
ನವದೆಹಲಿ(ಫೆ.28): ರೈತರ ಆದಾಯ ಹೆಚ್ಚಿಸಲು ಹಾಗೂ ಕೃಷಿ ಉತ್ಪನ್ನಗಳ ರಫ್ತಿಗೆ ಉತ್ತೇಜನ ನೀಡುವ ‘ಒಂದು ಜಿಲ್ಲೆ ಒಂದು ಉತ್ಪನ್ನ ಉತ್ತೇಜನ’ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರ ಉತ್ಪನ್ನಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಕರ್ನಾಟಕದ 31 ಜಿಲ್ಲೆಗಳು ಸೇರಿದಂತೆ ದೇಶದೆಲ್ಲೆಡೆಯ 728 ಜಿಲ್ಲೆಗಳಲ್ಲಿ ತಲಾ ಒಂದೊಂದು ಬೆಳೆಗಳ ಪ್ರಚಾರಕ್ಕೆ ಸರ್ಕಾರ ಆದ್ಯತೆ ನೀಡಲಿದೆ.
ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಭಾರತೀಯ ಕೃಷಿ ಸಂಶೋಧನಾ ಮಂಡಳಿಗಳಿಂದ ಮಾಹಿತಿಯನ್ನು ಪಡೆದು ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಕೃಷಿ, ಹೈನುಗಾರಿಕೆ, ಪಶುಸಂಗೋಪನೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ಚಲಚರ ಸಾಕಾಣಿಕೆ ಹಾಗೂ ಇತರ ವಲಯಗಳಿಂದ ಉತ್ಪನ್ನಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.
ಉದಾಹರಣೆಗೆ ಭತ್ತವನ್ನು 40 ಜಿಲ್ಲೆಗಳಲ್ಲಿ ಉತ್ತೇಜಿಸಲಾಗುವುದು. ಗೋಧಿಯನ್ನು 5 ಜಿಲ್ಲೆಗಳಲ್ಲಿ , ಬೇಳೆಕಾಳು- ದವಸ- ಧಾನ್ಯಗಳನ್ನು 25 ಜಿಲ್ಲೆಗಳಲ್ಲಿ, ವಾಣಿಜ್ಯ ಬೆಳೆಗಳನ್ನು 22 ಜಿಲ್ಲೆಗಳಲ್ಲಿ ಪ್ರೋತ್ಸಾಹಿಸಲಾಗುವುದು ಎಂದು ಸಚಿವಾಲಯ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ