
ಭುವನೇಶ್ವರ (ಸೆ.17): ಅಂಗನವಾಡಿ ಕಾರ್ಯಕರ್ತರಿಗೆ ಸರ್ಕಾರದಿಂದ ಬರುವ ಸಂಬಳದಲ್ಲಿ ಕುಟುಂಬ ಸಾಗಿಸುವುದೇ ಕಷ್ಟ.
ಅಂಥದ್ದರಲ್ಲಿ ಭುವನೇಶ್ವರದ ಅಂಗನವಾಡಿ ಕಾರ್ಯಕರ್ತೆಯೊಬ್ಬಳ ಬಳಿ ವಿಚಕ್ಷಣಾ ನಿರ್ದೇಶನಾಲಯದ ದಾಳಿಯ ವೇಳೆ ಬರೋಬ್ಬರಿ 4 ಕೋಟಿ ರು. ಮೌಲ್ಯದ ಅಕ್ರಮ ಆಸ್ತಿಪಾಸ್ತಿಗಳು ಪತ್ತೆ ಆಗಿವೆ.
ಭುವನೇಶ್ವರದ ಕೊರಾಡಾಕಾಂತಾ ಅಂಗನವಾಡಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಬಿತಾ ಮಥಾನ್ ವಿರುದ್ಧ ಭ್ರಷ್ಟಾಚಾರ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ವಿಚಕ್ಷಣಾ ದಳದ ಅಧಿಕಾರಿಗಳು ಶೋಧ ಕಾರ್ಯಾಚರಣೆ ಕೈಗೊಂಡಿದ್ದರು.
ಶೇ.35ರಷ್ಟು ಶಾಲೆ, ಅಂಗನವಾಡಿಗಳಲ್ಲಿ ನಲ್ಲಿ ನೀರಿಲ್ಲ!
ಈ ವೇಳೆ 4 ಕೋಟಿ ರು. ಮೌಲ್ಯದ ಸ್ಥಿರಾಸ್ತಿಗಳು ಪತ್ತೆ ಆಗಿವೆ. ಅಲ್ಲದೇ ಆಕೆಯ ಹೆಸರಿನಲ್ಲಿ 7 ಕಟ್ಟಡಗಳು, 14 ನಿವೇಶನಗಳು, 6.36 ಲಕ್ಷ ರು. ಮೌಲ್ಯದ ಚಿನ್ನಾಭರಣಗಳು ಪತ್ತೆ ಆಗಿದ್ದು, ಶೋಧ ಕಾರ್ಯ ಕೈಗೊಂಡ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ