
ಅಹಮದಾಬಾದ್(ಡಿ.31): ಭರೂಚ್ನ 121 ಹಳ್ಳಿಗಳನ್ನು ಪರಿಸರ ಸೂಕ್ಷ್ಮ ವಲಯಕ್ಕೆ ಸೇರಿಸಿದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಬೇಸತ್ತು ಮಂಗಳವಾರವಷ್ಟೇ ಬಿಜೆಪಿಗೆ ರಾಜೀನಾಮೆ ನೀಡಿದ್ದ ಆದಿವಾಸಿ ಮುಖಂಡ ಹಾಗೂ ಬಿಜೆಪಿ ಸಂಸದ ಮನ್ಸುಖ್ ವಸಾವಾ ಬುಧವಾರ ಏಕಾಏಕಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ಬಿಜೆಪಿಗೆ ನೀಡಿದ ರಾಜೀನಾಮೆ ಹಿಂಪಡೆದಿರುವ ಅವರು, ಲೋಕಸಭೆ ಸದಸ್ಯತ್ವಕ್ಕೆ ನೀಡಲು ಉದ್ದೇಶಿಸಿದ್ದ ರಾಜೀನಾಮೆ ನಿರ್ಧಾರದಿಂದಲೂ ಹಿಂದೆ ಸರಿದಿರುವುದಾಗಿ ಹೇಳಿದ್ದಾರೆ.
ಬುಧವಾರ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನಾನು ಪರಿಸರ ವಲಯ ವಿವಾದಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡಿರಲಿಲ್ಲ. ಆರೋಗ್ಯದ ದೃಷ್ಟಿಯಿಂದ ರಾಜೀನಾಮೆ ನೀಡಿದ್ದೆ. ನನಗೆ ತುಂಬಾ ಬೆನ್ನು ಹಾಗೂ ಕುತ್ತಿಗೆ ನೋವಿದೆ. ಒಮ್ಮೆ ನಾನು ರಾಜೀನಾಮೆ ನೀಡಿದರೆ ಉಚಿತ ಚಿಕಿತ್ಸೆ ಸಿಗದು.
ಸಂಸದನಾಗಿದ್ದರೆ ಮಾತ್ರ ಸಿಗುತ್ತದೆ ಎಂದು ಮುಖಂಡರು ಹೇಳಿದರು. ವಿಶ್ರಾಂತಿ ಪಡೆಯಿರಿ ಎಂದು ಬಿಜೆಪಿ ನಾಯಕರು ಸಲಹೆ ನೀಡಿದ್ದು, ಎಲ್ಲ ಸರಿಪಡಿಸುವುದಾಗಿ ಹೇಳಿದ್ದಾರೆ. ಹೀಗಾಗಿ ರಾಜೀನಾಮೆ ಹಿಂಪಡೆದು ಸಂಸದನಾಗಿ ಮುಂದುವರಿಯುವೆ’ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ