ಮನೆಯಲ್ಲೇ 15 ಕೋಟಿ ಪತ್ತೆ, ಜಸ್ಟೀಸ್‌ ಯಶವಂತ್‌ ವರ್ಮಾ ವಿರುದ್ಧ ಆಂತರಿಕ ತನಿಕೆ ಆರಂಭಿಸಿದ ಸುಪ್ರೀಂ ಕೋರ್ಟ್‌!

Published : Mar 21, 2025, 03:02 PM ISTUpdated : Mar 21, 2025, 03:08 PM IST
ಮನೆಯಲ್ಲೇ 15 ಕೋಟಿ ಪತ್ತೆ, ಜಸ್ಟೀಸ್‌ ಯಶವಂತ್‌ ವರ್ಮಾ ವಿರುದ್ಧ ಆಂತರಿಕ ತನಿಕೆ ಆರಂಭಿಸಿದ ಸುಪ್ರೀಂ ಕೋರ್ಟ್‌!

ಸಾರಾಂಶ

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ನಗದು ರಾಶಿ ಪತ್ತೆಯಾದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಆಂತರಿಕ ತನಿಖೆ ಆರಂಭಿಸಿದೆ. ಅವರ ವರ್ಗಾವಣೆಗೆ ಅಲಹಾಬಾದ್ ಹೈಕೋರ್ಟ್ ಬಾರ್ ಅಸೋಸಿಯೇಷನ್ ವಿರೋಧ ವ್ಯಕ್ತಪಡಿಸಿದೆ.

ನವದೆಹಲಿ (ಮಾ.21): ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ನಗದು ರಾಶಿ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆಂತರಿಕ ತನಿಖೆ ಆರಂಭಿಸಿದೆ. ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಅವರಿಂದಲೂ ಸುಪ್ರೀಂ ಕೋರ್ಟ್ ವರದಿ ಕೇಳಿದೆ. ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಲೆಕ್ಕಕ್ಕೆ ಸಿಗದ ಬೃಹತ್ ನಗದು ರಾಶಿ ಪತ್ತೆಯಾಗಿದ್ದು, ಶುಕ್ರವಾರ ಸುಪ್ರೀಂ ಕೋರ್ಟ್ ಅವರ ವಿರುದ್ಧ ಆಂತರಿಕ ತನಿಖೆ ಆರಂಭಿಸಿದೆ. ಅಂದಾಜು 15 ಕೋಟಿ ಮೌಲ್ಯದ ನಗದು ಪತ್ತೆಯಾಗಿದೆ ಎಂದು ವರದಿಯಾಗಿದೆ. ಈ ನಡುವೆ ಯಶವಂತ್‌ ವರ್ಮಾ ಅವರನ್ನು ದೆಹಲಿ ಹೈಕೋರ್ಟ್ ನಿಂದ ಅಲಹಾಬಾದ್ ಹೈಕೋರ್ಟ್ ಗೆ ವರ್ಗಾವಣೆ ಮಾಡಲಾಗಿದೆ. ಆದರೆ, ಈ ಕ್ರಮಕ್ಕೆ ಅಲಹಾಬಾದ್‌ ಹೈಕೋರ್ಟ್‌ ಬಾರ್‌ ಅಸೋಸಿಯೇಷನ್‌ ಆಕ್ರೋಶ ವ್ಯಕ್ತಪಡಿಸಿದ್ದು, ಇಂಥ ಭ್ರಷ್ಟಾಚಾರ ಸಹಿಸಲು ಸಾಧ್ಯವಿಲ್ಲ. ಅಲಹಾಬಾದ್ ಹೈಕೋರ್ಟ್‌ ಡಸ್ಟ್‌ ಬಿನ್‌ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಕಳೆದ ವಾರ ದೆಹಲಿಯ ನ್ಯಾಯಮೂರ್ತಿ ನಿವಾಸಕ್ಕೆ ಬೆಂಕಿ ಬಿದ್ದಾಗ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದರು. ಈ ವೇಳೆ ಅವರ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ.

ಲೆಕ್ಕಕ್ಕೆ ಸಿಗದ ಹಣದ ಮಾಹಿತಿ ಬಂದ ನಂತರ, ಸಿಜೆಐ ಸಂಜೀವ್ ಖನ್ನಾ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ನ್ಯಾಯಮೂರ್ತಿ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ಮರಳಿ ವರ್ಗಾಯಿಸಲು ನಿರ್ಧರಿಸಿತು. 2021ರ ಅಕ್ಟೋಬರ್‌ನಲ್ಲಿ ಅವರು ಅಲಹಾಬಾದ್‌ ಹೈಕೋರ್ಟ್‌ನಿಂದ ದೆಹಲಿ ಹೈಕೋರ್ಟ್‌ಗೆ ವರ್ಗಾವಣೆ ಆಗಿದ್ದರು.

Allahabad High Court | ಸ್ತನಗಳನ್ನು ಸ್ಪರ್ಶಿಸುವುದು, ಪೈಜಾಮಾ ದಾರ ಎಳೆಯುವುದು ಅತ್ಯಾಚಾರ ಯತ್ನವಲ್ಲ: ಕೋರ್ಟ್!

ಶುಕ್ರವಾರ ಬೆಳಿಗ್ಗೆ ನಡೆದ ಎಲ್ಲಾ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಪೂರ್ಣ ನ್ಯಾಯಾಲಯದ ಸಭೆಯಲ್ಲಿ, ದಂಡನಾತ್ಮಕ ವರ್ಗಾವಣೆ ಸಾಕಾಗುವುದಿಲ್ಲ ಮತ್ತು ನ್ಯಾಯಾಧೀಶರ ವಿರುದ್ಧ ಕೆಲವು ಕಾಂಕ್ರೀಟ್ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಸೂಚಿಸಲಾಯಿತು ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ತರುಣ್‌ ಬೇಲ್‌ ಅರ್ಜಿ ವಜಾ, ಆರ್ಥಿಕ ಅಪರಾಧಗಳ ತಡೆ ವಿಶೇಷ ಕೋರ್ಟ್‌ ಆದೇಶ

ನಂತರ ಸುಪ್ರೀಂ ಕೋರ್ಟ್ ಆಂತರಿಕ ತನಿಖೆಗೆ ಸರ್ವಾನುಮತದಿಂದ ಒಪ್ಪಿಗೆ ನೀಡಿತು, ವರ್ಗಾವಣೆ ಇದರಲ್ಲಿ ಮೊದಲ ಹೆಜ್ಜೆಯಾಗಿದೆ. ಇದರ ನಡುವ, ನ್ಯಾಯಮೂರ್ತಿ ವರ್ಮಾ ಇಂದು ನ್ಯಾಯಾಲಯಕ್ಕೆ ಹಾಜರಾಗಲಿಲ್ಲ ಮತ್ತು ಅವರ ನ್ಯಾಯಾಲಯದ ಸಿಬ್ಬಂದಿ ಅವರು ರಜೆಯಲ್ಲಿದ್ದಾರೆ ಎಂದು ಮುಕ್ತ ನ್ಯಾಯಾಲಯದಲ್ಲಿ ತಿಳಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..
ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್