ಅರಬ್ಬಿ ಸಮುದ್ರದಲ್ಲಿ ತೇಜ್‌ ಚಂಡಮಾರುತ : ಪಥ ಬದಲಿಸಿದರೆ ಭಾರತಕ್ಕೆ ಅಪಾಯ : ಐಎಂಡಿ

Published : Oct 21, 2023, 07:00 AM IST
ಅರಬ್ಬಿ ಸಮುದ್ರದಲ್ಲಿ ತೇಜ್‌ ಚಂಡಮಾರುತ : ಪಥ ಬದಲಿಸಿದರೆ ಭಾರತಕ್ಕೆ ಅಪಾಯ : ಐಎಂಡಿ

ಸಾರಾಂಶ

ಆಗ್ನೇಯ ಮತ್ತು ನೈಋತ್ಯ ಅರಬ್ಬಿ ಸಮುದ್ರದ ಮೇಲಿನ ಕಡಿಮೆ ಒತ್ತಡದ ಪ್ರದೇಶವು ವಾಯುಭಾರ ಕುಸಿತವಾಗಿ ರೂಪಾಂತರಗೊಂಡಿದೆ. ಇದು ಅ.21ರ (ಶನಿವಾರ) ಅಂದರೆ ಇಂದು  ಚಂಡಮಾರುತದ ರೂಪ ತಾಳಿ ತೀವ್ರಗೊಳ್ಳುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ತಿಳಿಸಿದೆ.

ನವದೆಹಲಿ:  ಆಗ್ನೇಯ ಮತ್ತು ನೈಋತ್ಯ ಅರಬ್ಬಿ ಸಮುದ್ರದ ಮೇಲಿನ ಕಡಿಮೆ ಒತ್ತಡದ ಪ್ರದೇಶವು ವಾಯುಭಾರ ಕುಸಿತವಾಗಿ ರೂಪಾಂತರಗೊಂಡಿದೆ. ಇದು ಅ.21ರ (ಶನಿವಾರ) ಅಂದರೆ ಇಂದು  ಚಂಡಮಾರುತದ ರೂಪ ತಾಳಿ ತೀವ್ರಗೊಳ್ಳುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ತಿಳಿಸಿದೆ.

ಈ ವರ್ಷ ಅರಬ್ಬಿ ಸಮುದ್ರದಲ್ಲಿ (Arabian Sea) ಇದು 2ನೇ ಚಂಡಮಾರುತವಾಗಿದೆ. ಹಿಂದೂ ಮಹಾಸಾಗರ (Indian Ocean region) ಪ್ರದೇಶದಲ್ಲಿ ಚಂಡಮಾರುತಗಳನ್ನು ಹೆಸರಿಸಲು ಅನುಸರಿಸಿದ ಸೂತ್ರದ ಪ್ರಕಾರ ಇದನ್ನು ''ತೇಜ್'' (ವೇಗ) ಎಂದು ಕರೆಯಲಾಗಿದೆ. ಸದ್ಯ ಒಮಾನ್ ಮತ್ತು ಪಕ್ಕದ ಯೆಮೆನ್‌ನ (Yemen) ದಕ್ಷಿಣ ಕರಾವಳಿಯ ಕಡೆಗೆ ಇದು ಚಲಿಸುತ್ತದೆ. ಆದರೆ ಭಾರತದ ಗುಜರಾತ್‌ ಕರಾವಳಿಯಲ್ಲಿ ಸಾಕಷ್ಟು ವಿನಾಶ ಉಂಟು ಮಾಡಿದ ಬಿಪೊರ್‌ಜೊಯ್‌ ಚಂಡಮಾರುತದ ರೀತಿ ಈ ಚಂಡಮಾರುತ ಕೂಡ ಪಥ ಬದಲಿಸಿ ಸಾಗಬಹುದು. ಆಗ ಇದು ಭಾರತದ ಕರಾವಳಿಗೂ ಅಪಾಯವಾಗಬಲ್ಲದು ಎಂದು ಹವಾಮಾನ ಇಲಾಖೆ ಹೇಳಿದೆ.

ಆದರೆ ಖಾಸಗಿ ಹವಾಮಾನ ಮುನ್ಸೂಚನೆ ಸಂಸ್ಥೆ ಸ್ಕೈಮೆಟ್ ವೆದರ್, ಹೆಚ್ಚಿನ ಮಾದರಿಗಳು ಚಂಡಮಾರುತವು ಯೆಮೆನ್-ಒಮಾನ್ ಕರಾವಳಿಯತ್ತ ಸಾಗುತ್ತಿದೆ ಎಂದು ಸೂಚಿಸುತ್ತದೆ ಎಂದಿದೆ.

 

ಸ್ತ್ರೀಯರ ಬಗ್ಗೆ ಪತಿ ಚೆಲ್ಲು ಚೆಲ್ಲು ಮಾತು: ಸಂಗಾತಿಯಿಂದ ದೂರವಾದ ಇಟಲಿ ಪ್ರಧಾನಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!