
ನವದೆಹಲಿ(ಫೆ.28): ಕರ್ನಾಟಕ ಸೇರಿದಂತೆ 6 ರಾಜ್ಯಗಳಲ್ಲಿ ಕಳೆದ 24 ತಾಸುಗಳಲ್ಲಿ ದೈನಂದಿನ ಪ್ರಕರಣಗಳು ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಆತ್ಮನಿರ್ಭರ ಭಾರತದ ಮಂತ್ರ ಹಳ್ಳಿ ಹಳ್ಳಿಗೂ ತಲುಪುತ್ತಿದೆ: ಮೋದಿ ಮನ್ ಕೀ ಬಾತ್!
ಇದೇ ವೇಳೆ ಕಳೆದ 2 ವಾರದಿಂದ ಅತಿ ಹೆಚ್ಚು ಪ್ರಕರಣ ದಾಖಲಾಗುತ್ತಿರುವ ಮಹಾರಾಷ್ಟ್ರ, ಪಂಜಾಬ್, ಗುಜರಾತ್, ಮಧ್ಯಪ್ರದೇಶ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ತೆಲಂಗಾಣ, ಜಮ್ಮು-ಕಾಶ್ಮೀರದ ಮುಖ್ಯಕಾರ್ಯದರ್ಶಿಗಳೊಂದಿಗೆ ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಗಳು ಶನಿವಾರ ಸಭೆ ನಡೆಸಿದ್ದು, ತತ್ಕ್ಷಣದಿಂದಲೇ ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
"
ಜಿಲ್ಲಾಮಟ್ಟದಲ್ಲಿ ಶೀಘ್ರ ಸೋಂಕು ಪತ್ತೆ ಮತ್ತು ತಪಾಸಣೆ ಹೆಚ್ಚಳ ಮಾಡುವಂತೆ ಹಾಗೂ ಕೋವಿಡ್ ಮಾರ್ಗಸೂಚಿಗಳು ಕಡ್ಡಾಯವಾಗಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸಭೆಯಲ್ಲಿ ನಿರ್ದೇಶಿಸಲಾಗಿದೆ.
ಈ ನಡುವೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಹೇರಲಾಗಿದ್ದ ಲಾಕ್ಡೌನ್ ಅನ್ನು ಮಾ.8ರವರೆಗೆ ವಿಸ್ತರಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ