ಕೊರೋನಾ ಮಧ್ಯೆ ರೈತರಿಗೆ ಮುಂಗಾರು ಮಾಹಿತಿ: ಯಾವಾಗ, ಎಷ್ಟು ಮಳೆ..?

Published : Apr 15, 2020, 05:25 PM ISTUpdated : Apr 15, 2020, 06:34 PM IST
ಕೊರೋನಾ ಮಧ್ಯೆ ರೈತರಿಗೆ ಮುಂಗಾರು ಮಾಹಿತಿ: ಯಾವಾಗ, ಎಷ್ಟು ಮಳೆ..?

ಸಾರಾಂಶ

ಭಾರತೀಯ ಹವಾಮಾನ ಇಲಾಖೆ (IMD) ಈ ವರ್ಷದ ನೈಋತ್ಯ ಮಾನ್ಸೂನ್ ನ ಮುನ್ಸೂಚನೆಯನ್ನು ಬಿಡುಗಡೆ ಮಾಡಿದ್ದು, ಈ ವರ್ಷ ಮುಂಗಾರಿನ ಮೊದಲ ಮಳೆ ಯಾವಾಗ ಬೀಳಲಿದೆ ಎಂಬುದರ ಮಾಹಿತಿ ಇದೆ ಎಂದು ವರದಿ ತಿಳಿಸಿದೆ. ಹಾಗಾದ್ರೆ ಯಾವಾಗ ಎಷ್ಟು ಮಳೆ..?

ಬೆಂಗಳೂರು, (ಏ.15): ಇಡೀ ಪ್ರಪಂಚದಲ್ಲಿಯೇ ಕೊರೋನಾದ್ದೇ ಆರ್ಭಟವಾಗ್ಬಿಟ್ಟಿದೆ. ಈ ಮಾಹಾಮಾರಿಯಿಂದ ಭಾರತದಲ್ಲಿ ಮೇ.3ರ ವರಗೆ ಲಾಕ್‌ಡೌನ್ ಹೇರಲಾಗಿದ್ದು, ಸಂಕಷ್ಟದಲ್ಲಿ ಸಿಲುಕಿರೋ ದೇಶದ ಬೆನ್ನೆಲುಬು ಕಸುಬಿಗೆ ವಿನಾಯಿತಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ರೈತರು ಕೊಂಚ ಉಸಿರು ಬಿಡುವಂತಾಗಿದೆ. 

ಇದೇ ಸಂದರ್ಭದಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ನೈಋತ್ಯ ಮಾನ್ಸೂನ್‌ನ ಮುನ್ಸೂಚನೆಯನ್ನು ಬಿಡುಗಡೆ ಮಾಡಿದೆ. 

ಕೊರೋನಾ ಕಾಟಕ್ಕೆ ಸುಸ್ತಾದ ಅನ್ನದಾತ: ಇನ್ನೂ ಮುಗಿಯದ ರೈತರ ಗೋಳು!

ಪ್ರತಿ ವರ್ಷ ಏಪ್ರಿಲ್ ಮತ್ತು ಜೂನ್ ಈ ಎರಡು ತಿಂಗಳಲ್ಲಿ ಹವಾಮಾನ ಇಲಾಖೆ ದೇಶಾದ್ಯಂತ ಮಾನ್ಸೂನ್ ಪರಿಸ್ಥಿತಿಗಳ ಕುರಿತು ತನ್ನ ಅಂದಾಜು ವರದಿಯನ್ನು ನೀಡುತ್ತದೆ. ಅದರಂತೆ ಇಂದು (ಬುಧವಾರ) ಭಾರತೀಯ ಹವಾಮಾನ ಇಲಾಖೆ ಮಾನ್ಸೂನ್‌ಗಾಗಿ ತನ್ನ ದೀರ್ಘಾವಧಿಯ ಮುನ್ಸೂಚನೆಯನ್ನು ಬಿಡುಗಡೆ ಮಾಡಿದೆ.

ವರದಿ ಪ್ರಕಾರ ಈ ವರ್ಷ ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿರಲಿದೆ ಎಂದು ಹೇಳಿದ್ದು, ಜೂನ್-ಸೆಪ್ಟೆಂಬರ್ ಮಧ್ಯೆ ಶೇ.100ರಷ್ಟು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. 

ಭಾರತದಲ್ಲಿ ಕಳೆದ 50 ವರ್ಷಗಳ ಸರಾಸರಿ ಮುಂಗಾರು ಮಳೆ ಪ್ರಮಾಣ ಶೇ.96ನಿಂದ ಶೇ.104ರ ನಡುವೆ ಇದೆ. ಈ ವರ್ಷ ಇದರ ಪ್ರಮಾಣ ಶೇ.100ರಷ್ಟು ನಿರೀಕ್ಷಿಸಲಾಗಿದೆ. 4 ತಿಂಗಳ ಅವಧಿಯ ಮುಂಗಾರು ಜೂನ್‌ನಿಂದ ಆರಂಭಗೊಳ್ಳಲಿದೆ ಎಂದು ವರದಿ ತಿಳಿಸಿದೆ.

ಅಲ್ಲದೇ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ನಡುವೆಯೂ ಭಾರತ ಏಷ್ಯಾದ ಮೂರನೇ ಅತಿದೊಡ್ಡ ಕೃಷಿ ಉತ್ಪನ್ನ ಆರ್ಥಿಕತೆಯಾಗಿ ಹೊರಹೊಮ್ಮುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದು ದೇಶದ ರೈತರಲ್ಲಿ ಭರವಸೆ ಮೂಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live: ವರ್ಷದ ಮೊದಲ ದಿನವೇ ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಶಾಕ್ ನೀಡಿದ LPG ಸಿಲಿಂಡರ್
ವಶಪಡಿಸಿದ 200ಕೆಜಿ ಗಾಂಜಾ ಎಲ್ಲಿ? ಪೊಲೀಸ್ ಉತ್ತರಕ್ಕೆ ದಂಗಾಗಿ ಆರೋಪಿ ಖುಲಾಸೆಗೊಳಿಸಿದ ಕೋರ್ಟ್