ದಿಲ್ಲಿಯಲ್ಲಿ 2 ದಿನ ಇದ್ರೆ ನನಗೆ ಅಲರ್ಜಿ ಶುರು ಆಗುತ್ತೆ: ಸಚಿವ ಗಡ್ಕರಿ

Kannadaprabha News   | Kannada Prabha
Published : Dec 25, 2025, 07:18 AM IST
Nitin Gadkari

ಸಾರಾಂಶ

ದೆಹಲಿಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ವಾಯುಮಾಲಿನ್ಯದ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ರಸ್ತೆ ಸಾರಿಗೆ ಖಾತೆ ಸಚಿವ ನಿತಿನ್‌ ಗಡ್ಕರಿ, ನಾನು ಎರಡು ದಿನ ದೆಹಲಿಯಲ್ಲಿ ಇದ್ದರೆ ಸಾಕು ನನಗೆ ಅಲರ್ಜಿ ಸಮಸ್ಯೆ ಕಾಣಿಸುತ್ತದೆ ಎಂದು ಹೇಳಿದ್ದಾರೆ.

ನವದೆಹಲಿ: ದೆಹಲಿಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ವಾಯುಮಾಲಿನ್ಯದ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ರಸ್ತೆ ಸಾರಿಗೆ ಖಾತೆ ಸಚಿವ ನಿತಿನ್‌ ಗಡ್ಕರಿ, ನಾನು ಎರಡು ದಿನ ದೆಹಲಿಯಲ್ಲಿ ಇದ್ದರೆ ಸಾಕು ನನಗೆ ಅಲರ್ಜಿ ಸಮಸ್ಯೆ ಕಾಣಿಸುತ್ತದೆ ಎಂದು ಹೇಳಿದ್ದಾರೆ.

ದೆಹಲಿಯಲ್ಲಿನ ವಾಯುಮಾಲಿನ್ಯಕ್ಕೆ ವಾಹನಗಳ ಕೊಡುಗೆ ಶೇ.40ರಷ್ಟಿದೆ

ಇಲ್ಲಿ ಕಾರ್ಯಕ್ರಮವೊಂದಲ್ಲಿ ಮಾತನಾಡಿದ ಗಡ್ಕರಿ, ‘ದೆಹಲಿಯಲ್ಲಿನ ವಾಯುಮಾಲಿನ್ಯಕ್ಕೆ ವಾಹನಗಳ ಕೊಡುಗೆ ಶೇ.40ರಷ್ಟಿದೆ. ಮಾಲಿನ್ಯಕ್ಕೆ ಕಾರಣವಾಗುವ ಅಂಶಗಳು ಗೊತ್ತಿರುವ ಹೊರತಾಗಿಯೂ ನಾವು ಪ್ರತಿ ವರ್ಷ 22 ಲಕ್ಷ ಕೋಟಿ ರು. ಮೌಲ್ಯದ ಪೆಟ್ರೋಲಿಯಂ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುತ್ತಿದ್ದೇವೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹೈಡ್ರೋಜನ್‌ ಹಾಗೂ ವಿದ್ಯುತ್‌ ಚಾಲಿತ ವಾಹನಗಳ ಬಳಕೆಯನ್ನು ಹೆಚ್ಚಿಸಬೇಕು

ಜತೆಗೆ, ‘ಇದಕ್ಕೆ ಪರಿಹಾರವಾಗಿ ಪೆಟ್ರೋಲಿಯಂ ಉತ್ಪನ್ನಗಳ ಬದಲು ಹೈಡ್ರೋಜನ್‌ ಹಾಗೂ ವಿದ್ಯುತ್‌ ಚಾಲಿತ ವಾಹನಗಳ ಬಳಕೆಯನ್ನು ಹೆಚ್ಚಿಸಬೇಕು’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚೀನಿಯರಿಗೆ ಅಕ್ರಮ ವೀಸಾ ಕೇಸಲ್ಲಿ ಚಿದು ಪುತ್ರಗೆ ಸಂಕಷ್ಟ
ಛತ್ತೀಸ್‌ಗಢ ಮದ್ಯ ಹಗರಣ : ಮಾಜಿ ಸಿಎಂ ಪುತ್ರಗೆ ₹ 250 ಕೋಟಿ ಲಂಚ