
ತಿರುವನಂತಪುರಂ(ಡಿ.14): ಹೃದಯ ವಿದ್ರಾವಕ ಘಟನೆಯೊಂದು ಕೇರಳದಲ್ಲಿ ಬೆಳಕಿಗೆ ಬಂದಿದ್ದು, ತನ್ನ 27 ದಿನದ ಮಗುವನ್ನು ಗೋಡೆಗೆ ತಲೆಗೆ ಹೊಡೆದು ಕೊಂದ ತಾಯಿಯೊಬ್ಬಳನ್ನು ಬಂಧಿಸಲಾಗಿದೆ. ಪೊಲೀಸರು ಈ ಮಾಹಿತಿ ನೀಡಿದ್ದಾರೆ. ಅವಧಿಪೂರ್ವವಾಗಿ ಜನಿಸಿದ ಮಗು ಅನಾರೋಗ್ಯದ ಕಾರಣ ನಿರಂತರವಾಗಿ ಅಳುತ್ತಿತ್ತು, ಈ ಕಾರಣಕ್ಕಾಗಿ 21 ವರ್ಷದ ತಾಯಿ ಮಗುವನ್ನು ಕೊಂದು ಹಾಕಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಡಿಸೆಂಬರ್ 9 ರಂದು ಈ ಘಟನೆ ನಡೆದಿದ್ದು, ಅದೇ ದಿನ ರಾತ್ರಿ 11 ಗಂಟೆಗೆ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಅವರು ಹೇಳಿದರು. ವೈದ್ಯರಿಗೆ ತೋರಿಸಿದ ನಂತರ ಮಗುವನ್ನು ಮನೆಗೆ ಕರೆತರಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ, ಆದರೆ ನಂತರ ದಿನದಲ್ಲಿ ಮಗುವಿನ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿತು ಮತ್ತು ತಾಲೂಕಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವನು ಸಾವನ್ನಪ್ಪಿದ್ದಾನೆ ಎಂದಿದ್ದಾರೆ.
ಇದಾದ ಬಳಿಕ ಆಶ್ರಮ ನಡೆಸುತ್ತಿರುವ ಫಾದರ್ ಜೋಜಿ ಥಾಮಸ್ ಹೇಳಿಕೆ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ ಈ ಆಶ್ರಮದ ಅಡುಗೆಮನೆಯಲ್ಲಿ ಕೆಲಸ ಮಾಡುತ್ತಾಳೆ ಮತ್ತು ತನ್ನ 45 ವರ್ಷದ ಗೆಳೆಯನೊಂದಿಗೆ ವಾಸಿಸುತ್ತಾಳೆ. ಡಿಸೆಂಬರ್ 10 ರಂದು ಶಿಶುವಿನ ಮರಣೋತ್ತರ ಪರೀಕ್ಷೆಯ ನಂತರ, ಮಗುವಿನ ತಲೆಯ ಮೇಲೆ ಗಾಯದ ಗುರುತುಗಳಿವೆ ಎಂದು ವೈದ್ಯರು ಪೊಲೀಸರಿಗೆ ತಿಳಿಸಿದರು. ಇದಾದ ನಂತರ ಅಧಿಕಾರಿ ಮಗುವಿನ ಪೋಷಕರನ್ನು ಪ್ರಶ್ನಿಸಿದ್ದಾರೆ.
ವಿಚಾರಣೆ ನಡೆಸಿದಾಗ, ಮಹಿಳೆ ಮತ್ತು ಆಕೆಯ ಪ್ರಿಯಕರ ಫೋನ್ ಮೂಲಕ ಸಂಪರ್ಕ ಹೊಂದಿದ್ದರು ಮತ್ತು ಅವರು ಆಶ್ರಮದಲ್ಲಿ ಒಟ್ಟಿಗೆ ವಾಸಿಸಲು ಪ್ರಾರಂಭಿಸಿದರು ಎಂದು ಪೊಲೀಸರಿಗೆ ತಿಳಿದುಬಂದಿದೆ. ಮಗುವಿನ ತಂದೆಗೆ ಈಗಾಗಲೇ ಮದುವೆಯಾಗಿದ್ದು, ಮಹಿಳೆಗೆ ಈ ವಿಷಯ ತಿಳಿದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಹೆಚ್ಚಿನ ವಿಚಾರಣೆಯಲ್ಲಿ ಮಹಿಳೆಯೇ ತನ್ನ ಮಗುವನ್ನು ಕೊಂದಿದ್ದಾಳೆ ಎಂದು ತಿಳಿದುಬಂದಿದೆ, ನಂತರ ಅವಳನ್ನು ಬಂಧಿಸಲಾಯಿತು ಎಂದು ಅವರು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ