ನಾವು ಒಗ್ಗಟ್ಟಾಗದಿದ್ದರೆ ನಮ್ಮನ್ನ ಕತ್ತರಿಸಲಾಗುತ್ತೆ: ದೇಶದ ಜನತೆಗೆ ಯೋಗಿ ಸಂದೇಶ

Published : Aug 27, 2024, 04:56 AM IST
ನಾವು ಒಗ್ಗಟ್ಟಾಗದಿದ್ದರೆ ನಮ್ಮನ್ನ ಕತ್ತರಿಸಲಾಗುತ್ತೆ: ದೇಶದ ಜನತೆಗೆ ಯೋಗಿ ಸಂದೇಶ

ಸಾರಾಂಶ

ದೇಶದ ಜನತೆಗೆ ಸಂದೇಶವೊಂದನ್ನು ನೀಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ‘ನಾವು (ಭಾರತೀಯರು) ಒಗ್ಗಟ್ಟಾಗಿರಬೇಕು. ಇಲ್ಲದಿದ್ದರೆ ನಮ್ಮನ್ನು ಕತ್ತರಿಸಲಾಗುತ್ತದೆ’ ಎಂದು ಹೇಳಿದ್ದಾರೆ.

ಪಿಟಿಐ ಆಗ್ರಾ (ಆ.27): ದೇಶದ ಜನತೆಗೆ ಸಂದೇಶವೊಂದನ್ನು ನೀಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ‘ನಾವು (ಭಾರತೀಯರು) ಒಗ್ಗಟ್ಟಾಗಿರಬೇಕು. ಇಲ್ಲದಿದ್ದರೆ ನಮ್ಮನ್ನು ಕತ್ತರಿಸಲಾಗುತ್ತದೆ’ ಎಂದು ಹೇಳಿದ್ದಾರೆ.

ಸಮಾರಂಭವೊಂದರಲ್ಲಿ ಸೋಮವಾರ ಮಾತನಾಡಿದ ಅವರು, ‘ರಾಷ್ಟ್ರಕ್ಕಿಂತ ದೊಡ್ಡದು ಯಾವುದೂ ಇರಲು ಸಾಧ್ಯವಿಲ್ಲ, ನಾವು ಒಗ್ಗಟ್ಟಾಗಿದ್ದರೆ ರಾಷ್ಟ್ರವು ಬಲಿಷ್ಠವಾಗುತ್ತದೆ. ದೇಶ ಸಮೃದ್ಧಿಯ ಉತ್ತುಂಗವನ್ನು ತಲುಪಲು ಜನತೆ ಒಗ್ಗಟ್ಟಿನಿಂದ ಇರಬೇಕು. ಬಾಂಗ್ಲಾದೇಶದಲ್ಲಿ ಆದ ತಪ್ಪುಗಳು ಭಾರತದಲ್ಲಿ ಆಗಬಾರದು. ಆದರೆ ನಮ್ಮಲ್ಲೇ ಒಡಕು ಸೃಷ್ಟಿಯಾದರೆ ನಮ್ಮನ್ನು ಕತ್ತರಿಸಲಾಗುತ್ತದೆ (ಬಾಟೇಂಗೇ ತೋ ಕಾಟೇಂಗೆ)’ ಎಂದು ಹೇಳಿದರು. 

ಅಯೋಧ್ಯೆಯ ಅಭಿವೃದ್ಧಿ ಕಂಡು ಮೋದಿ-ಯೋಗಿಯನ್ನು ಹೊಗಳಿದ 19 ವರ್ಷದ ಪತ್ನಿಗೆ ತಲಾಖ್ ಕೊಟ್ಟ ಗಂಡ!

ಬಾಂಗ್ಲಾದೇಶದಲ್ಲಿ ಇತ್ತೀಚೆಗಷ್ಟೇ ಬೃಹತ್ ಸರ್ಕಾರ ವಿರೋಧಿ ಪ್ರತಿಭಟನೆಗಳು ನಡೆದಿದ್ದು, ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಲಾಗಿತ್ತು. ನಂತರ ಅಲ್ಲಿನ ಹಿಂದೂಗಳ ಮೇಲೆ ಕಂಡು ಕೇಳರಿಯದಷ್ಟು ದೌರ್ಜನ್ಯ ನಡೆದಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೆಹಬೂಬಾ...ಹಾಡಿಗೆ ನೃತ್ಯದ ವೇಳೆ ಗೋವಾ ಪಬ್‌ ದುರಂತ!
₹500 ಕೋಟಿ ಕೊಟ್ರೆ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ : ಸಿಧು ಪತ್ನಿ ಆರೋಪ