
ನವದೆಹಲಿ(ಮೇ.02): ವಾಯುವ್ಯ ಮಧ್ಯಪ್ರದೇಶದ ಮೇಲೆ ಚಂಡಮಾರುತದ ಪ್ರಸರಣವಿದೆ. ಮುಂದಿನ 4-5 ದಿನಗಳಲ್ಲಿ ಪೂರ್ವ ಭಾರತದ ಲ್ಲಿ ಇದು ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಸಿದೆ.
ಚಂಡಮಾರುತವು ವಾಯುವ್ಯ ಮಧ್ಯಪ್ರದೇಶದಲ್ಲಿದೆ. ಈ ಚಲಾವಣೆಯಿಂದ ಮಣಿಪುರದಲ್ಲಿ ಕೆಳಮಟ್ಟದಲ್ಲಿ ಚಲಿಸಲಿದೆ. ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯದಲ್ಲಿ ಮುಂದಿನ 4ರಿಂದ 5 ದಿನದಲ್ಲಿ ಮಳೆಯಾಗುವ ಸಾಧ್ಯತೆ ಇರಲಿದೆ. ಮೇ 3 ರಿಂದ 5 ರವರೆಗೆ ಮತ್ತು ಒಡಿಶಾ ಮತ್ತು ಅರುಣಾಚಲ ಪ್ರದೇಶದಲ್ಲಿ ಮಳೆ ಸಾಧ್ಯತೆ ಇದೆ.
ಕೊರೋನಾ ಪಾಸಿಟಿವ್: ಆಕ್ಸಿಜನ್ಗಾಗಿ ಅಶ್ವತ್ಥ ಮರದಡಿ ಠಿಕಾಣಿ ಹೂಡಿದ ಜನ
ಕೇರಳ ಮತ್ತು ಮಾಹೆಯಲ್ಲಿ, ಕರ್ನಾಟಕದ ದಕ್ಷಿಣ ಭಾಗದಲ್ಲಿ ಮೇ.4ರಿಂದ 6ರ ತನಕ ಮಳೆಯಾಗಲಿದೆ. ಮೇ 5ರಂದು ಕರ್ನಾಟಕ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ರಾಷ್ಟ್ರ ರಾಜಧಾನಿಯಲ್ಲಿ ಕನಿಷ್ಠ ತಾಪಮಾನ 24.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು ಮುಂದಿನ ದಿನಗಳಲ್ಲಿ ಇಲ್ಲಿ ಮಳೆಯೊಂದಿಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ