ನಾವು ಗೆದ್ದರೆ ಎಲ್ಲಾ ನದಿ ನೀರು ಹಂಚಿಕೆ ಒಪ್ಪಂದ ರದ್ದು: ಬಾದಲ್‌

Published : Aug 20, 2023, 08:53 AM ISTUpdated : Aug 20, 2023, 09:00 AM IST
ನಾವು ಗೆದ್ದರೆ ಎಲ್ಲಾ ನದಿ ನೀರು ಹಂಚಿಕೆ ಒಪ್ಪಂದ ರದ್ದು: ಬಾದಲ್‌

ಸಾರಾಂಶ

2027ರಲ್ಲಿ ಪಂಜಾಬ್‌ನಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲಾ ರಾಜ್ಯಗಳೊಂದಿಗಿನ ನದಿ ನೀರು ಹಂಚಿಕೆ ಒಪ್ಪಂದವನ್ನು ರದ್ದುಪಡಿಸಲಾಗುವುದು ಎಂದು ಶಿರೋಮಣಿ ಅಕಾಲಿ ದಳ ಹೇಳಿದೆ. 

ಚಂಡೀಗಢ: 2027ರಲ್ಲಿ ಪಂಜಾಬ್‌ನಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲಾ ರಾಜ್ಯಗಳೊಂದಿಗಿನ ನದಿ ನೀರು ಹಂಚಿಕೆ ಒಪ್ಪಂದವನ್ನು ರದ್ದುಪಡಿಸಲಾಗುವುದು ಎಂದು ಶಿರೋಮಣಿ ಅಕಾಲಿ ದಳ ಹೇಳಿದೆ. ಜಲಂಧರ್‌ನಲ್ಲಿ (Jalandhar) ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಅಕಾಲಿದಳ ಅಧ್ಯಕ್ಷ ಸುಖಬೀರ್‌ ಸಿಂಗ್‌ ಬಾದಲ್‌ ( ‘ಪಂಜಾಬ್‌ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹ ಸೃಷ್ಟಿಯಾಗಿದೆ. ಇಂತಹ ಸಂಕಷ್ಟದಲ್ಲಿ ನಮ್ಮ ರಾಜ್ಯದ ಜನ, ಭೂಮಿ ಮತ್ತು ಜಾನುವಾರಗಳನ್ನು ರಕ್ಷಿಸುವ ಸಹಾಯವಾಗುವ ಉದ್ದೇಶದಿಂದ ನೆರೆಯ ಯಾವುದೇ ರಾಜ್ಯ ನಮ್ಮ ರಾಜ್ಯದಿಂದ ಹೆಚ್ಚುವರಿ ನೀರನ್ನು ಪಡೆಯಲು ಮುಂದೆ ಬರಲಿಲ್ಲ’ ಎಂದು ಕಿಡಿಕಾರಿದ್ದಾರೆ.

ಇದೇ ವೇಳೆ ‘ನಾವು ಅಧಿಕಾರಕ್ಕೆ ಬಂದ ನಂತರ ಯಾವುದೇ ಸಮಯದಲ್ಲಿ ಯಾವುದೇ ರಾಜ್ಯದೊಂದಿಗೆ ಸರ್ಕಾರದ ನದಿ ನೀರು ಹಂಚಿಕೆ ಒಪ್ಪಂದವನ್ನು ರದ್ದುಪಡಿಸುತ್ತೇವೆ. ನೆರೆಯ ರಾಜ್ಯಗಳಿಗೆ, ಅದರಲ್ಲೂ ರಾಜಸ್ಥಾನಕ್ಕೆ (Rajasthan) ಪಂಜಾಬ್‌ ನೀರಿನ ಮೇಲೆ ಯಾವುದೇ ಹಕ್ಕು ಇಲ್ಲ. ಅವರು ಅದು ನಮ್ಮಲ್ಲಿರುವ ಅರ್ಧದಷ್ಟುನೀರನ್ನು ಪಡೆಯುತ್ತಿರುವುದು ದುರದೃಷ್ಟಕರ’ ಎಂದಿದ್ದಾರೆ.

ತಮಿಳುನಾಡು ಎದುರು ದೈನೇಸಿಯಾಗಿ ಮಂಡಿಯೂರಿದ ಕರ್ನಾಟಕ ಕಾಂಗ್ರೆಸ್‌ ಸರ್ಕಾರ : 10 ಟಿಎಂಸಿ ಕಾವೇರಿ ನೀರು ಬಿಡುಗಡೆ

ಪಂಜಾಬ್‌, ರಾಜಸ್ತಾನ ಮತ್ತು ಹರಾರ‍ಯಣ ರಾಜ್ಯಗಳು ‘ಸಟ್ಲೇಜ್‌ ಯಮುನಾ ಲಿಂಕ್‌’ ಕಾಲುವೆ (Sutlej Yamuna Link) ಒಪ್ಪಂದಕ್ಕೆ ಸಹಿ ಹಾಕಿವೆ. ಈ ಮೂಲಕ ಪಂಜಾಬ್‌ ಎರಡೂ ರಾಜ್ಯಗಳಿಗೆ ನೀರು ಒದಗಿಸುತ್ತದೆ. ಆದರೆ ಪಂಜಾಬ್‌ನಲ್ಲಿ ಇತ್ತೀಚೆಗೆ ಭಾರೀ ಮಳೆಯಿಂದ ನದಿ ನೀರಿನ ಮಟ್ಟ ಹೆಚ್ಚಾಗಿದ್ದ ವೇಳೆ, ರಾಜಸ್ತಾನ ಮತ್ತು ಹರ್ಯಾಣ ಹೆಚ್ಚುವರಿ ನೀರು ಪಡೆಯಲು ನಿರಾಕರಿಸಿದ್ದವು. ಇದು ಪಂಜಾಬ್‌ ಆಕ್ರೋಶಕ್ಕೆ ಕಾರಣವಾಗಿದೆ.

ಮಹದಾಯಿ ನದಿ ನೀರು ಹಂಚಿಕೆ ವಿವಾದ, ಗೋವಾ ಮೇಲ್ಮನವಿಗೆ ರಾಜ್ಯ ಕಾಂಗ್ರೆಸ್‌ ವಿರೋಧ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನಾನು ಮೋಸ ಮಾಡಿಲ್ಲ, ಗಾಸಿಪ್‌ ನಂಬಬೇಡಿ ಎಂದ Palash Muchhal; ಮದುವೆ ಕ್ಯಾನ್ಸಲ್‌ ಎಂದ Smriti Mandhana;
ಅಯೋಧ್ಯೆಯ ರಾಮಲಲ್ಲಾ ಪ್ರತ್ಯಕ್ಷನಾಗಿ ಆಶೀರ್ವದಿಸಿದರೆ ಹೇಗಿರತ್ತೆ? ರೋಮಾಂಚಕಾರಿ ವಿಡಿಯೋ ವೈರಲ್​