ಲವ್‌ ಜಿಹಾದ್‌ ನಿರ್ಲಕ್ಷ್ಯ ಮೌನ ಸಮ್ಮತಿ ಇದ್ದಂತೆ: ಕೇರಳ ಪಾದ್ರಿ

Published : Jan 27, 2020, 04:14 PM ISTUpdated : Jan 27, 2020, 05:11 PM IST
ಲವ್‌ ಜಿಹಾದ್‌ ನಿರ್ಲಕ್ಷ್ಯ ಮೌನ ಸಮ್ಮತಿ ಇದ್ದಂತೆ: ಕೇರಳ ಪಾದ್ರಿ

ಸಾರಾಂಶ

ಲವ್‌ ಜಿಹಾದ್‌ ನಿರ್ಲಕ್ಷ್ಯ ಮೌನ ಸಮ್ಮತಿ ಇದ್ದಂತೆ: ಕೇರಳ ಫಾದ್ರಿ| ಲವ್‌ ಜಿಹಾದ್‌ನಲ್ಲಿ ಸಿಲುಕಿದವರು ಲೈಂಗಿಕ ಗುಲಾಮರಾಗಿದ್ದಾರೆ| ಕ್ರಮ ಕೈಗೊಳ್ಳದ ಕೇಂದ್ರ, ಕೇರಳ ಸರ್ಕಾರದ ವಿರುದ್ಧ ಕೆಂಡಾಮಂಡಲ

ಕೊಚ್ಚಿ[ಜ.27]: ಲವ್‌ ಜಿಹಾದ್‌ ಎಂಬುದು ವಾಸ್ತವ. ಆ ವಿಚಾರವಾಗಿ ನಿರ್ಲಕ್ಷ್ಯ ವಹಿಸಿದರೆ ಮೌನ ಸಮ್ಮತಿ ಕೊಟ್ಟಂತೆ ಎಂದು ಕೇರಳದ ಫಾದ್ರಿಯೊಬ್ಬರು ಹೇಳಿದ್ದಾರೆ. ತನ್ಮೂಲಕ ಲವ್‌ ಜಿಹಾದ್‌ ಚರ್ಚೆ ಮುಂದುವರಿಯುವಂತೆ ಮಾಡಿದ್ದಾರೆ.

ಕೇರಳದ ವಿವಿಧ ಕ್ಯಾಥೋಲಿಕ್‌ ಸಮುದಾಯಗಳ ಬಿಷಪ್‌ಗಳಿಗೆ ಸಂಬಂಧಿಸಿದಂತೆ ಕೇರಳ ಕ್ಯಾಥೋಲಿಕ್‌ ಬಿಷಫ್ಸ್‌ ಕೌನ್ಸಿಲ್‌ ಎಂಬ ಪರಮೋಚ್ಚ ಸಂಸ್ಥೆಯಿದೆ. ಅದರ ವಕ್ತಾರರು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ, ಲವ್‌ ಜಿಹಾದ್‌ ಪ್ರಕರಣಗಳ ಕುರಿತಂತೆ ಕೇಂದ್ರ ಅಥವಾ ರಾಜ್ಯ ಸರ್ಕಾರಗಳು ಯಾವುದೇ ತನಿಖೆ ಮಾಡುತ್ತಿಲ್ಲ ಎಂದು ದೂಷಿಸಿದ್ದಾರೆ. ಲವ್‌ ಜಿಹಾದ್‌ ಮೂಲಕ ಕ್ರೈಸ್ತ ಯುವತಿಯರನ್ನು ಬಲೆಗೆ ಕೆಡವಿ ಅವರನ್ನು ಯುದ್ಧದಿಂದ ಜರ್ಜರಿತವಾದ ದೇಶಗಳಲ್ಲಿ ಲೈಂಗಿಕ ಗುಲಾಮರನ್ನಾಗಿ ಬಳಸಿಕೊಳ್ಳಲಾಗುತ್ತಿದೆ ಎಂದೂ ದೂರಿದ್ದಾರೆ.

ಕೇರಳ ಕ್ರೈಸ್ತರೂ ಲವ್‌ ಜಿಹಾದ್‌ ಬಲೆಗೆ!: ಯೋಜಿತವಾಗಿ ಮತಾಂತರ!

ಲವ್‌ ಜಿಹಾದ್‌ನಲ್ಲಿ ಸಿಲುಕಿ ನಾಪತ್ತೆಯಾದ ಕೇರಳ ಯುವತಿಯರ ಬಗ್ಗೆ ಕೇಂದ್ರ ಅಥವಾ ರಾಜ್ಯ ಸರ್ಕಾರಗಳು ಪರಿಣಾಮಕಾರಿ ತನಿಖೆಯನ್ನು ಮಾಡಿಲ್ಲ. ಆ ರೀತಿ ನಾಪತ್ತೆಯಾದವರನ್ನು ಭಯೋತ್ಪಾದಕ ಚಟುವಟಿಕೆಗಳಿಗೆ ಹಾಗೂ ಲೈಂಗಿಕ ಗುಲಾಮಗಿರಿಗೆ ಬಳಸಿಕೊಳ್ಳಲಾಗುತ್ತಿದೆ ಎಂದು ವಕ್ತಾರ ಫಾದರ್‌ ವರ್ಗೀಸ್‌ ವಲ್ಲಿಕ್ಕಟ್‌ ದೂರಿದ್ದಾರೆ.

ಜನವರಿ 27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಸಗುಲ್ಲಾ ಖಾಲಿ ಆಯ್ತು ಎಂದು ಮುರಿದು ಬಿತ್ತು ಮದ್ವೆ: ಮದುವೆ ಮನೆಯಾಯ್ತು ರಣಾಂಗಣ
ಮೋದಿ-ಪುಟಿನ್ ಆರ್ಮರ್ಡ್ ಬದಲು ಸಾಮಾನ್ಯ ಟೊಯೋಟಾ ಫಾರ್ಚೂನ್ ಕಾರಿನಲ್ಲಿ ಪ್ರಯಾಣಿಸಿದ್ದೇಕೆ?