
ತಿರುವನಂತಪುರ: ದೇಶದ ಜನತೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎದೆಗೆ ಗುಂಡಿಕ್ಕಬಹುದು ಎಂದು ಕೇರಳದ ಬಿಜೆಪಿ ನಾಯಕರೊಬ್ಬರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮತ್ತೊಂದೆಡೆ ಈ ಬಗ್ಗೆ ಕಾಂಗ್ರೆಸ್ ನಾಯಕರು, ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಮುಖೇನ ದೂರಿದ್ದಾರೆ.
ಪ್ರಿಂಟು ಹೇಳಿದ್ದೇನು?
ಬಾಂಗ್ಲಾ, ನೇಪಾಳದಲ್ಲಿ ನಡೆದ ಜೆನ್ ಝೀ ಪ್ರತಿಭಟನೆ ಕುರಿತ ಚರ್ಚಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಬಿಜೆಪಿ ವಕ್ತಾರ ಮಹಾದೇವನ್ ‘ಭಾರತದಲ್ಲಿ ನರೇಂದ್ರ ಮೋದಿ ಪ್ರಧಾನಿಯಾ ಗಿರುವುದರಿಂದ ಅಂತಹ ಪರಿಸ್ಥಿತಿ ಬರುವುದಿಲ್ಲ. ಭಾರತೀಯರು ನರೇಂದ್ರ ಮೋದಿಯವರ ಪರವಾಗಿ ನಿಂತಿದ್ದಾರೆ. ರಾಹುಲ್ ಗಾಂಧಿ ಅಂತಹ ಸನ್ನಿವೇಶ ಸೃಷ್ಟಿಯಾಗಬೇಕು ಎಂದು ಬಯಸಿದರೆ ಗುಂಡುಗಳು ಅವರ ಎದೆಗೆ ಚುಚ್ಚಬಹುದು’ ಎಂದಿದ್ದರು.
ಕಾಂಗ್ರೆಸ್ ಕಿಡಿ: ಮಹಾದೇವನ್ ಹೇಳಿಕೆ ಬಗ್ಗೆ ಕಿಡಿಕಾರಿರುವ ಕಾಂಗ್ರೆಸ್, ‘ಬಿಜೆಪಿ ಎಲ್ಲಾ ಮಿತಿಗಳನ್ನು ಮೀರಿದೆ. ನ್ಯಾಯಕ್ಕಾಗಿ ಹೋರಾಟದಲ್ಲಿ ಪ್ರತಿಯೊಬ್ಬ ಭಾರತೀಯನ ಜತೆ ನಿಲ್ಲುವ ನಾಯಕನಿಗೆ ಕೊಲೆ ಬೆದರಿಕೆ ಹಾಕಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಜೊತೆಗೆ ಈ ಸಂಬಂಧ ಕೇರಳ ಕಾಂಗ್ರೆಸ್ ಮಹಾದೇವನ್ ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಅಮಿತ್ ಶಾಗೆ ಪತ್ರ:
ಈ ನಡುವೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.‘ ಪ್ರಿಂಟೋ ಹೇಳಿಕೆ ಬಾಯಿ ತಪ್ಪಿನಿಂದ ಬಂದಿರುವುದಲ್ಲ, ಅಜಾಗರೂಕತೆಯೂ ಅಲ್ಲ. ವಕ್ತಾರರು ಇಂತಹ ಮಾತುಗಳನ್ನು ಆಡಿರುವುದರಿಂದ ರಾಹುಲ್ ಗಾಂಧಿ ಅವರ ಜೀವವನ್ನು ಅಪಾಯಕ್ಕೆ ಸಿಲುಕಿಸುತ್ತದೆ’ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ