನ್ನು (ಹಿಂದಿ) ಹೇರಿಕೆಯಾಗಿ ತೆಗೆದುಕೊಳ್ಳಬೇಡಿ, ಇದು ರಾಜ್ಯದ ವಿದ್ಯಾರ್ಥಿಗಳಿಗೆ ಒಂದು ಅವಕಾಶ. ನಮ್ಮದು ದ್ವಿಭಾಷಾ ನೀತಿ ಎಂದು ನೀವು ಹೇಳಬಹುದು. ಅವರು (ಕೇಂದ್ರ) ಇದನ್ನು ಪರಿಶೀಲಿಸುತ್ತಾರೆ. ಕೇಂದ್ರವು ರಾಜ್ಯದ ನೀತಿಗೆ ಭಂಗ ತರದು’ ಎಂದು ಪೀಠವು ತಮಿಳ್ನಾಡು ಸರ್ಕಾರಕ್ಕೆ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ