75 ವರ್ಷದಲ್ಲಿ ಮೊದಲ ಬಾರಿ, 30 ನಿಮಿಷ ತಡವಾಗಿ ಆರಂಭವಾಗುತ್ತೆ Republic Day ಪರೇಡ್!

Published : Jan 21, 2022, 09:35 AM ISTUpdated : Jan 21, 2022, 10:24 AM IST
75 ವರ್ಷದಲ್ಲಿ ಮೊದಲ ಬಾರಿ, 30 ನಿಮಿಷ ತಡವಾಗಿ ಆರಂಭವಾಗುತ್ತೆ Republic Day ಪರೇಡ್!

ಸಾರಾಂಶ

* ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂದರ್ಭದಲ್ಲಿ ಗಣರಾಜ್ಯೋತ್ಸವ * 75 ವರ್ಷದಲ್ಲಿ ಮೊದಲ ಬಾರಿ, 30 ನಿಮಿಷ ತಡವಾಗಿ ಆರಂಭವಾಗುತ್ತೆ Republic Day ಪರೇಡ್ * ಈ ವರ್ಷ 10.30ಕ್ಕೆ ಆರಂಭವಾಗಲಿದೆ ಐತಿಹಾಸಿಕ ಪರೇಡ್

ನವದೆಹಲಿ(ಜ.21): ಈ ಬಾರಿ ಗಣರಾಜ್ಯೋತ್ಸವ ಪರೇಡ್ ನಿಗದಿತ ಸಮಯಕ್ಕಿಂತ ಅರ್ಧ ಗಂಟೆ ತಡವಾಗಿ ಆರಂಭವಾಗಲಿದೆ. 75 ವರ್ಷಗಳಲ್ಲಿ ಇದೇ ಮೊದಲ ಬಾರಿ ಮೆರವಣಿಗೆ ತಡವಾಗಿ ಆರಂಭವಾಗಲಿದೆ. ಕೊರೋನಾ ಪ್ರೋಟೋಕಾಲ್ (ಕೋವಿಡ್ 19) ಮತ್ತು ಶ್ರದ್ಧಾಂಜಲಿ ಸಭೆಯಿಂದಾಗಿ ಮೆರವಣಿಗೆ ವಿಳಂಬವಾಗಿ ಪ್ರಾರಂಭವಾಗಲಿದೆ. ಪ್ರತಿ ವರ್ಷ ಗಣರಾಜ್ಯೋತ್ಸವ ಪರೇಡ್ ಬೆಳಗ್ಗೆ 10 ಗಂಟೆಗೆ ಆರಂಭವಾಗುತ್ತಿತ್ತು ಆದರೆ ಈ ವರ್ಷ 10.30ಕ್ಕೆ ಆರಂಭವಾಗಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. COVID-19 ನ ಪ್ರೋಟೋಕಾಲ್‌ನಿಂದಾಗಿ ವಿಳಂಬವಾಗಿದೆ ಎಂದು ಅವರು ಹೇಳಿದ್ದಾರೆ. ಪರೇಡ್ ಪ್ರಾರಂಭವಾಗುವ ಮೊದಲು, ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಾಣ ಕಳೆದುಕೊಂಡ ಭದ್ರತಾ ಸಿಬ್ಬಂದಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ.

Republic Day Tableau: ಆಯ್ಕೆ ಹೇಗೆ.? ತಿರಸ್ಕಾರಕ್ಕೆ ಕಾರಣಗಳು ಏನೇನು?

ಕಳೆದ ವರ್ಷದಂತೆ 90 ನಿಮಿಷಗಳ ಕಾಲ ಮೆರವಣಿಗೆ ನಡೆಯಲಿದೆ. ಇಂಡಿಯಾ ಗೇಟ್ ಬಳಿ ಇರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಬಳಿಕ ಕೆಂಪುಕೋಟೆ ತಲುಪಲಿದ್ದಾರೆ. ಸಾಂಸ್ಕೃತಿಕ ವೈವಿಧ್ಯತೆ, ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಯನ್ನು ಪ್ರತಿನಿಧಿಸುವ ಕೋಷ್ಟಕವನ್ನು ಈ ಸಮಯದಲ್ಲಿ ಪ್ರದರ್ಶಿಸಲಾಗುತ್ತದೆ. ಫ್ಲೋಟ್‌ಗಳು ಕೆಂಪು ಕೋಟೆಗೆ ಹೋಗುತ್ತವೆ ಮತ್ತು ಅಲ್ಲಿ ಸಾರ್ವಜನಿಕ ಪ್ರದರ್ಶನಕ್ಕೆ ಇಡಲಾಗುತ್ತದೆ, ಆದರೆ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ತಂಡಗಳು ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಉಳಿಯುತ್ತವೆ. COVID-19 ಗೆ ಸಂಬಂಧಿಸಿದ ನಿರ್ಬಂಧಗಳ ಕಾರಣದಿಂದಾಗಿ, ಗಣರಾಜ್ಯೋತ್ಸವದಂದು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡುವ ಕಲಾವಿದರು ಯಾರನ್ನೂ ಭೇಟಿಯಾಗಲು ಅನುಮತಿ ಇಲ್ಲ. 

ಯುದ್ಧವಿಮಾನಗಳ ಪರಾಕ್ರಮ ಪ್ರದರ್ಶನ

ಭಾರತದ ಸ್ವಾತಂತ್ರ್ಯದ 75 ವರ್ಷಗಳ ನೆನಪಿಗಾಗಿ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಲಾಗುತ್ತಿದೆ. ಈ ವರ್ಷ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಆಚರಿಸಲಾಗುವ ಗಣರಾಜ್ಯೋತ್ಸವ ಆಚರಣೆ ಅತ್ಯಂತ ಭವ್ಯ ಮತ್ತು ಐತಿಹಾಸಿಕವಾಗಿರುತ್ತದೆ. ದೆಹಲಿಯ ರಾಜಪಥದಲ್ಲಿ ಗಣರಾಜ್ಯೋತ್ಸವ ಪರೇಡ್ ಆಚರಣೆಯಲ್ಲಿ ಇದುವರೆಗೆ ಅತ್ಯಂತ ಭವ್ಯವಾದ ಫ್ಲೈಪಾಸ್ಟ್ ಅನ್ನು ಕಾಣಬಹುದು. ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸುವ ಸಂದರ್ಭದಲ್ಲಿ ಭಾರತೀಯ ವಾಯುಪಡೆಯು 75 ವಿಮಾನಗಳೊಂದಿಗೆ ರಾಜಪಥದಲ್ಲಿ ಫ್ಲೈಪಾಸ್ಟ್ ಮಾಡಲಿದೆ.

Republic Day Karnataka Tableau: ಈ ಬಾರಿ ಸ್ತಬ್ಧಚಿತ್ರದಲ್ಲಿ ಕಮಲಾದೇವಿ ಚಟ್ಟೋಪಾಧ್ಯಾಯ ಚಿತ್ರಣ

ಬಿಗಿ ಭದ್ರತಾ ವ್ಯವಸ್ಥೆ

ದೆಹಲಿ ಪೊಲೀಸರು ರಾಜ್‌ಪಥ್ ಪ್ರದೇಶದಲ್ಲಿ ಹಲವು ಹಂತದ ಭದ್ರತಾ ವ್ಯವಸ್ಥೆಗಳನ್ನು ಮಾಡಿದ್ದಾರೆ. ಈ ಪ್ರದೇಶದಲ್ಲಿ 300ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಜನರ ಮುಖವನ್ನು ಗುರುತಿಸುವ ಸಾಮರ್ಥ್ಯ ಹೊಂದಿದೆ. ಹೊಸದಿಲ್ಲಿಯ ಡಿಸಿಪಿ ದೀಪಕ್ ಯಾದವ್ ಮಾತನಾಡಿ, ಭಯೋತ್ಪಾದಕರ ಬೆದರಿಕೆಯ ಜೊತೆಗೆ ಕರೋನಾ ಸೋಂಕು ಕೂಡ ಭದ್ರತಾ ಪಡೆಗಳಿಗೆ ದೊಡ್ಡ ಸವಾಲಾಗಿದೆ. ಪೊಲೀಸ್ ಸಿಬ್ಬಂದಿಗೆ ಅನುಸರಿಸಬೇಕಾದ ಅಗತ್ಯ ಮುನ್ನೆಚ್ಚರಿಕೆಗಳ ಬಗ್ಗೆ ಮಾಹಿತಿ ನೀಡಲಾಗಿದೆ. ನವದೆಹಲಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಮೋದಿಗೆ ಗಣರಾಜ್ಯ ದಿನದ ವೇಳೆ ಉಗ್ರ ಬೆದರಿಕೆ: ಹೈ ಅಲರ್ಟ್‌

 ಗಣರಾಜ್ಯೋತ್ಸವದ ದಿನದಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರ ಗಣ್ಯರ ಜೀವಕ್ಕೆ ಬೆದರಿಕೆ ಒಡ್ಡುವ ಸಂಭಾವ್ಯ ಭಯೋತ್ಪಾದಕ ಸಂಚಿನ ಬಗ್ಗೆ ಗುಪ್ತಚರ ಸಂಸ್ಥೆಗೆ ಎಚ್ಚರಿಕೆ ಮಾಹಿತಿ ಸಿಕ್ಕಿದೆ.

ಈ ಬಾರಿಯ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಆದಿಯಾಗಿ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಮೋದಿ ಸೇರಿದಂತೆ ಈ ನಾಯಕರ ಜೀವಕ್ಕೆ ಅಪಾಯವಿರುವುದರ ಕುರಿತು ಗುಪ್ತಚರ ಸಂಸ್ಥೆಗಳು ಮಾಹಿತಿ ಸಂಗ್ರಹಿಸಿವೆ. ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನ ಮೂಲಕ ಗುಂಪುಗಳಿಂದ ಬೆದರಿಕೆ ಬಂದಿದೆ ಎಂದು ಈ ಸಂಸ್ಥೆಗಳ ಟಿಪ್ಪಣಿಯಲ್ಲಿ ಉಲ್ಲೇಖಿಸಲಾಗಿದೆ. ಗಣ್ಯರನ್ನು ಗುರಿಯಾಗಿಸಿಕೊಂಡು ಸಾರ್ವಜನಿಕ ಸಭೆಗಳು ಮತ್ತು ಜನನಿಬಿಡ ಸ್ಥಳಗಳಲ್ಲಿ ವಿದ್ವಂಸಕ ಕೃತ್ಯ ಎಸಗುವ ಉದ್ದೇಶ ಹೊಂದಿವೆ ಎಂದು ಹೇಳಲಾಗಿದೆ.

ಈ ಗುಂಪುಗಳು ಡ್ರೋನ್‌ ಮೂಲಕ ದಾಳಿ ನಡೆಸುವ ಸಾಧ್ಯತೆ ಸಹ ಇದೆ. ಲಷ್ಕರ್‌-ಎ-ತೊಯ್ಬಾ, ದಿ ರೆಸಿಸ್ಟೆನ್ಸ್‌ ಫೋರ್ಸ್‌, ಜೈಶ್‌-ಎ-ಮೊಹಮ್ಮದ್‌ನಂತಹ ಭಯೋತ್ಪಾದಕ ಗುಂಪುಗಳು ಇದರ ಹಿಂದೆ ಇರಬಹುದು. ಪಾಕಿಸ್ತಾನಿ ಮೂಲದ ಖಲಿಸ್ತಾನಿ ಗುಂಪುಗಳು ಪಂಜಾಬ್‌ನಲ್ಲಿ ಭಯೋತ್ಪಾದನೆಯನ್ನು ಪುನಶ್ಚೇತನಗೊಳಿಸಲು ಪ್ರಯತ್ನಿಸುತ್ತಿವೆ ಎಂದು ಗುಪ್ತಚರ ಸಂಸ್ಥೆಗಳು ತಿಳಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂಡಿಗೋ ಸಿಇಒ ವಜಾಕ್ಕೆ ಕೇಂದ್ರ ಸೂಚನೆ ಸಾಧ್ಯತೆ
ಗುಲಾಮಿ ಮನಃಸ್ಥಿತಿ ಬಿಡಲು 2035ರ ಗಡುವು : ಮೋದಿ