
ನವದೆಹಲಿ(ಏ. 13) ಇವರು ವಿವಾದಾತ್ಮಕ ಹೇಳಿಕೆಗಳಿಗೆ ಹೆಸರುವಾಸಿ. ಸುಪ್ರೀಂ ಕೋರ್ಟ್ ನ ಮಾಜಿ ನ್ಯಾಯಾಧೀಶ ಮಾರ್ಕಂಡೇಯ ಕಟ್ಜು ಕೊರೋನಾ ಆತಂಕದ ನಡುವೆಯೂ ಒಂದು ವಿವಾದ ಎಬ್ಬಿಸುವ ಹೇಳಿಕೆ ನೀಡಿದ್ದಾರೆ.
ಟ್ವಿಟರ್ ನಲ್ಲಿ ಬರೆದುಕೊಂಡಿರುವ ಮಾರ್ಕಂಡೇಯ ಕಟ್ಜು' ಒಂದು ವೇಳೆ ದೇವರು ಇದ್ದರೆ ಅವನು ಕೊರೋನಾಕ್ಕೆ ಸುಮ್ಮನಿರು ಎಂದು ಯಾಕೆ ಹೇಳುತ್ತಿಲ್ಲ, ಅಥವಾ ಬೇಕಂತಲೇ ಜನರಿಗೆ ತೊಂದರೆ ಕೊಡುತ್ತಿದ್ದಾನೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.
ಚೀನಾದಲ್ಲಿ ಮತ್ತೆ ಹೆಚ್ಛಾಯಿತು ಕೊರೋನಾ ಸೋಂಕು
ಮತ್ತೊಂದು ಟ್ವೀಟ್ ಮಾಡಿರುವ ಕಟ್ಜು, ನಾನು ತಮಾಷೆ ಮಾಡುತ್ತಿಲ್ಲ. ಗಂಭೀರವಾಗಿ ಈ ಪ್ರಶ್ನೆ ಕೇಳುತ್ತಿದ್ದೇನೆ ಎನ್ನುತ್ತ ಬರರಗಾರ ಡೋಸ್ಟೋವಸ್ಕಿ ಸಾಲುಗಳನ್ನು ಉಲ್ಲೇಖ ಮಾಡಿದ್ದಾರೆ.
ಕೊರೋನಾ ಆತಂಕದಲ್ಲಿ ಇಡೀ ಪ್ರಪಂಚ ಮತ್ತು ದೇಶ ಇರುವಾಗ ಇಂಥ ವಿವಾದಾತ್ಮಕ ಸ್ಟೇಟ್ ಮೆಂಟ್ ಮಾಡಿರುವುದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದೆ. ಭಾರತದಲ್ಲಿ ಸೋಂಕಿತರ ಸಂಖ್ಯೆ 10 ಸಾವಿರ ಹತ್ತಿರಕ್ಕೆ ಬಂದಿದ್ದು ಲಾಕ್ ಡೌನ್ ಮತ್ತೆ ಮುಂದುವರಿಯುತ್ತೆ ಎಂದು ಹೇಳಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ