ಬಿಜೆಪಿ ಆಡಳಿತವಿರುವ ಛತ್ತಿಸಗಢದಲ್ಲೂ 9 ನಕ್ಸಲರು ಶರಣು, ಸಿದ್ದು ವಿರುದ್ಧ ಮುಗಿಬಿದ್ದ ಬಿಜೆಪಿ ನಾಯಕರು ಈಗೇನು ಹೇಳ್ತಾರೆ?

Published : Jan 12, 2025, 08:28 AM IST
ಬಿಜೆಪಿ ಆಡಳಿತವಿರುವ ಛತ್ತಿಸಗಢದಲ್ಲೂ 9 ನಕ್ಸಲರು ಶರಣು, ಸಿದ್ದು ವಿರುದ್ಧ ಮುಗಿಬಿದ್ದ ಬಿಜೆಪಿ ನಾಯಕರು ಈಗೇನು ಹೇಳ್ತಾರೆ?

ಸಾರಾಂಶ

ಛತ್ತೀಸಗಢದಲ್ಲಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದ 9 ನಕ್ಸಲರು ಪೊಲೀಸರಿಗೆ ಶರಣಾಗಿದ್ದಾರೆ. ಇವರಲ್ಲಿ ಇಬ್ಬರು ಮಹಿಳೆಯರು ಸೇರಿದ್ದು, ಒಟ್ಟಾರೆ 43 ಲಕ್ಷ ರೂ. ಇನಾಮು ಘೋಷಿಸಲಾಗಿತ್ತು. ಮಾವೋವಾದಿ ಸಿದ್ಧಾಂತದಿಂದ ಬೇಸತ್ತು ಶರಣಾಗಿದ್ದಾಗಿ ತಿಳಿಸಿದ್ದಾರೆ.

ಸುಕ್ಮಾ (ಜ.12): ಬಿಜೆಪಿ ಆಡಳಿತ ಇರುವ ಛತ್ತೀಸಗಢದಲ್ಲಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿ ತಲೆಗೆ 43 ಲಕ್ಷ ರು. ಇನಾಮು ಹೊಂದಿದ್ದ ಇಬ್ಬರು ಮಹಿಳೆಯರು ಸೇರಿದಂತೆ 9 ನಕ್ಸಲರು ಶನಿವಾರ ಪೊಲೀಸರಿಗೆ ಶರಣಾಗಿದ್ದಾರೆ.9 ಮಂದಿಯು ಸೆಂಟ್ರಲ್ ರಿಸರ್ವ್‌ ಪೊಲೀಸ್‌ ಫೋರ್ಸ್‌ (ಸಿಆರ್‌ಪಿಎಫ್‌) ನ ಹಿರಿಯ ಅಧಿಕಾರಿಗಳ ಮುಂದೆ ಹಾಜರಾಗಿ, ‘ಮಾವೋವಾದಿ ಸಿದ್ಧಾಂತ ಪೊಳ್ಳು ಹಾಗೂ ಅಮಾನವೀಯವಾಗಿದೆ. ಅಲ್ಲದೆ ನಕ್ಸಲರ ನಡುವೆಯೇ ಆಂತರಿಕ ಸಂಘರ್ಷವಿದೆ’ ಎಂದು ಹೇಳಿ ಶರಣಾರಾದರು.

ಆದರೆ ಇವರು ಯಾವುದೇ ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ಒಪ್ಪಿಸಲಿಲ್ಲ. ಶಸ್ತ್ರಾಸ್ತ್ರ ರಹಿತರಾಗಿ ಶರಣಾದರು. ಕರ್ನಾಟಕದಲ್ಲಿ ಕೂಡ ಶಸ್ತ್ರಾಸ್ತ್ರ ರಹಿತರಾಗಿ ಇತ್ತೀಚೆಗೆ 6 ನಕ್ಸಲರು ಸಿಎಂ ಮುಂದೆ ಶರಣಾಗಿದ್ದನ್ನು ಬಿಜೆಪಿ ಇಲ್ಲಿ ಟೀಕಿಸುತ್ತಿರುವುದು ಗಮನಾರ್ಹ.

ಶರಣಾದ ನಕ್ಸಲೀಯರಿಗೆ ತಲಾ 25 ಸಾವಿರ ರು. ನೀಡಲಾಗಿದ್ದು, ಸರ್ಕಾರ ನೀತಿಯಂತೆ ಇನ್ನಷ್ಟು ಪುನರ್ವಸತಿ ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ. ಕಳೆದ ವರ್ಷ ಬಸ್ತರ್‌ ಪ್ರದೇಶದಲ್ಲಿ 792 ನಕ್ಸಲರು ಶರಣಾಗಿದ್ದರು.

ನಕ್ಸಲರನ್ನು ವಿಧಾನಸೌಧಕ್ಕೆ ಕರೆತರದಿರುವುದೇ ಪುಣ್ಯ: ಜೆಡಿಎಸ್‌ ನಾಯಕ ಜ್ಯೋತಿ ಪ್ರಕಾಶ ಮಿರ್ಜಿ

43 ಲಕ್ಷ ರು. ಇನಾಮು ಇತ್ತು:

ಈ 9 ನಕ್ಸಲರ ಪತ್ತೆಗೆ ಪೊಲೀಸರು 43 ಲಕ್ಷ ರು. ಇನಾಮು ಘೋಷಿಸಿದ್ದರು. ಶರಣಾದ ನಕ್ಸಲರ ಪೈಕಿ ರಾನ್ಸಾಯಿ ಅಲಿಯಾಸ್‌ ಓಯಂ ಬುಸ್ಕಾ, ಪ್ರದೀಪ್ ಅಲಿಯಾಸ್‌ ರವ್ವ ರಾಕೇಶ್‌ ತಲೆಗೆ ತಲಾ 8 ಲಕ್ಷ ರು. ಘೋಷಣೆಯಾಗಿತ್ತು. ಉಳಿದಂತೆ ನಾಲ್ವರ ಕೇಡರ್‌ಗಳ ತಲೆಗೆ 5 ಲಕ್ಷ ರು. ಮಹಿಳಾ ನಕ್ಸಲ್ ತಲೆಗೆ 3 ಲಕ್ಷ ರು., ಮಹಿಳೆ ಸೇರಿದಂತೆ ಇನ್ನಿಬ್ಬರ ಇಬ್ಬರ ತಲೆಗೆ 2 ಲಕ್ಷ ರು. ಬಹುಮಾನ ಘೋಷಣೆಯಾಗಿತ್ತು. 2007ರ ನಾರಾಯಣಪುರ, ರಾಣಿಬೋಡ್ಲಿ, 2017 ಮತ್ತು 2020ರಲ್ಲಿ ಸುಕ್ಮಾದಲ್ಲಿ ನಡೆದಿದ್ದ ಭದ್ರತಾ ಸಿಬ್ಬಂದಿಗಳ ಮೇಲಿನ ದಾಳಿ ಪ್ರಕರಣದಲ್ಲಿ ಈ ನಕ್ಸಲರು ಭಾಗಿಯಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?